Advertisement
ರಾಷ್ಟ್ರೀಯ

ಬಿಎಸ್ಎನ್ಎಲ್ ಹಾಗೂ ಎಂಟಿಎನ್ಎಲ್ ಮುಚ್ಚುವುದಿಲ್ಲ – ವಿಲೀನದ ಮೂಲಕ ಅಭಿವೃದ್ಧಿಗೆ ಕೇಂದ್ರ ಸರಕಾರ ಮಹತ್ವದ ನಿರ್ಧಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನವದೆಹಲಿ: ಬಿ ಎಸ್ ಎನ್ ಎಲ್ ಹಾಗೂ ಎಂ ಟಿ ಎನ್ ಎಲ್ ನಷ್ಟದಲ್ಲಿ ಮುನ್ನಡೆಯುವುದನ್ನು ತಪ್ಪಿಸಲು ಕೇಂದ್ರ ಸರಕಾರ ಮಹತ್ವದ ನಿರ್ಧಾರಕ್ಕೆ ಬಂದಿದ್ದು ಈ ಎರಡೂ ಸಂಸ್ಥೆಗಳನ್ನು ಮುಚ್ಚುವುದಿಲ್ಲ, ಬದಲಾಗಿ ವಿಲೀನಗೊಳಿಸಿ ಅಭಿವೃದ್ಧಿಗೊಳಿಸುವ ನಿರ್ಧಾರಕ್ಕೆ ಬಂದಿದೆ. ಎರಡೂ ಸಂಸ್ಥೆಗಳನ್ನು ಪುನರುಜ್ಜೀವನಗೊಳಿಸುವ  ನಾಲ್ಕು ಹಂತದ ಯೋಜನೆಯನ್ನು ಸರಕಾರ  ಪ್ರಕಟಿಸಿದೆ.

Advertisement
Advertisement
Advertisement
Advertisement

ಟೆಲಿಕಾಂ ಸಂಸ್ಥೆಗಳಾದ ಎಂಟಿಎನ್ಎಲ್ ಮತ್ತು ಬಿಎಸ್ಎನ್ಎಲ್ ಅನ್ನು  ವಿಲೀನಗೊಳಿಸಲು ಸರಕಾರ ಬುಧವಾರ ನಿರ್ಧರಿಸಿದೆ. ಪೂರ್ಣ ವಿಲೀನದವರೆಗೆ ಎಂಟಿಎನ್ಎಲ್ – ಬಿಎಸ್ಎನ್ಎಲ್ ನ ಒಂದು ಘಟಕವಾಗಿ ಕಾರ್ಯನಿರ್ವಹಿಸಲಿದೆ. ಇದರ ಜೊತೆಗೆ ಪುನರುಜ್ಜೀವನಗೊಳಿಸುವ ಪ್ಯಾಕೇಜ್ ಕೂಡಾ ಮಾಡಿದೆ. ಪ್ಯಾಕೇಜ್ ಗಳಲ್ಲಿ ಪ್ರಮುಖವಾಗಿ  ಬಾಂಡ್ ಸಂಗ್ರಹಿಸುವುದು, ಹಣಗಳಿಸುವ ಆಸ್ತಿ ಮತ್ತು ಉದ್ಯೋಗಿಗಳಿಗೆ ಸ್ವಯಂಪ್ರೇರಿತ ನಿವೃತ್ತಿ ಯೋಜನೆ  ಸೇರಿವೆ. ಇದರ ಜೊತೆಗೆ ಸಂಸ್ಥೆಗಳ ಅಭಿವೃದ್ಧಿಗೆ ಸರಕಾರವು ಒಟ್ಟು 29,937 ಕೋಟಿ ರೂಪಾಯಿಗಳನ್ನು ತೊಡಗಿಸಲಿದೆ ಎಂದು ಹೇಳಿದರು. 38,000 ಕೋಟಿ ರೂ. ಮೌಲ್ಯದ ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ಆಸ್ತಿಗಳನ್ನು ನಾಲ್ಕು ವರ್ಷಗಳಲ್ಲಿ ಹಣವಾಗಿ ಮಾರ್ಪಡಿಸಲಾಗುವುದು. ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ಎರಡಕ್ಕೂ 4 ಜಿ ಸ್ಪೆಕ್ಟ್ರಮ್ ನೀಡಲಾಗುವುದು ಎಂದು ಸಚಿವರು ಘೋಷಿಸಿದರು. ಅಲ್ಲದೆ ಎರಡೂ ಕಂಪನಿಗಳ ಉದ್ಯೋಗಿಗಳಿಗೆ  ವಿ ಆರ್ ಎಸ್ ಪ್ಯಾಕೇಜ್ ನೀಡಲು ಸರಕಾರ ಯೋಜಿಸಿದೆ. ಇದರ ಜೊತೆಗೆ ವೆಚ್ಚವನ್ನು ಕಡಿತಗೊಳಿಸಲು ನೌಕರರಿಗೆ ಸ್ವಯಂಪ್ರೇರಿತ ನಿವೃತ್ತಿ ನೀಡಲಾಗುವುದು ಎಂದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಫಿ ಉತ್ಪಾದನೆಯಲ್ಲಿ ಭಾರತವು  ಏಳನೇ ದೇಶ |

ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ…

9 hours ago

ತೊಗರಿ ಖರೀದಿಗೆ ನೋಂದಣಿ ಮಾಡಿಸುವಂತೆ ಕಲಬುರ್ಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮನವಿ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ.…

9 hours ago

ಚಿಕ್ಕಮಗಳೂರು ಕಾಡ್ಗಿಚ್ಚಿನಿಂದ ಕಾಫಿ ತೋಟ, ಅರಣ್ಯ ಪ್ರದೇಶ ನಾಶ | ಡ್ರೋನ್‌ ಮೊರೆ ಹೋಗಿತ್ತಿರುವ ಅರಣ್ಯ ಇಲಾಖೆ |

ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ.…

9 hours ago

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆ | ಹವಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…

19 hours ago

ಕುಂಭಸ್ನಾನ ಮತ್ತು ವಿಜ್ಞಾನ

ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…

19 hours ago

ಹವಾಮಾನ ವರದಿ | 27-02-2025 | ಮಳೆಯ ಸಾಧ್ಯತೆ ಕ್ಷೀಣ | ಒಣ ಹವೆ ಮುಂದುವರಿಕೆ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |

ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.

1 day ago