Advertisement
Categories: Political mirror

ಬಿಜೆಪಿಯದ್ದು ಅಸಹಕಾರದ ನಾಟಕ: ಎಂ. ವೆಂಕಪ್ಪ ಗೌಡ ಲೇವಡಿ

Share

ಸುಳ್ಯ: ಕಾರ್ಯಕರ್ತರ ಮುಂದೆ ಅಸಹಕಾರ ಚಳವಳಿಯ ನಾಟಕ ಮಾಡುವ ಬಿಜೆಪಿ ನಾಯಕರು ಕದ್ದು ಮುಚ್ಚಿ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸುತ್ತಾರೆ. ಇದೆಲ್ಲವನ್ನು ನೋಡುವಾಗ ಬಿಜೆಪಿಗರು ಒಳಗೊಂದು – ಹೊರಗೊಂದು ಮಾತನಾಡುವವರು. ಇವರಿಗೆ ಕಾರ್ಯಕರ್ತರ, ಜನರ ಬಗ್ಗೆಯಾಗಲೀ ಅಥವಾ ಶಾಸಕ ಅಂಗಾರ ಅವರ ಬಗ್ಗೆ ಆಗಲೀ ಕಾಳಜಿ ಇಲ್ಲ. ಬದಲಾಗಿ ಇವರಿಗೆ ಇರುವುದು ಸ್ವಾರ್ಥ ಲಾಭದ ರಾಜಕೀಯ ಎಂದು ಕೆ.ಪಿ‌.ಸಿ.ಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಆರೋಪಿಸಿದ್ದಾರೆ.

 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಸಹಾಕಾರ ಚಳುವಳಿ ಕಾಂಗ್ರೆಸ್ ನವರ ಸೃಷ್ಠಿ ಎಂಬ ನಳಿನ್ ಕುಮಾರ್ ಕಟೀಲ್ ಹೇಳಿಕೆಯನ್ನು ಖಂಡಿಸಿದರು. ಬಿಜೆಪಿ ಕಚೇರಿಯಲ್ಲಿ 300ರಷ್ಟು ಮಂದಿ ಜನಪ್ರತಿನಿಧಿಗಳು ಸೇರಿ ಸಭೆ ನಡೆಸಿ ನಿರ್ಧಾರ ಕೈಗೊಂಡು ಅಸಹಕಾರ ಚಳವಳಿ ಎಂದು ಘೋಷಿಸಿದ್ದು ಬಿಜೆಪಿಗರೋ ಅಥವಾ ಕಾಂಗ್ರೆಸ್-ಜೆಡಿಎಸ್ ನವರೋ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಮೊದಲು ತಿಳಿದುಕೊಳ್ಳಲಿ. ಆ ಬಳಿಕ ಕಾಂಗ್ರೆಸ್ ಮೇಲೆ ಆರೋಪ ಮಾಡಲಿ ಎಂದು ಹೇಳಿದರು. ಅಂಗಾರರು ಮಂತ್ರಿ ಪದವಿಯಿಂದ ವಂಚಿತರಾದಾಗ ಬಿಜೆಪಿಯವರು ಅಸಹಕಾರದ ನಿರ್ಣಯ ಕೈಗೊಂಡ ಸಂದರ್ಭ ನೀವು ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಚಳವಳಿ ಮಾಡಿ ಎಂದು ನಾವು ಸಲಹೆ ನೀಡಿದ್ದೆವು. ಆದರೆ ಬಿಜೆಪಿಯವರ ಚಳವಳಿ ಕೇವಲ ನಾಟಕ ಎಂದು ಈಗ ಸಾಬೀತಾಯಿತು ಎಂದು ಅವರು ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದೀಕ್, ನ.ಪಂ.ಸದಸ್ಯ ಶರೀಫ್ ಕಂಠಿ, ಲಕ್ಷ್ಮಣ ಶೆಣೈ, ಕೆ.ಕೆ.ಹರಿಪ್ರಸಾದ್ ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

16 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

18 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

19 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

20 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago