Advertisement
Categories: Political mirror

ಬಿಜೆಪಿಯದ್ದು ಅಸಹಕಾರದ ನಾಟಕ: ಎಂ. ವೆಂಕಪ್ಪ ಗೌಡ ಲೇವಡಿ

Share

ಸುಳ್ಯ: ಕಾರ್ಯಕರ್ತರ ಮುಂದೆ ಅಸಹಕಾರ ಚಳವಳಿಯ ನಾಟಕ ಮಾಡುವ ಬಿಜೆಪಿ ನಾಯಕರು ಕದ್ದು ಮುಚ್ಚಿ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸುತ್ತಾರೆ. ಇದೆಲ್ಲವನ್ನು ನೋಡುವಾಗ ಬಿಜೆಪಿಗರು ಒಳಗೊಂದು – ಹೊರಗೊಂದು ಮಾತನಾಡುವವರು. ಇವರಿಗೆ ಕಾರ್ಯಕರ್ತರ, ಜನರ ಬಗ್ಗೆಯಾಗಲೀ ಅಥವಾ ಶಾಸಕ ಅಂಗಾರ ಅವರ ಬಗ್ಗೆ ಆಗಲೀ ಕಾಳಜಿ ಇಲ್ಲ. ಬದಲಾಗಿ ಇವರಿಗೆ ಇರುವುದು ಸ್ವಾರ್ಥ ಲಾಭದ ರಾಜಕೀಯ ಎಂದು ಕೆ.ಪಿ‌.ಸಿ.ಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಆರೋಪಿಸಿದ್ದಾರೆ.

 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಸಹಾಕಾರ ಚಳುವಳಿ ಕಾಂಗ್ರೆಸ್ ನವರ ಸೃಷ್ಠಿ ಎಂಬ ನಳಿನ್ ಕುಮಾರ್ ಕಟೀಲ್ ಹೇಳಿಕೆಯನ್ನು ಖಂಡಿಸಿದರು. ಬಿಜೆಪಿ ಕಚೇರಿಯಲ್ಲಿ 300ರಷ್ಟು ಮಂದಿ ಜನಪ್ರತಿನಿಧಿಗಳು ಸೇರಿ ಸಭೆ ನಡೆಸಿ ನಿರ್ಧಾರ ಕೈಗೊಂಡು ಅಸಹಕಾರ ಚಳವಳಿ ಎಂದು ಘೋಷಿಸಿದ್ದು ಬಿಜೆಪಿಗರೋ ಅಥವಾ ಕಾಂಗ್ರೆಸ್-ಜೆಡಿಎಸ್ ನವರೋ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಮೊದಲು ತಿಳಿದುಕೊಳ್ಳಲಿ. ಆ ಬಳಿಕ ಕಾಂಗ್ರೆಸ್ ಮೇಲೆ ಆರೋಪ ಮಾಡಲಿ ಎಂದು ಹೇಳಿದರು. ಅಂಗಾರರು ಮಂತ್ರಿ ಪದವಿಯಿಂದ ವಂಚಿತರಾದಾಗ ಬಿಜೆಪಿಯವರು ಅಸಹಕಾರದ ನಿರ್ಣಯ ಕೈಗೊಂಡ ಸಂದರ್ಭ ನೀವು ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಚಳವಳಿ ಮಾಡಿ ಎಂದು ನಾವು ಸಲಹೆ ನೀಡಿದ್ದೆವು. ಆದರೆ ಬಿಜೆಪಿಯವರ ಚಳವಳಿ ಕೇವಲ ನಾಟಕ ಎಂದು ಈಗ ಸಾಬೀತಾಯಿತು ಎಂದು ಅವರು ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದೀಕ್, ನ.ಪಂ.ಸದಸ್ಯ ಶರೀಫ್ ಕಂಠಿ, ಲಕ್ಷ್ಮಣ ಶೆಣೈ, ಕೆ.ಕೆ.ಹರಿಪ್ರಸಾದ್ ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

8 minutes ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

14 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

14 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

21 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

23 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

1 day ago