Advertisement
ರಾಷ್ಟ್ರೀಯ

ಬಿಎಸ್ಎನ್ಎಲ್ ಹಾಗೂ ಎಂಟಿಎನ್ಎಲ್ ಮುಚ್ಚುವುದಿಲ್ಲ – ವಿಲೀನದ ಮೂಲಕ ಅಭಿವೃದ್ಧಿಗೆ ಕೇಂದ್ರ ಸರಕಾರ ಮಹತ್ವದ ನಿರ್ಧಾರ

Share

ನವದೆಹಲಿ: ಬಿ ಎಸ್ ಎನ್ ಎಲ್ ಹಾಗೂ ಎಂ ಟಿ ಎನ್ ಎಲ್ ನಷ್ಟದಲ್ಲಿ ಮುನ್ನಡೆಯುವುದನ್ನು ತಪ್ಪಿಸಲು ಕೇಂದ್ರ ಸರಕಾರ ಮಹತ್ವದ ನಿರ್ಧಾರಕ್ಕೆ ಬಂದಿದ್ದು ಈ ಎರಡೂ ಸಂಸ್ಥೆಗಳನ್ನು ಮುಚ್ಚುವುದಿಲ್ಲ, ಬದಲಾಗಿ ವಿಲೀನಗೊಳಿಸಿ ಅಭಿವೃದ್ಧಿಗೊಳಿಸುವ ನಿರ್ಧಾರಕ್ಕೆ ಬಂದಿದೆ. ಎರಡೂ ಸಂಸ್ಥೆಗಳನ್ನು ಪುನರುಜ್ಜೀವನಗೊಳಿಸುವ  ನಾಲ್ಕು ಹಂತದ ಯೋಜನೆಯನ್ನು ಸರಕಾರ  ಪ್ರಕಟಿಸಿದೆ.

ಟೆಲಿಕಾಂ ಸಂಸ್ಥೆಗಳಾದ ಎಂಟಿಎನ್ಎಲ್ ಮತ್ತು ಬಿಎಸ್ಎನ್ಎಲ್ ಅನ್ನು  ವಿಲೀನಗೊಳಿಸಲು ಸರಕಾರ ಬುಧವಾರ ನಿರ್ಧರಿಸಿದೆ. ಪೂರ್ಣ ವಿಲೀನದವರೆಗೆ ಎಂಟಿಎನ್ಎಲ್ – ಬಿಎಸ್ಎನ್ಎಲ್ ನ ಒಂದು ಘಟಕವಾಗಿ ಕಾರ್ಯನಿರ್ವಹಿಸಲಿದೆ. ಇದರ ಜೊತೆಗೆ ಪುನರುಜ್ಜೀವನಗೊಳಿಸುವ ಪ್ಯಾಕೇಜ್ ಕೂಡಾ ಮಾಡಿದೆ. ಪ್ಯಾಕೇಜ್ ಗಳಲ್ಲಿ ಪ್ರಮುಖವಾಗಿ  ಬಾಂಡ್ ಸಂಗ್ರಹಿಸುವುದು, ಹಣಗಳಿಸುವ ಆಸ್ತಿ ಮತ್ತು ಉದ್ಯೋಗಿಗಳಿಗೆ ಸ್ವಯಂಪ್ರೇರಿತ ನಿವೃತ್ತಿ ಯೋಜನೆ  ಸೇರಿವೆ. ಇದರ ಜೊತೆಗೆ ಸಂಸ್ಥೆಗಳ ಅಭಿವೃದ್ಧಿಗೆ ಸರಕಾರವು ಒಟ್ಟು 29,937 ಕೋಟಿ ರೂಪಾಯಿಗಳನ್ನು ತೊಡಗಿಸಲಿದೆ ಎಂದು ಹೇಳಿದರು. 38,000 ಕೋಟಿ ರೂ. ಮೌಲ್ಯದ ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ಆಸ್ತಿಗಳನ್ನು ನಾಲ್ಕು ವರ್ಷಗಳಲ್ಲಿ ಹಣವಾಗಿ ಮಾರ್ಪಡಿಸಲಾಗುವುದು. ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ಎರಡಕ್ಕೂ 4 ಜಿ ಸ್ಪೆಕ್ಟ್ರಮ್ ನೀಡಲಾಗುವುದು ಎಂದು ಸಚಿವರು ಘೋಷಿಸಿದರು. ಅಲ್ಲದೆ ಎರಡೂ ಕಂಪನಿಗಳ ಉದ್ಯೋಗಿಗಳಿಗೆ  ವಿ ಆರ್ ಎಸ್ ಪ್ಯಾಕೇಜ್ ನೀಡಲು ಸರಕಾರ ಯೋಜಿಸಿದೆ. ಇದರ ಜೊತೆಗೆ ವೆಚ್ಚವನ್ನು ಕಡಿತಗೊಳಿಸಲು ನೌಕರರಿಗೆ ಸ್ವಯಂಪ್ರೇರಿತ ನಿವೃತ್ತಿ ನೀಡಲಾಗುವುದು ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago