ಸುಳ್ಯ: ಸುಳ್ಯ ತಾಲೂಕಿನಲ್ಲಿ ಬಿ ಎಸ್ ಎನ್ ಎಲ್ ನಲ್ಲಿ 17 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಉಪವಿಭಾಗೀಯ ಅಧಿಕಾರಿಯಾಗಿದ್ದ ರಾಮಕೃಷ್ಣ ಭಟ್ ಪಿ. ಸೇವಾ ನಿವೃತ್ತಿಯಾಗುತ್ತಿದ್ದಾರೆ.
ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಪೈರುಪುಣಿಯ ನಾರಾಯಣ ಭಟ್ಟ ಮತ್ತು ತಾಯಿ ಸರಸ್ವತಿಯವರ ಹಿರಿಯ ಪುತ್ರನಾದ ರಾಮಕೃಷ್ಣ ಭಟ್ ಅವರು ಪುತ್ತೂರು ಫಿಲೋಮಿನ ಕಾಲೇಜಿನಲ್ಲಿ ಬಿಯಸ್ಸಿ ಪದವೀಧರರಾದ ಬಳಿಕ 1983 ರಲ್ಲಿ ಅಂದಿನ ಅಂಚೆ ಮತ್ತು ತಂತಿ ಇಲಾಖೆಯಲ್ಲಿ ಟೆಲಿಫೋನ್ ಆಪರೇಟರ್ ಆಗಿ ಕಾರವಾರ ವಿಭಾಗಲ್ಲಿ ನಿಯುಕ್ತರಾದರು. ನಂತರ ಉಡುಪಿಯಲ್ಲಿ 6 ವರ್ಷ, ಕೊಡಗಿನಲ್ಲಿ 5 ವರ್ಷ, ಉಪ್ಪಿನಂಗಡಿಯಲ್ಲಿ 8 ವರ್ಷ ಮತ್ತು ಸುಳ್ಯ ತಾಲೂಕಿನಲ್ಲಿ 17 ವರ್ಷ ಬೇರೆ ಬೇರೆ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಉಪವಿಭಾಗೀಯ ಅಧಿಕಾರಿಯಾಗಿ ನಿವೃತ್ತಿಯಾಗುತ್ತಿದ್ದಾರೆ. ಒಟ್ಟು ಸುಮಾರು 36 ವರ್ಷಗಳ ಕಾಲ ಟೆಲಿಕಾಂ ಸೇವೆಯಲ್ಲಿದ್ದರು. ಈ ನಡುವೆ ಕಳೆದ 10 ವರ್ಷಗಳಿಂದ ತಮ್ಮ ಬಿಡುವಿನ ಸಮಯದಲ್ಲಿ ಆರ್ಟ್ ಆಫ್ ಲಿವಿಂಗ್ ಶಿಕ್ಷಕರಾಗಿಗೂ ತರಬೇತಿ ಶಿಬಿರಗಳನ್ನು ನಡೆಸುತ್ತಿದ್ದಾರೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…