ಬಿಜೆಪಿಯವರು ರಾಜ್ಯ ಬಿಜೆಪಿ ಕಚೇರಿ ಎದುರಿನಲ್ಲಿ ಚಳುವಳಿ ನಡೆಸಲಿ- ವೆಂಕಪ್ಪ ಗೌಡ ಟಾಂಗ್

August 22, 2019
12:42 PM

ಸುಳ್ಯ: ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂದು ಸುಳ್ಯದ ಬಿಜೆಪಿ ನಾಯಕರಿಗೆ ನಿಜವಾದ ಕಾಳಜಿ ಇದ್ದರೆ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿ ಎದುರು ಚಳುವಳಿ ನಡೆಸಲಿ ಎಂದು ಕೆ.ಪಿ‌.ಸಿ.ಸಿ. ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ. ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯ ಬಿಜೆಪಿ ಘೋಷಿಸಿರುವ ಅಸಹಕಾರ ಚಳುವಳಿ ಜನರನ್ನು ಮೂರ್ಖರನ್ನಾಗಿ ಮಾಡುವ ನಾಟಕ. ಈ ನಾಟಕ ನಿಲ್ಲಿಸಿ ಸಚಿವ ಸ್ಥಾನ ಸಿಗುವ ತನಕ ರಾಜ್ಯ ಬಿಜೆಪಿ ಕಚೇರಿ ಎದುರು ಧರಣಿ ಮಾಡಿ ಎಂದರು.

Advertisement

ರಾಜಕೀಯವಾದ ಭಿನ್ನಾಭಿಪ್ರಾಯ ಇದ್ದರೂ ಸುಳ್ಯ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಶಾಸಕ ಅಂಗಾರರಿಗೆ ಸಚಿವ ಸ್ಥಾನ ಸಿಗಬೇಕಿತ್ತು. ಆದರೆ ಚುನಾವಣಾ ಸಂದರ್ಭದಲ್ಲಿ ಅಂಗಾರರನ್ನು ಸಚಿವರನ್ನಾಗಿ ಮಾಡುತ್ತೇವೆ ಎಂದು ಮತ ಪಡೆದು ಕ್ಷೇತ್ರದ ಜನತೆಗೆ ಬಿಜೆಪಿ ಅನ್ಯಾಯ ಮಾಡಿದೆ.ಈ ಮೂಲಕ ಬಿಜೆಪಿಯ ದಲಿತ ವಿರೋಧಿ ನೀತಿ ಮತ್ತೊಮ್ಮೆ ಸಾಬೀತಾಗಿದೆ ಎಂದು ಅವರು ಆರೋಪಿಸಿದರು. ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೋಂಡಿದ್ದು ರಾಜ್ಯ ಸರಕಾರ ಆರು ತಿಂಗಳಲ್ಲಿ ಪತನವಾಗಲಿದೆ ಎಂದು ಭವಿಷ್ಯ ನುಡಿದರು.

ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಗೌಡ ಕೊಯಿಂಗಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಪ್ರಮುಖರಾದ ನಂದರಾಜ ಸಂಕೇಶ, ಅಚ್ಚುತ ಮಲ್ಕಜೆ, ಲಕ್ಷ್ಮಣ ಶಣೈ ಉಪಸ್ಥಿತರಿದ್ದರು.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ
August 14, 2025
8:55 PM
by: The Rural Mirror ಸುದ್ದಿಜಾಲ
ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ
August 14, 2025
2:53 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ
August 14, 2025
2:48 PM
by: ಸಾಯಿಶೇಖರ್ ಕರಿಕಳ
ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!
August 14, 2025
7:39 AM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror

Join Our Group