Categories: Political mirror

ಬಿಜೆಪಿಯದ್ದು ಅಸಹಕಾರದ ನಾಟಕ: ಎಂ. ವೆಂಕಪ್ಪ ಗೌಡ ಲೇವಡಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕಾರ್ಯಕರ್ತರ ಮುಂದೆ ಅಸಹಕಾರ ಚಳವಳಿಯ ನಾಟಕ ಮಾಡುವ ಬಿಜೆಪಿ ನಾಯಕರು ಕದ್ದು ಮುಚ್ಚಿ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸುತ್ತಾರೆ. ಇದೆಲ್ಲವನ್ನು ನೋಡುವಾಗ ಬಿಜೆಪಿಗರು ಒಳಗೊಂದು – ಹೊರಗೊಂದು ಮಾತನಾಡುವವರು. ಇವರಿಗೆ ಕಾರ್ಯಕರ್ತರ, ಜನರ ಬಗ್ಗೆಯಾಗಲೀ ಅಥವಾ ಶಾಸಕ ಅಂಗಾರ ಅವರ ಬಗ್ಗೆ ಆಗಲೀ ಕಾಳಜಿ ಇಲ್ಲ. ಬದಲಾಗಿ ಇವರಿಗೆ ಇರುವುದು ಸ್ವಾರ್ಥ ಲಾಭದ ರಾಜಕೀಯ ಎಂದು ಕೆ.ಪಿ‌.ಸಿ.ಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಆರೋಪಿಸಿದ್ದಾರೆ.

Advertisement

 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಸಹಾಕಾರ ಚಳುವಳಿ ಕಾಂಗ್ರೆಸ್ ನವರ ಸೃಷ್ಠಿ ಎಂಬ ನಳಿನ್ ಕುಮಾರ್ ಕಟೀಲ್ ಹೇಳಿಕೆಯನ್ನು ಖಂಡಿಸಿದರು. ಬಿಜೆಪಿ ಕಚೇರಿಯಲ್ಲಿ 300ರಷ್ಟು ಮಂದಿ ಜನಪ್ರತಿನಿಧಿಗಳು ಸೇರಿ ಸಭೆ ನಡೆಸಿ ನಿರ್ಧಾರ ಕೈಗೊಂಡು ಅಸಹಕಾರ ಚಳವಳಿ ಎಂದು ಘೋಷಿಸಿದ್ದು ಬಿಜೆಪಿಗರೋ ಅಥವಾ ಕಾಂಗ್ರೆಸ್-ಜೆಡಿಎಸ್ ನವರೋ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಮೊದಲು ತಿಳಿದುಕೊಳ್ಳಲಿ. ಆ ಬಳಿಕ ಕಾಂಗ್ರೆಸ್ ಮೇಲೆ ಆರೋಪ ಮಾಡಲಿ ಎಂದು ಹೇಳಿದರು. ಅಂಗಾರರು ಮಂತ್ರಿ ಪದವಿಯಿಂದ ವಂಚಿತರಾದಾಗ ಬಿಜೆಪಿಯವರು ಅಸಹಕಾರದ ನಿರ್ಣಯ ಕೈಗೊಂಡ ಸಂದರ್ಭ ನೀವು ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಚಳವಳಿ ಮಾಡಿ ಎಂದು ನಾವು ಸಲಹೆ ನೀಡಿದ್ದೆವು. ಆದರೆ ಬಿಜೆಪಿಯವರ ಚಳವಳಿ ಕೇವಲ ನಾಟಕ ಎಂದು ಈಗ ಸಾಬೀತಾಯಿತು ಎಂದು ಅವರು ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದೀಕ್, ನ.ಪಂ.ಸದಸ್ಯ ಶರೀಫ್ ಕಂಠಿ, ಲಕ್ಷ್ಮಣ ಶೆಣೈ, ಕೆ.ಕೆ.ಹರಿಪ್ರಸಾದ್ ಇದ್ದರು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

2 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

3 hours ago

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

11 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

13 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

14 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

20 hours ago