ಸುಳ್ಯ: ಕಾರ್ಯಕರ್ತರ ಮುಂದೆ ಅಸಹಕಾರ ಚಳವಳಿಯ ನಾಟಕ ಮಾಡುವ ಬಿಜೆಪಿ ನಾಯಕರು ಕದ್ದು ಮುಚ್ಚಿ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸುತ್ತಾರೆ. ಇದೆಲ್ಲವನ್ನು ನೋಡುವಾಗ ಬಿಜೆಪಿಗರು ಒಳಗೊಂದು – ಹೊರಗೊಂದು ಮಾತನಾಡುವವರು. ಇವರಿಗೆ ಕಾರ್ಯಕರ್ತರ, ಜನರ ಬಗ್ಗೆಯಾಗಲೀ ಅಥವಾ ಶಾಸಕ ಅಂಗಾರ ಅವರ ಬಗ್ಗೆ ಆಗಲೀ ಕಾಳಜಿ ಇಲ್ಲ. ಬದಲಾಗಿ ಇವರಿಗೆ ಇರುವುದು ಸ್ವಾರ್ಥ ಲಾಭದ ರಾಜಕೀಯ ಎಂದು ಕೆ.ಪಿ.ಸಿ.ಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಸಹಾಕಾರ ಚಳುವಳಿ ಕಾಂಗ್ರೆಸ್ ನವರ ಸೃಷ್ಠಿ ಎಂಬ ನಳಿನ್ ಕುಮಾರ್ ಕಟೀಲ್ ಹೇಳಿಕೆಯನ್ನು ಖಂಡಿಸಿದರು. ಬಿಜೆಪಿ ಕಚೇರಿಯಲ್ಲಿ 300ರಷ್ಟು ಮಂದಿ ಜನಪ್ರತಿನಿಧಿಗಳು ಸೇರಿ ಸಭೆ ನಡೆಸಿ ನಿರ್ಧಾರ ಕೈಗೊಂಡು ಅಸಹಕಾರ ಚಳವಳಿ ಎಂದು ಘೋಷಿಸಿದ್ದು ಬಿಜೆಪಿಗರೋ ಅಥವಾ ಕಾಂಗ್ರೆಸ್-ಜೆಡಿಎಸ್ ನವರೋ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೊದಲು ತಿಳಿದುಕೊಳ್ಳಲಿ. ಆ ಬಳಿಕ ಕಾಂಗ್ರೆಸ್ ಮೇಲೆ ಆರೋಪ ಮಾಡಲಿ ಎಂದು ಹೇಳಿದರು. ಅಂಗಾರರು ಮಂತ್ರಿ ಪದವಿಯಿಂದ ವಂಚಿತರಾದಾಗ ಬಿಜೆಪಿಯವರು ಅಸಹಕಾರದ ನಿರ್ಣಯ ಕೈಗೊಂಡ ಸಂದರ್ಭ ನೀವು ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಚಳವಳಿ ಮಾಡಿ ಎಂದು ನಾವು ಸಲಹೆ ನೀಡಿದ್ದೆವು. ಆದರೆ ಬಿಜೆಪಿಯವರ ಚಳವಳಿ ಕೇವಲ ನಾಟಕ ಎಂದು ಈಗ ಸಾಬೀತಾಯಿತು ಎಂದು ಅವರು ಟೀಕಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದೀಕ್, ನ.ಪಂ.ಸದಸ್ಯ ಶರೀಫ್ ಕಂಠಿ, ಲಕ್ಷ್ಮಣ ಶೆಣೈ, ಕೆ.ಕೆ.ಹರಿಪ್ರಸಾದ್ ಇದ್ದರು.
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…