ಸುದ್ದಿಗಳು

ಬಿಗ್ ಟಿಕೆಟ್ ಬಹುಮಾನ ಫಯಾಝ್ ಗೆ ಹಸ್ತಾಂತರ : 23 ಕೋಟಿ ರೂಪಾಯಿ ಬಹುಮಾನ ಸ್ವೀಕರಿಸಿದ ಸುಳ್ಯದ ಯುವಕ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಬಿಗ್ ಟಿಕೆಟ್‌ನ ಡ್ರೀಂ ಸೀರೀಸ್‌ನ 208 ನೇ ಡ್ರಾದ ವಿಜೇತರಾದ ಸುಳ್ಯ ಜಟ್ಟಿಪಳ್ಳದ ಜೆ.ಎ.ಮಹಮ್ಮದ್ ಫಯಾಜ್ ಅವರಿಗೆ ಬಹುಮಾನ ಮೊತ್ತದ ಚೆಕ್ಕನ್ನು ನ.3 ರಂದು ಹಸ್ತಾಂತರಿಸಲಾಯಿತು.

Advertisement

23 ಕೋಟಿಯ ಮೌಲ್ಯದ ಅಬುಧಾಬಿ ಬಿಗ್ ಟಿಕೆಟ್ ಲಾಟರಿಯ ಅಕ್ಟೋಬರ್ ತಿಂಗಳ ಅದೃಷ್ಟ ಸುಳ್ಯದ ಯುವಕನಿಗೆ ಒಲಿದು ಬಂದಿತ್ತು. ನವೆಂಬರ್ 3 ರಂದು ನಡೆದ ಡ್ರಾ ದಿನದಂದು ಅಕ್ಟೋಬರ್ ತಿಂಗಳ ವಿಜೇತರಿಗೆ ಬಹುಮಾನ ಮೊತ್ತ 12 ಮಿಲಿಯನ್ ಚೆಕ್ ಹಸ್ತಾಂತರಿಸಲಾಯಿತು.

ಬಿಗ್ ಟಿಕೆಟ್‌ನ ಡ್ರೀಂ ಸೀರೀಸ್‌ನ 208 ನೇ ಡ್ರಾದ 12 ಮಿಲಿಯನ್ ದಿರ್‌ಹಾಂ (ಅಂದಾಜು23.17 ಕೋಟಿ) ಪ್ರಥಮ ಬಹುಮಾನ ಸುಳ್ಯ ಜಟ್ಟಿಪಳ್ಳದ ಜೆ.ಎ.ಮಹಮ್ಮದ್ ಫಯಾಜ್ ಅವರಿಗೆ ಒಲಿದು ಬಂದಿತ್ತು. ಮುಂಬೈನಲ್ಲಿ ಉದ್ಯೋಗದಲ್ಲಿರುವ ಫಯಾಜ್ ಕಳೆದ ಆರು ತಿಂಗಳಿನಿಂದ ದೊಡ್ಡ ಮೊತ್ತದ ಬಿಗ್ ಟಿಕೆಟ್ ಗಳನ್ನು ಖರೀದಿಸುತ್ತಿದ್ದು ಪ್ರಥಮ ಬಹುಮಾನದ ರೂಪದಲ್ಲಿ ಅದೃಷ್ಠ ಒಲಿದು ಬಂದಿತ್ತು. ಫಯಾಜ್ ಮತ್ತು ಗೆಳೆಯರು ಖರೀದಿಸಿದ ಟಿಕೆಟ್‌ಗೆ ಅದೃಷ್ಠ ಒಲಿದು ಬಂದಿತ್ತು. ಇದುವರೆಗೆ ದುಬೈ ನೋಡಿರದ ಫಯಾಜ್ ನನ್ನು ಅರಸಿ ವಿದೇಶದ ಅದೃಷ್ಟ ಒಲಿದು ಬಂದಿತ್ತು. ಇದೀಗ ದುಬೈಗೆ ಭೇಟಿ ನೀಡಿದ ಫಯಾಜ್ ಬಹುಮಾನ ಸ್ವೀಕರಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

1 hour ago

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…

1 hour ago

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…

1 hour ago

ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…

1 hour ago

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…

2 hours ago

ಚಾಲಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ | ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಇಲಾಖೆ

ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಕುರಿತಂತೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಆರೋಗ್ಯ…

2 hours ago