Advertisement
Categories: Political mirror

ಬಿಜೆಪಿಯದ್ದು ಅಸಹಕಾರದ ನಾಟಕ: ಎಂ. ವೆಂಕಪ್ಪ ಗೌಡ ಲೇವಡಿ

Share

ಸುಳ್ಯ: ಕಾರ್ಯಕರ್ತರ ಮುಂದೆ ಅಸಹಕಾರ ಚಳವಳಿಯ ನಾಟಕ ಮಾಡುವ ಬಿಜೆಪಿ ನಾಯಕರು ಕದ್ದು ಮುಚ್ಚಿ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸುತ್ತಾರೆ. ಇದೆಲ್ಲವನ್ನು ನೋಡುವಾಗ ಬಿಜೆಪಿಗರು ಒಳಗೊಂದು – ಹೊರಗೊಂದು ಮಾತನಾಡುವವರು. ಇವರಿಗೆ ಕಾರ್ಯಕರ್ತರ, ಜನರ ಬಗ್ಗೆಯಾಗಲೀ ಅಥವಾ ಶಾಸಕ ಅಂಗಾರ ಅವರ ಬಗ್ಗೆ ಆಗಲೀ ಕಾಳಜಿ ಇಲ್ಲ. ಬದಲಾಗಿ ಇವರಿಗೆ ಇರುವುದು ಸ್ವಾರ್ಥ ಲಾಭದ ರಾಜಕೀಯ ಎಂದು ಕೆ.ಪಿ‌.ಸಿ.ಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಆರೋಪಿಸಿದ್ದಾರೆ.

 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಸಹಾಕಾರ ಚಳುವಳಿ ಕಾಂಗ್ರೆಸ್ ನವರ ಸೃಷ್ಠಿ ಎಂಬ ನಳಿನ್ ಕುಮಾರ್ ಕಟೀಲ್ ಹೇಳಿಕೆಯನ್ನು ಖಂಡಿಸಿದರು. ಬಿಜೆಪಿ ಕಚೇರಿಯಲ್ಲಿ 300ರಷ್ಟು ಮಂದಿ ಜನಪ್ರತಿನಿಧಿಗಳು ಸೇರಿ ಸಭೆ ನಡೆಸಿ ನಿರ್ಧಾರ ಕೈಗೊಂಡು ಅಸಹಕಾರ ಚಳವಳಿ ಎಂದು ಘೋಷಿಸಿದ್ದು ಬಿಜೆಪಿಗರೋ ಅಥವಾ ಕಾಂಗ್ರೆಸ್-ಜೆಡಿಎಸ್ ನವರೋ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಮೊದಲು ತಿಳಿದುಕೊಳ್ಳಲಿ. ಆ ಬಳಿಕ ಕಾಂಗ್ರೆಸ್ ಮೇಲೆ ಆರೋಪ ಮಾಡಲಿ ಎಂದು ಹೇಳಿದರು. ಅಂಗಾರರು ಮಂತ್ರಿ ಪದವಿಯಿಂದ ವಂಚಿತರಾದಾಗ ಬಿಜೆಪಿಯವರು ಅಸಹಕಾರದ ನಿರ್ಣಯ ಕೈಗೊಂಡ ಸಂದರ್ಭ ನೀವು ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಚಳವಳಿ ಮಾಡಿ ಎಂದು ನಾವು ಸಲಹೆ ನೀಡಿದ್ದೆವು. ಆದರೆ ಬಿಜೆಪಿಯವರ ಚಳವಳಿ ಕೇವಲ ನಾಟಕ ಎಂದು ಈಗ ಸಾಬೀತಾಯಿತು ಎಂದು ಅವರು ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದೀಕ್, ನ.ಪಂ.ಸದಸ್ಯ ಶರೀಫ್ ಕಂಠಿ, ಲಕ್ಷ್ಮಣ ಶೆಣೈ, ಕೆ.ಕೆ.ಹರಿಪ್ರಸಾದ್ ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

6 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

10 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

10 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

19 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

1 day ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

1 day ago