ರಾಷ್ಟ್ರೀಯ

ಬಿಎಸ್ಎನ್ಎಲ್ ಹಾಗೂ ಎಂಟಿಎನ್ಎಲ್ ಮುಚ್ಚುವುದಿಲ್ಲ – ವಿಲೀನದ ಮೂಲಕ ಅಭಿವೃದ್ಧಿಗೆ ಕೇಂದ್ರ ಸರಕಾರ ಮಹತ್ವದ ನಿರ್ಧಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನವದೆಹಲಿ: ಬಿ ಎಸ್ ಎನ್ ಎಲ್ ಹಾಗೂ ಎಂ ಟಿ ಎನ್ ಎಲ್ ನಷ್ಟದಲ್ಲಿ ಮುನ್ನಡೆಯುವುದನ್ನು ತಪ್ಪಿಸಲು ಕೇಂದ್ರ ಸರಕಾರ ಮಹತ್ವದ ನಿರ್ಧಾರಕ್ಕೆ ಬಂದಿದ್ದು ಈ ಎರಡೂ ಸಂಸ್ಥೆಗಳನ್ನು ಮುಚ್ಚುವುದಿಲ್ಲ, ಬದಲಾಗಿ ವಿಲೀನಗೊಳಿಸಿ ಅಭಿವೃದ್ಧಿಗೊಳಿಸುವ ನಿರ್ಧಾರಕ್ಕೆ ಬಂದಿದೆ. ಎರಡೂ ಸಂಸ್ಥೆಗಳನ್ನು ಪುನರುಜ್ಜೀವನಗೊಳಿಸುವ  ನಾಲ್ಕು ಹಂತದ ಯೋಜನೆಯನ್ನು ಸರಕಾರ  ಪ್ರಕಟಿಸಿದೆ.

Advertisement

ಟೆಲಿಕಾಂ ಸಂಸ್ಥೆಗಳಾದ ಎಂಟಿಎನ್ಎಲ್ ಮತ್ತು ಬಿಎಸ್ಎನ್ಎಲ್ ಅನ್ನು  ವಿಲೀನಗೊಳಿಸಲು ಸರಕಾರ ಬುಧವಾರ ನಿರ್ಧರಿಸಿದೆ. ಪೂರ್ಣ ವಿಲೀನದವರೆಗೆ ಎಂಟಿಎನ್ಎಲ್ – ಬಿಎಸ್ಎನ್ಎಲ್ ನ ಒಂದು ಘಟಕವಾಗಿ ಕಾರ್ಯನಿರ್ವಹಿಸಲಿದೆ. ಇದರ ಜೊತೆಗೆ ಪುನರುಜ್ಜೀವನಗೊಳಿಸುವ ಪ್ಯಾಕೇಜ್ ಕೂಡಾ ಮಾಡಿದೆ. ಪ್ಯಾಕೇಜ್ ಗಳಲ್ಲಿ ಪ್ರಮುಖವಾಗಿ  ಬಾಂಡ್ ಸಂಗ್ರಹಿಸುವುದು, ಹಣಗಳಿಸುವ ಆಸ್ತಿ ಮತ್ತು ಉದ್ಯೋಗಿಗಳಿಗೆ ಸ್ವಯಂಪ್ರೇರಿತ ನಿವೃತ್ತಿ ಯೋಜನೆ  ಸೇರಿವೆ. ಇದರ ಜೊತೆಗೆ ಸಂಸ್ಥೆಗಳ ಅಭಿವೃದ್ಧಿಗೆ ಸರಕಾರವು ಒಟ್ಟು 29,937 ಕೋಟಿ ರೂಪಾಯಿಗಳನ್ನು ತೊಡಗಿಸಲಿದೆ ಎಂದು ಹೇಳಿದರು. 38,000 ಕೋಟಿ ರೂ. ಮೌಲ್ಯದ ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ಆಸ್ತಿಗಳನ್ನು ನಾಲ್ಕು ವರ್ಷಗಳಲ್ಲಿ ಹಣವಾಗಿ ಮಾರ್ಪಡಿಸಲಾಗುವುದು. ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ಎರಡಕ್ಕೂ 4 ಜಿ ಸ್ಪೆಕ್ಟ್ರಮ್ ನೀಡಲಾಗುವುದು ಎಂದು ಸಚಿವರು ಘೋಷಿಸಿದರು. ಅಲ್ಲದೆ ಎರಡೂ ಕಂಪನಿಗಳ ಉದ್ಯೋಗಿಗಳಿಗೆ  ವಿ ಆರ್ ಎಸ್ ಪ್ಯಾಕೇಜ್ ನೀಡಲು ಸರಕಾರ ಯೋಜಿಸಿದೆ. ಇದರ ಜೊತೆಗೆ ವೆಚ್ಚವನ್ನು ಕಡಿತಗೊಳಿಸಲು ನೌಕರರಿಗೆ ಸ್ವಯಂಪ್ರೇರಿತ ನಿವೃತ್ತಿ ನೀಡಲಾಗುವುದು ಎಂದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

6 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

6 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

6 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

17 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago

ರಾಜಸ್ಥಾನದ 30 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ | ರೈತರ ಬ್ಯಾಂಕ್ ಖಾತೆಗಳಿಗೆ ನೇರ ಜಮೆ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…

1 day ago