Advertisement
ಜಿಲ್ಲೆ

ಬಿಎಸ್‍ಎನ್‍ಎಲ್‍ಗಾಗಿ ಗ್ರಾಮಸ್ಥರಿಂದ ಭಿಕ್ಷೆ…!

Share

ಮಡಿಕೇರಿ : ದಿನದಿಂದ ದಿನಕ್ಕೆ ಗ್ರಾಹಕರಿಂದ ದೂರವಾಗುತ್ತಿರುವ ಕೇಂದ್ರ ಸರಕಾರಿ ಸ್ವಾಮ್ಯದ ಬಿಎಸ್‍ಎನ್‍ಎಲ್ ವಿರುದ್ಧ ಮರಗೋಡು ಗ್ರಾಮಸ್ಥರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಬಿಎಸ್‍ಎನ್‍ಎಲ್ ಕೇಂದ್ರದ ಜನರೇಟರ್ ಗಾಗಿ ಮರಗೋಡು ಗ್ರಾಮಸ್ಥರೆ ಭಿಕ್ಷೆ ಬೇಡಿ ಬಂದ ಹಣದಿಂದ ಡೀಸೆಲ್ ಖರೀದಿಸಿ ನೀಡಿದ್ದಾರೆ.

ಮರಗೋಡು ಗ್ರಾಮ ಪಂಚಾಯತ್ ಕಟ್ಟಡದಲ್ಲಿರುವ ಬಿಎಸ್‍ಎನ್‍ಎಲ್ ಕೇಂದ್ರವು ವಿದ್ಯುತ್ ಕೈಕೊಟ್ಟಾಗಲೆಲ್ಲಾ ತನ್ನ ಸೇವೆ ಸ್ಥಗಿತಗೊಳಿಸುತ್ತದೆ. ಈ ಸಂದರ್ಭ ಪರ್ಯಾಯ ವ್ಯವಸ್ಥೆಯಾಗಿ ಜನರೇಟರ್ ಇದ್ದರೂ ಸಹ ಇದಕ್ಕೆ ಡೀಸೆಲ್ ಪೂರೈಸಲು ಅಧಿಕಾರಿಗಳಿಂದ ಹಣ ದೊರಕುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತವೆ.
ಮರಗೋಡು ಗ್ರಾಮದಲ್ಲಿ ಕಳೆದ ನಾಲ್ಕೈದು ದಿನಗಳಿಂದ ವಿದ್ಯುತ್ ಕೈಕೊಟ್ಟಿದ್ದು ಬಿಎಸ್‍ಎನ್‍ಎಲ್ ಸೇವೆ ಆಗಿಂದಾಗ್ಗೆ  ಸ್ಥಗಿತವಾಗುತ್ತಿದೆ. ಇದರಿಂದ ಅಸಮಾಧಾನಗೊಂಡ ಗ್ರಾಮಸ್ಥರು ಇಂದು ಬೆಳಗ್ಗೆ ಗ್ರಾಮ ಕೇಂದ್ರದಲ್ಲಿ ಸೇರಿ ಸಾರ್ವಜನಿಕರಿಂದ, ವಾಹನ ಚಾಲಕರಿಂದ ಮತ್ತು ಅಂಗಡಿ ಮಳಿಗೆಗಳಿಂದ ಭಿಕ್ಷೆ ಎತ್ತಿದ್ದಾರೆ. ಸಂಗ್ರಹವಾದ 2800 ರೂಪಾಯಿಗಳಿಗೆ 35 ಲೀಟರ್ ಡೀಸೆಲ್ ಖರೀದಿಸಿ ಗ್ರಾಮಸ್ಥರು ಬಿಎಸ್‍ಎನ್‍ಎಲ್ ಕೇಂದ್ರಕ್ಕೆ ನೀಡಿದ್ದಾರೆ.

ಈ ಸಂದರ್ಭ ಮಾತನಾಡಿದ ಆಟೋ ಚಾಲಕರ ಸಂಘದ ಅಧ್ಯಕ್ಷ ತಮ್ಮುಣಿ, ಮರಗೋಡಿನಲ್ಲಿ 30 ಆಟೋ ರಿಕ್ಷಾಗಳಿದ್ದು ತುರ್ತು ಸಂದರ್ಭದಲ್ಲಿ ಗ್ರಾಹಕರು ಕರೆ ಮಾಡಿದರೂ ತಮಗೆ ಸಂಪರ್ಕ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.  ಇದೇ ಸಂದರ್ಭ ಮಾತನಾಡಿದ ವಿವೇಕಾನಂದ ಯುವಕ ಸಂಘದ ಅಧ್ಯಕ್ಷ ಬಡುವಂಡ್ರ ಲಕ್ಷ್ಮೀಪತಿ, ನಮ್ಮಿಂದ ದುಬಾರಿ ದರ ಪಡೆಯುವ ಬಿಎಸ್‍ಎನ್‍ಎಲ್ ಅದೇ ಮಟ್ಟದ ಸೇವೆ ನೀಡುವಲ್ಲಿ ವಿಫಲವಾಗುತ್ತಿದೆ ಎಂದು ದೂರಿದರು.
ಮಾಜಿ ಸೈನಿಕ ಚಂದ್ರ ಮಾತನಾಡಿ ಇದೀಗ ಮಳೆಗಾಲ ಆರಂಭವಾಗಿದ್ದು ಹಲವು ವಿಪತ್ತುಗಳು ಸಂಭವಿಸುವ ಸಂಭವವಿದೆ. ಮರಗೋಡಿನಂತಹ ಗ್ರಾಮೀಣ ಪ್ರದೇಶದಲ್ಲಿ ಹಿಂದಿನಿಂದಲೂ ಬಿಎಸ್‍ಎನ್‍ಎಲ್ ಬಳಕೆದಾರರೇ ಹೆಚ್ಚಾಗಿದ್ದು, ಇದೀಗ ಅಗತ್ಯ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಅಳಲು  ತೋಡಿಕೊಂಡರು.
ಮರಗೋಡು ವಿಎಸ್‍ಎಸ್‍ಎನ್ ಬ್ಯಾಂಕ್ ಅಧ್ಯಕ್ಷ ಬಾಳೆಕಜೆ ಯೋಗೇಂದ್ರ, ವೈಷ್ಣವಿ, ಫುಟ್ಬಾಲ್ ಕ್ಲಬ್‍ನ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ, ಕಾಫಿ ಬೆಳಗಾರ ಮಂಡೇಪಂಡ ಗಣಪತಿ, ಕಲಾವಿದ ಐಮಂಡ ರೂಪೇಶ್ ನಾಣಯ್ಯ, ಸ್ಪೋರ್ಟ್ ಆಂಡ್ ರಿಕ್ರಿಯೇಷನ್ ಕ್ಲಬ್ ಕಾರ್ಯದರ್ಶಿ ಕೋಚನ ಅನೂಪ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

15 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

17 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

22 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

1 day ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

2 days ago