ಸುಳ್ಯ: ಕಾರ್ಯಕರ್ತರ ಮುಂದೆ ಅಸಹಕಾರ ಚಳವಳಿಯ ನಾಟಕ ಮಾಡುವ ಬಿಜೆಪಿ ನಾಯಕರು ಕದ್ದು ಮುಚ್ಚಿ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸುತ್ತಾರೆ. ಇದೆಲ್ಲವನ್ನು ನೋಡುವಾಗ ಬಿಜೆಪಿಗರು ಒಳಗೊಂದು – ಹೊರಗೊಂದು ಮಾತನಾಡುವವರು. ಇವರಿಗೆ ಕಾರ್ಯಕರ್ತರ, ಜನರ ಬಗ್ಗೆಯಾಗಲೀ ಅಥವಾ ಶಾಸಕ ಅಂಗಾರ ಅವರ ಬಗ್ಗೆ ಆಗಲೀ ಕಾಳಜಿ ಇಲ್ಲ. ಬದಲಾಗಿ ಇವರಿಗೆ ಇರುವುದು ಸ್ವಾರ್ಥ ಲಾಭದ ರಾಜಕೀಯ ಎಂದು ಕೆ.ಪಿ.ಸಿ.ಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಸಹಾಕಾರ ಚಳುವಳಿ ಕಾಂಗ್ರೆಸ್ ನವರ ಸೃಷ್ಠಿ ಎಂಬ ನಳಿನ್ ಕುಮಾರ್ ಕಟೀಲ್ ಹೇಳಿಕೆಯನ್ನು ಖಂಡಿಸಿದರು. ಬಿಜೆಪಿ ಕಚೇರಿಯಲ್ಲಿ 300ರಷ್ಟು ಮಂದಿ ಜನಪ್ರತಿನಿಧಿಗಳು ಸೇರಿ ಸಭೆ ನಡೆಸಿ ನಿರ್ಧಾರ ಕೈಗೊಂಡು ಅಸಹಕಾರ ಚಳವಳಿ ಎಂದು ಘೋಷಿಸಿದ್ದು ಬಿಜೆಪಿಗರೋ ಅಥವಾ ಕಾಂಗ್ರೆಸ್-ಜೆಡಿಎಸ್ ನವರೋ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೊದಲು ತಿಳಿದುಕೊಳ್ಳಲಿ. ಆ ಬಳಿಕ ಕಾಂಗ್ರೆಸ್ ಮೇಲೆ ಆರೋಪ ಮಾಡಲಿ ಎಂದು ಹೇಳಿದರು. ಅಂಗಾರರು ಮಂತ್ರಿ ಪದವಿಯಿಂದ ವಂಚಿತರಾದಾಗ ಬಿಜೆಪಿಯವರು ಅಸಹಕಾರದ ನಿರ್ಣಯ ಕೈಗೊಂಡ ಸಂದರ್ಭ ನೀವು ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಚಳವಳಿ ಮಾಡಿ ಎಂದು ನಾವು ಸಲಹೆ ನೀಡಿದ್ದೆವು. ಆದರೆ ಬಿಜೆಪಿಯವರ ಚಳವಳಿ ಕೇವಲ ನಾಟಕ ಎಂದು ಈಗ ಸಾಬೀತಾಯಿತು ಎಂದು ಅವರು ಟೀಕಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದೀಕ್, ನ.ಪಂ.ಸದಸ್ಯ ಶರೀಫ್ ಕಂಠಿ, ಲಕ್ಷ್ಮಣ ಶೆಣೈ, ಕೆ.ಕೆ.ಹರಿಪ್ರಸಾದ್ ಇದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…