Advertisement
ರಾಷ್ಟ್ರೀಯ

ಬಿಎಸ್ಎನ್ಎಲ್ ಹಾಗೂ ಎಂಟಿಎನ್ಎಲ್ ಮುಚ್ಚುವುದಿಲ್ಲ – ವಿಲೀನದ ಮೂಲಕ ಅಭಿವೃದ್ಧಿಗೆ ಕೇಂದ್ರ ಸರಕಾರ ಮಹತ್ವದ ನಿರ್ಧಾರ

Share

ನವದೆಹಲಿ: ಬಿ ಎಸ್ ಎನ್ ಎಲ್ ಹಾಗೂ ಎಂ ಟಿ ಎನ್ ಎಲ್ ನಷ್ಟದಲ್ಲಿ ಮುನ್ನಡೆಯುವುದನ್ನು ತಪ್ಪಿಸಲು ಕೇಂದ್ರ ಸರಕಾರ ಮಹತ್ವದ ನಿರ್ಧಾರಕ್ಕೆ ಬಂದಿದ್ದು ಈ ಎರಡೂ ಸಂಸ್ಥೆಗಳನ್ನು ಮುಚ್ಚುವುದಿಲ್ಲ, ಬದಲಾಗಿ ವಿಲೀನಗೊಳಿಸಿ ಅಭಿವೃದ್ಧಿಗೊಳಿಸುವ ನಿರ್ಧಾರಕ್ಕೆ ಬಂದಿದೆ. ಎರಡೂ ಸಂಸ್ಥೆಗಳನ್ನು ಪುನರುಜ್ಜೀವನಗೊಳಿಸುವ  ನಾಲ್ಕು ಹಂತದ ಯೋಜನೆಯನ್ನು ಸರಕಾರ  ಪ್ರಕಟಿಸಿದೆ.

ಟೆಲಿಕಾಂ ಸಂಸ್ಥೆಗಳಾದ ಎಂಟಿಎನ್ಎಲ್ ಮತ್ತು ಬಿಎಸ್ಎನ್ಎಲ್ ಅನ್ನು  ವಿಲೀನಗೊಳಿಸಲು ಸರಕಾರ ಬುಧವಾರ ನಿರ್ಧರಿಸಿದೆ. ಪೂರ್ಣ ವಿಲೀನದವರೆಗೆ ಎಂಟಿಎನ್ಎಲ್ – ಬಿಎಸ್ಎನ್ಎಲ್ ನ ಒಂದು ಘಟಕವಾಗಿ ಕಾರ್ಯನಿರ್ವಹಿಸಲಿದೆ. ಇದರ ಜೊತೆಗೆ ಪುನರುಜ್ಜೀವನಗೊಳಿಸುವ ಪ್ಯಾಕೇಜ್ ಕೂಡಾ ಮಾಡಿದೆ. ಪ್ಯಾಕೇಜ್ ಗಳಲ್ಲಿ ಪ್ರಮುಖವಾಗಿ  ಬಾಂಡ್ ಸಂಗ್ರಹಿಸುವುದು, ಹಣಗಳಿಸುವ ಆಸ್ತಿ ಮತ್ತು ಉದ್ಯೋಗಿಗಳಿಗೆ ಸ್ವಯಂಪ್ರೇರಿತ ನಿವೃತ್ತಿ ಯೋಜನೆ  ಸೇರಿವೆ. ಇದರ ಜೊತೆಗೆ ಸಂಸ್ಥೆಗಳ ಅಭಿವೃದ್ಧಿಗೆ ಸರಕಾರವು ಒಟ್ಟು 29,937 ಕೋಟಿ ರೂಪಾಯಿಗಳನ್ನು ತೊಡಗಿಸಲಿದೆ ಎಂದು ಹೇಳಿದರು. 38,000 ಕೋಟಿ ರೂ. ಮೌಲ್ಯದ ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ಆಸ್ತಿಗಳನ್ನು ನಾಲ್ಕು ವರ್ಷಗಳಲ್ಲಿ ಹಣವಾಗಿ ಮಾರ್ಪಡಿಸಲಾಗುವುದು. ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ಎರಡಕ್ಕೂ 4 ಜಿ ಸ್ಪೆಕ್ಟ್ರಮ್ ನೀಡಲಾಗುವುದು ಎಂದು ಸಚಿವರು ಘೋಷಿಸಿದರು. ಅಲ್ಲದೆ ಎರಡೂ ಕಂಪನಿಗಳ ಉದ್ಯೋಗಿಗಳಿಗೆ  ವಿ ಆರ್ ಎಸ್ ಪ್ಯಾಕೇಜ್ ನೀಡಲು ಸರಕಾರ ಯೋಜಿಸಿದೆ. ಇದರ ಜೊತೆಗೆ ವೆಚ್ಚವನ್ನು ಕಡಿತಗೊಳಿಸಲು ನೌಕರರಿಗೆ ಸ್ವಯಂಪ್ರೇರಿತ ನಿವೃತ್ತಿ ನೀಡಲಾಗುವುದು ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

12 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

12 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

16 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

16 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

17 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 day ago