ಸುಳ್ಯ: ಕಾರ್ಯಕರ್ತರ ಮುಂದೆ ಅಸಹಕಾರ ಚಳವಳಿಯ ನಾಟಕ ಮಾಡುವ ಬಿಜೆಪಿ ನಾಯಕರು ಕದ್ದು ಮುಚ್ಚಿ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸುತ್ತಾರೆ. ಇದೆಲ್ಲವನ್ನು ನೋಡುವಾಗ ಬಿಜೆಪಿಗರು ಒಳಗೊಂದು – ಹೊರಗೊಂದು ಮಾತನಾಡುವವರು. ಇವರಿಗೆ ಕಾರ್ಯಕರ್ತರ, ಜನರ ಬಗ್ಗೆಯಾಗಲೀ ಅಥವಾ ಶಾಸಕ ಅಂಗಾರ ಅವರ ಬಗ್ಗೆ ಆಗಲೀ ಕಾಳಜಿ ಇಲ್ಲ. ಬದಲಾಗಿ ಇವರಿಗೆ ಇರುವುದು ಸ್ವಾರ್ಥ ಲಾಭದ ರಾಜಕೀಯ ಎಂದು ಕೆ.ಪಿ.ಸಿ.ಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಸಹಾಕಾರ ಚಳುವಳಿ ಕಾಂಗ್ರೆಸ್ ನವರ ಸೃಷ್ಠಿ ಎಂಬ ನಳಿನ್ ಕುಮಾರ್ ಕಟೀಲ್ ಹೇಳಿಕೆಯನ್ನು ಖಂಡಿಸಿದರು. ಬಿಜೆಪಿ ಕಚೇರಿಯಲ್ಲಿ 300ರಷ್ಟು ಮಂದಿ ಜನಪ್ರತಿನಿಧಿಗಳು ಸೇರಿ ಸಭೆ ನಡೆಸಿ ನಿರ್ಧಾರ ಕೈಗೊಂಡು ಅಸಹಕಾರ ಚಳವಳಿ ಎಂದು ಘೋಷಿಸಿದ್ದು ಬಿಜೆಪಿಗರೋ ಅಥವಾ ಕಾಂಗ್ರೆಸ್-ಜೆಡಿಎಸ್ ನವರೋ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೊದಲು ತಿಳಿದುಕೊಳ್ಳಲಿ. ಆ ಬಳಿಕ ಕಾಂಗ್ರೆಸ್ ಮೇಲೆ ಆರೋಪ ಮಾಡಲಿ ಎಂದು ಹೇಳಿದರು. ಅಂಗಾರರು ಮಂತ್ರಿ ಪದವಿಯಿಂದ ವಂಚಿತರಾದಾಗ ಬಿಜೆಪಿಯವರು ಅಸಹಕಾರದ ನಿರ್ಣಯ ಕೈಗೊಂಡ ಸಂದರ್ಭ ನೀವು ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಚಳವಳಿ ಮಾಡಿ ಎಂದು ನಾವು ಸಲಹೆ ನೀಡಿದ್ದೆವು. ಆದರೆ ಬಿಜೆಪಿಯವರ ಚಳವಳಿ ಕೇವಲ ನಾಟಕ ಎಂದು ಈಗ ಸಾಬೀತಾಯಿತು ಎಂದು ಅವರು ಟೀಕಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದೀಕ್, ನ.ಪಂ.ಸದಸ್ಯ ಶರೀಫ್ ಕಂಠಿ, ಲಕ್ಷ್ಮಣ ಶೆಣೈ, ಕೆ.ಕೆ.ಹರಿಪ್ರಸಾದ್ ಇದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…