Advertisement
ರಾಷ್ಟ್ರೀಯ

ಬಿಎಸ್ಎನ್ಎಲ್ ಹಾಗೂ ಎಂಟಿಎನ್ಎಲ್ ಮುಚ್ಚುವುದಿಲ್ಲ – ವಿಲೀನದ ಮೂಲಕ ಅಭಿವೃದ್ಧಿಗೆ ಕೇಂದ್ರ ಸರಕಾರ ಮಹತ್ವದ ನಿರ್ಧಾರ

Share

ನವದೆಹಲಿ: ಬಿ ಎಸ್ ಎನ್ ಎಲ್ ಹಾಗೂ ಎಂ ಟಿ ಎನ್ ಎಲ್ ನಷ್ಟದಲ್ಲಿ ಮುನ್ನಡೆಯುವುದನ್ನು ತಪ್ಪಿಸಲು ಕೇಂದ್ರ ಸರಕಾರ ಮಹತ್ವದ ನಿರ್ಧಾರಕ್ಕೆ ಬಂದಿದ್ದು ಈ ಎರಡೂ ಸಂಸ್ಥೆಗಳನ್ನು ಮುಚ್ಚುವುದಿಲ್ಲ, ಬದಲಾಗಿ ವಿಲೀನಗೊಳಿಸಿ ಅಭಿವೃದ್ಧಿಗೊಳಿಸುವ ನಿರ್ಧಾರಕ್ಕೆ ಬಂದಿದೆ. ಎರಡೂ ಸಂಸ್ಥೆಗಳನ್ನು ಪುನರುಜ್ಜೀವನಗೊಳಿಸುವ  ನಾಲ್ಕು ಹಂತದ ಯೋಜನೆಯನ್ನು ಸರಕಾರ  ಪ್ರಕಟಿಸಿದೆ.

ಟೆಲಿಕಾಂ ಸಂಸ್ಥೆಗಳಾದ ಎಂಟಿಎನ್ಎಲ್ ಮತ್ತು ಬಿಎಸ್ಎನ್ಎಲ್ ಅನ್ನು  ವಿಲೀನಗೊಳಿಸಲು ಸರಕಾರ ಬುಧವಾರ ನಿರ್ಧರಿಸಿದೆ. ಪೂರ್ಣ ವಿಲೀನದವರೆಗೆ ಎಂಟಿಎನ್ಎಲ್ – ಬಿಎಸ್ಎನ್ಎಲ್ ನ ಒಂದು ಘಟಕವಾಗಿ ಕಾರ್ಯನಿರ್ವಹಿಸಲಿದೆ. ಇದರ ಜೊತೆಗೆ ಪುನರುಜ್ಜೀವನಗೊಳಿಸುವ ಪ್ಯಾಕೇಜ್ ಕೂಡಾ ಮಾಡಿದೆ. ಪ್ಯಾಕೇಜ್ ಗಳಲ್ಲಿ ಪ್ರಮುಖವಾಗಿ  ಬಾಂಡ್ ಸಂಗ್ರಹಿಸುವುದು, ಹಣಗಳಿಸುವ ಆಸ್ತಿ ಮತ್ತು ಉದ್ಯೋಗಿಗಳಿಗೆ ಸ್ವಯಂಪ್ರೇರಿತ ನಿವೃತ್ತಿ ಯೋಜನೆ  ಸೇರಿವೆ. ಇದರ ಜೊತೆಗೆ ಸಂಸ್ಥೆಗಳ ಅಭಿವೃದ್ಧಿಗೆ ಸರಕಾರವು ಒಟ್ಟು 29,937 ಕೋಟಿ ರೂಪಾಯಿಗಳನ್ನು ತೊಡಗಿಸಲಿದೆ ಎಂದು ಹೇಳಿದರು. 38,000 ಕೋಟಿ ರೂ. ಮೌಲ್ಯದ ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ಆಸ್ತಿಗಳನ್ನು ನಾಲ್ಕು ವರ್ಷಗಳಲ್ಲಿ ಹಣವಾಗಿ ಮಾರ್ಪಡಿಸಲಾಗುವುದು. ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ಎರಡಕ್ಕೂ 4 ಜಿ ಸ್ಪೆಕ್ಟ್ರಮ್ ನೀಡಲಾಗುವುದು ಎಂದು ಸಚಿವರು ಘೋಷಿಸಿದರು. ಅಲ್ಲದೆ ಎರಡೂ ಕಂಪನಿಗಳ ಉದ್ಯೋಗಿಗಳಿಗೆ  ವಿ ಆರ್ ಎಸ್ ಪ್ಯಾಕೇಜ್ ನೀಡಲು ಸರಕಾರ ಯೋಜಿಸಿದೆ. ಇದರ ಜೊತೆಗೆ ವೆಚ್ಚವನ್ನು ಕಡಿತಗೊಳಿಸಲು ನೌಕರರಿಗೆ ಸ್ವಯಂಪ್ರೇರಿತ ನಿವೃತ್ತಿ ನೀಡಲಾಗುವುದು ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 hour ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

2 hours ago

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…

2 hours ago

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…

2 hours ago

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

17 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

18 hours ago