Advertisement
ಜಿಲ್ಲೆ

ಬಿಎಸ್‍ಎನ್‍ಎಲ್‍ಗಾಗಿ ಗ್ರಾಮಸ್ಥರಿಂದ ಭಿಕ್ಷೆ…!

Share

ಮಡಿಕೇರಿ : ದಿನದಿಂದ ದಿನಕ್ಕೆ ಗ್ರಾಹಕರಿಂದ ದೂರವಾಗುತ್ತಿರುವ ಕೇಂದ್ರ ಸರಕಾರಿ ಸ್ವಾಮ್ಯದ ಬಿಎಸ್‍ಎನ್‍ಎಲ್ ವಿರುದ್ಧ ಮರಗೋಡು ಗ್ರಾಮಸ್ಥರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಬಿಎಸ್‍ಎನ್‍ಎಲ್ ಕೇಂದ್ರದ ಜನರೇಟರ್ ಗಾಗಿ ಮರಗೋಡು ಗ್ರಾಮಸ್ಥರೆ ಭಿಕ್ಷೆ ಬೇಡಿ ಬಂದ ಹಣದಿಂದ ಡೀಸೆಲ್ ಖರೀದಿಸಿ ನೀಡಿದ್ದಾರೆ.

ಮರಗೋಡು ಗ್ರಾಮ ಪಂಚಾಯತ್ ಕಟ್ಟಡದಲ್ಲಿರುವ ಬಿಎಸ್‍ಎನ್‍ಎಲ್ ಕೇಂದ್ರವು ವಿದ್ಯುತ್ ಕೈಕೊಟ್ಟಾಗಲೆಲ್ಲಾ ತನ್ನ ಸೇವೆ ಸ್ಥಗಿತಗೊಳಿಸುತ್ತದೆ. ಈ ಸಂದರ್ಭ ಪರ್ಯಾಯ ವ್ಯವಸ್ಥೆಯಾಗಿ ಜನರೇಟರ್ ಇದ್ದರೂ ಸಹ ಇದಕ್ಕೆ ಡೀಸೆಲ್ ಪೂರೈಸಲು ಅಧಿಕಾರಿಗಳಿಂದ ಹಣ ದೊರಕುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತವೆ.
ಮರಗೋಡು ಗ್ರಾಮದಲ್ಲಿ ಕಳೆದ ನಾಲ್ಕೈದು ದಿನಗಳಿಂದ ವಿದ್ಯುತ್ ಕೈಕೊಟ್ಟಿದ್ದು ಬಿಎಸ್‍ಎನ್‍ಎಲ್ ಸೇವೆ ಆಗಿಂದಾಗ್ಗೆ  ಸ್ಥಗಿತವಾಗುತ್ತಿದೆ. ಇದರಿಂದ ಅಸಮಾಧಾನಗೊಂಡ ಗ್ರಾಮಸ್ಥರು ಇಂದು ಬೆಳಗ್ಗೆ ಗ್ರಾಮ ಕೇಂದ್ರದಲ್ಲಿ ಸೇರಿ ಸಾರ್ವಜನಿಕರಿಂದ, ವಾಹನ ಚಾಲಕರಿಂದ ಮತ್ತು ಅಂಗಡಿ ಮಳಿಗೆಗಳಿಂದ ಭಿಕ್ಷೆ ಎತ್ತಿದ್ದಾರೆ. ಸಂಗ್ರಹವಾದ 2800 ರೂಪಾಯಿಗಳಿಗೆ 35 ಲೀಟರ್ ಡೀಸೆಲ್ ಖರೀದಿಸಿ ಗ್ರಾಮಸ್ಥರು ಬಿಎಸ್‍ಎನ್‍ಎಲ್ ಕೇಂದ್ರಕ್ಕೆ ನೀಡಿದ್ದಾರೆ.

ಈ ಸಂದರ್ಭ ಮಾತನಾಡಿದ ಆಟೋ ಚಾಲಕರ ಸಂಘದ ಅಧ್ಯಕ್ಷ ತಮ್ಮುಣಿ, ಮರಗೋಡಿನಲ್ಲಿ 30 ಆಟೋ ರಿಕ್ಷಾಗಳಿದ್ದು ತುರ್ತು ಸಂದರ್ಭದಲ್ಲಿ ಗ್ರಾಹಕರು ಕರೆ ಮಾಡಿದರೂ ತಮಗೆ ಸಂಪರ್ಕ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.  ಇದೇ ಸಂದರ್ಭ ಮಾತನಾಡಿದ ವಿವೇಕಾನಂದ ಯುವಕ ಸಂಘದ ಅಧ್ಯಕ್ಷ ಬಡುವಂಡ್ರ ಲಕ್ಷ್ಮೀಪತಿ, ನಮ್ಮಿಂದ ದುಬಾರಿ ದರ ಪಡೆಯುವ ಬಿಎಸ್‍ಎನ್‍ಎಲ್ ಅದೇ ಮಟ್ಟದ ಸೇವೆ ನೀಡುವಲ್ಲಿ ವಿಫಲವಾಗುತ್ತಿದೆ ಎಂದು ದೂರಿದರು.
ಮಾಜಿ ಸೈನಿಕ ಚಂದ್ರ ಮಾತನಾಡಿ ಇದೀಗ ಮಳೆಗಾಲ ಆರಂಭವಾಗಿದ್ದು ಹಲವು ವಿಪತ್ತುಗಳು ಸಂಭವಿಸುವ ಸಂಭವವಿದೆ. ಮರಗೋಡಿನಂತಹ ಗ್ರಾಮೀಣ ಪ್ರದೇಶದಲ್ಲಿ ಹಿಂದಿನಿಂದಲೂ ಬಿಎಸ್‍ಎನ್‍ಎಲ್ ಬಳಕೆದಾರರೇ ಹೆಚ್ಚಾಗಿದ್ದು, ಇದೀಗ ಅಗತ್ಯ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಅಳಲು  ತೋಡಿಕೊಂಡರು.
ಮರಗೋಡು ವಿಎಸ್‍ಎಸ್‍ಎನ್ ಬ್ಯಾಂಕ್ ಅಧ್ಯಕ್ಷ ಬಾಳೆಕಜೆ ಯೋಗೇಂದ್ರ, ವೈಷ್ಣವಿ, ಫುಟ್ಬಾಲ್ ಕ್ಲಬ್‍ನ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ, ಕಾಫಿ ಬೆಳಗಾರ ಮಂಡೇಪಂಡ ಗಣಪತಿ, ಕಲಾವಿದ ಐಮಂಡ ರೂಪೇಶ್ ನಾಣಯ್ಯ, ಸ್ಪೋರ್ಟ್ ಆಂಡ್ ರಿಕ್ರಿಯೇಷನ್ ಕ್ಲಬ್ ಕಾರ್ಯದರ್ಶಿ ಕೋಚನ ಅನೂಪ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

1 hour ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

7 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

17 hours ago

ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು

ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…

17 hours ago

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

1 day ago

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

1 day ago