Advertisement
ರಾಷ್ಟ್ರೀಯ

ಬಿಎಸ್ಎನ್ಎಲ್ ಹಾಗೂ ಎಂಟಿಎನ್ಎಲ್ ಮುಚ್ಚುವುದಿಲ್ಲ – ವಿಲೀನದ ಮೂಲಕ ಅಭಿವೃದ್ಧಿಗೆ ಕೇಂದ್ರ ಸರಕಾರ ಮಹತ್ವದ ನಿರ್ಧಾರ

Share

ನವದೆಹಲಿ: ಬಿ ಎಸ್ ಎನ್ ಎಲ್ ಹಾಗೂ ಎಂ ಟಿ ಎನ್ ಎಲ್ ನಷ್ಟದಲ್ಲಿ ಮುನ್ನಡೆಯುವುದನ್ನು ತಪ್ಪಿಸಲು ಕೇಂದ್ರ ಸರಕಾರ ಮಹತ್ವದ ನಿರ್ಧಾರಕ್ಕೆ ಬಂದಿದ್ದು ಈ ಎರಡೂ ಸಂಸ್ಥೆಗಳನ್ನು ಮುಚ್ಚುವುದಿಲ್ಲ, ಬದಲಾಗಿ ವಿಲೀನಗೊಳಿಸಿ ಅಭಿವೃದ್ಧಿಗೊಳಿಸುವ ನಿರ್ಧಾರಕ್ಕೆ ಬಂದಿದೆ. ಎರಡೂ ಸಂಸ್ಥೆಗಳನ್ನು ಪುನರುಜ್ಜೀವನಗೊಳಿಸುವ  ನಾಲ್ಕು ಹಂತದ ಯೋಜನೆಯನ್ನು ಸರಕಾರ  ಪ್ರಕಟಿಸಿದೆ.

ಟೆಲಿಕಾಂ ಸಂಸ್ಥೆಗಳಾದ ಎಂಟಿಎನ್ಎಲ್ ಮತ್ತು ಬಿಎಸ್ಎನ್ಎಲ್ ಅನ್ನು  ವಿಲೀನಗೊಳಿಸಲು ಸರಕಾರ ಬುಧವಾರ ನಿರ್ಧರಿಸಿದೆ. ಪೂರ್ಣ ವಿಲೀನದವರೆಗೆ ಎಂಟಿಎನ್ಎಲ್ – ಬಿಎಸ್ಎನ್ಎಲ್ ನ ಒಂದು ಘಟಕವಾಗಿ ಕಾರ್ಯನಿರ್ವಹಿಸಲಿದೆ. ಇದರ ಜೊತೆಗೆ ಪುನರುಜ್ಜೀವನಗೊಳಿಸುವ ಪ್ಯಾಕೇಜ್ ಕೂಡಾ ಮಾಡಿದೆ. ಪ್ಯಾಕೇಜ್ ಗಳಲ್ಲಿ ಪ್ರಮುಖವಾಗಿ  ಬಾಂಡ್ ಸಂಗ್ರಹಿಸುವುದು, ಹಣಗಳಿಸುವ ಆಸ್ತಿ ಮತ್ತು ಉದ್ಯೋಗಿಗಳಿಗೆ ಸ್ವಯಂಪ್ರೇರಿತ ನಿವೃತ್ತಿ ಯೋಜನೆ  ಸೇರಿವೆ. ಇದರ ಜೊತೆಗೆ ಸಂಸ್ಥೆಗಳ ಅಭಿವೃದ್ಧಿಗೆ ಸರಕಾರವು ಒಟ್ಟು 29,937 ಕೋಟಿ ರೂಪಾಯಿಗಳನ್ನು ತೊಡಗಿಸಲಿದೆ ಎಂದು ಹೇಳಿದರು. 38,000 ಕೋಟಿ ರೂ. ಮೌಲ್ಯದ ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ಆಸ್ತಿಗಳನ್ನು ನಾಲ್ಕು ವರ್ಷಗಳಲ್ಲಿ ಹಣವಾಗಿ ಮಾರ್ಪಡಿಸಲಾಗುವುದು. ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ಎರಡಕ್ಕೂ 4 ಜಿ ಸ್ಪೆಕ್ಟ್ರಮ್ ನೀಡಲಾಗುವುದು ಎಂದು ಸಚಿವರು ಘೋಷಿಸಿದರು. ಅಲ್ಲದೆ ಎರಡೂ ಕಂಪನಿಗಳ ಉದ್ಯೋಗಿಗಳಿಗೆ  ವಿ ಆರ್ ಎಸ್ ಪ್ಯಾಕೇಜ್ ನೀಡಲು ಸರಕಾರ ಯೋಜಿಸಿದೆ. ಇದರ ಜೊತೆಗೆ ವೆಚ್ಚವನ್ನು ಕಡಿತಗೊಳಿಸಲು ನೌಕರರಿಗೆ ಸ್ವಯಂಪ್ರೇರಿತ ನಿವೃತ್ತಿ ನೀಡಲಾಗುವುದು ಎಂದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

3 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

5 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

6 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

8 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

19 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

22 hours ago