ಬೆಂಗಳೂರು: ಕರ್ನಾಟಕ ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದ ವಿಸ್ತರಣೆಯಾಗಿದ್ದು, ಗುರುವಾರ ಬೆಳಗ್ಗೆ ಹತ್ತು ಮಂದಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾ ಹೊಸ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ನೂತನ ಸಚಿವರಾದ ಎಸ್ ಟಿ ಸೋಮಶೇಖರ್, ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್, ಡಾ.ಕೆ.ಸುಧಾಕರ್ , ಭೈರತಿ ಬಸವರಾಜ್, ಅರಬೈಲ್ ಶಿವರಾಮ್ ಹೆಬ್ಬಾರ್, ಬಿ.ಸಿ ಪಾಟೀಲ್, ಕೆ.ಗೋಪಾಲಯ್ಯ, ನಾರಾಯಣ ಗೌಡ ಮತ್ತು ಶ್ರೀಮಂತ ಪಾಟೀಲ್ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ಸ್ವೀಕರಿಸಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನೂತನ ಸಚಿವರಿಗೆ ಹೂಗುಚ್ಚ ನೀಡಿ ಅಭಿನಂದಿಸಿದರು.
ಪ್ರಮಾಣ ವಚನ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕರು ಕಾಣಿಸಿಕೊಳ್ಳಲಿಲ್ಲ. ಹಲವು ಮಂದಿ ಬಿಜೆಪಿ ನಾಯಕರು ಸಮಾರಂಭದಲ್ಲಿ ಗೈರು ಹಾಜರಾಗಿದ್ದರು. ಮುಖ್ಯವಾಗಿ ಸಚಿವಾಕಾಂಕ್ಷಿಗಳಾಗಿದ್ದ ಸಿ.ಪಿ.ಯೋಗೇಶ್ವರ್, ಉಮೇಶ್ ಕತ್ತಿ , ಮುರುಗೇಶ್ ನಿರಾಣಿ ಗೈರು ಹಾಜರಾಗಿದ್ದರು.
ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…
ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…
ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…
ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…