Advertisement
ರಾಷ್ಟ್ರೀಯ

ಬಿಎಸ್ಎನ್ಎಲ್ ಹಾಗೂ ಎಂಟಿಎನ್ಎಲ್ ಮುಚ್ಚುವುದಿಲ್ಲ – ವಿಲೀನದ ಮೂಲಕ ಅಭಿವೃದ್ಧಿಗೆ ಕೇಂದ್ರ ಸರಕಾರ ಮಹತ್ವದ ನಿರ್ಧಾರ

Share

ನವದೆಹಲಿ: ಬಿ ಎಸ್ ಎನ್ ಎಲ್ ಹಾಗೂ ಎಂ ಟಿ ಎನ್ ಎಲ್ ನಷ್ಟದಲ್ಲಿ ಮುನ್ನಡೆಯುವುದನ್ನು ತಪ್ಪಿಸಲು ಕೇಂದ್ರ ಸರಕಾರ ಮಹತ್ವದ ನಿರ್ಧಾರಕ್ಕೆ ಬಂದಿದ್ದು ಈ ಎರಡೂ ಸಂಸ್ಥೆಗಳನ್ನು ಮುಚ್ಚುವುದಿಲ್ಲ, ಬದಲಾಗಿ ವಿಲೀನಗೊಳಿಸಿ ಅಭಿವೃದ್ಧಿಗೊಳಿಸುವ ನಿರ್ಧಾರಕ್ಕೆ ಬಂದಿದೆ. ಎರಡೂ ಸಂಸ್ಥೆಗಳನ್ನು ಪುನರುಜ್ಜೀವನಗೊಳಿಸುವ  ನಾಲ್ಕು ಹಂತದ ಯೋಜನೆಯನ್ನು ಸರಕಾರ  ಪ್ರಕಟಿಸಿದೆ.

ಟೆಲಿಕಾಂ ಸಂಸ್ಥೆಗಳಾದ ಎಂಟಿಎನ್ಎಲ್ ಮತ್ತು ಬಿಎಸ್ಎನ್ಎಲ್ ಅನ್ನು  ವಿಲೀನಗೊಳಿಸಲು ಸರಕಾರ ಬುಧವಾರ ನಿರ್ಧರಿಸಿದೆ. ಪೂರ್ಣ ವಿಲೀನದವರೆಗೆ ಎಂಟಿಎನ್ಎಲ್ – ಬಿಎಸ್ಎನ್ಎಲ್ ನ ಒಂದು ಘಟಕವಾಗಿ ಕಾರ್ಯನಿರ್ವಹಿಸಲಿದೆ. ಇದರ ಜೊತೆಗೆ ಪುನರುಜ್ಜೀವನಗೊಳಿಸುವ ಪ್ಯಾಕೇಜ್ ಕೂಡಾ ಮಾಡಿದೆ. ಪ್ಯಾಕೇಜ್ ಗಳಲ್ಲಿ ಪ್ರಮುಖವಾಗಿ  ಬಾಂಡ್ ಸಂಗ್ರಹಿಸುವುದು, ಹಣಗಳಿಸುವ ಆಸ್ತಿ ಮತ್ತು ಉದ್ಯೋಗಿಗಳಿಗೆ ಸ್ವಯಂಪ್ರೇರಿತ ನಿವೃತ್ತಿ ಯೋಜನೆ  ಸೇರಿವೆ. ಇದರ ಜೊತೆಗೆ ಸಂಸ್ಥೆಗಳ ಅಭಿವೃದ್ಧಿಗೆ ಸರಕಾರವು ಒಟ್ಟು 29,937 ಕೋಟಿ ರೂಪಾಯಿಗಳನ್ನು ತೊಡಗಿಸಲಿದೆ ಎಂದು ಹೇಳಿದರು. 38,000 ಕೋಟಿ ರೂ. ಮೌಲ್ಯದ ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ಆಸ್ತಿಗಳನ್ನು ನಾಲ್ಕು ವರ್ಷಗಳಲ್ಲಿ ಹಣವಾಗಿ ಮಾರ್ಪಡಿಸಲಾಗುವುದು. ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ಎರಡಕ್ಕೂ 4 ಜಿ ಸ್ಪೆಕ್ಟ್ರಮ್ ನೀಡಲಾಗುವುದು ಎಂದು ಸಚಿವರು ಘೋಷಿಸಿದರು. ಅಲ್ಲದೆ ಎರಡೂ ಕಂಪನಿಗಳ ಉದ್ಯೋಗಿಗಳಿಗೆ  ವಿ ಆರ್ ಎಸ್ ಪ್ಯಾಕೇಜ್ ನೀಡಲು ಸರಕಾರ ಯೋಜಿಸಿದೆ. ಇದರ ಜೊತೆಗೆ ವೆಚ್ಚವನ್ನು ಕಡಿತಗೊಳಿಸಲು ನೌಕರರಿಗೆ ಸ್ವಯಂಪ್ರೇರಿತ ನಿವೃತ್ತಿ ನೀಡಲಾಗುವುದು ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

16 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

21 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago