ಸುಳ್ಯ: ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂದು ಸುಳ್ಯದ ಬಿಜೆಪಿ ನಾಯಕರಿಗೆ ನಿಜವಾದ ಕಾಳಜಿ ಇದ್ದರೆ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿ ಎದುರು ಚಳುವಳಿ ನಡೆಸಲಿ ಎಂದು ಕೆ.ಪಿ.ಸಿ.ಸಿ. ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ. ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯ ಬಿಜೆಪಿ ಘೋಷಿಸಿರುವ ಅಸಹಕಾರ ಚಳುವಳಿ ಜನರನ್ನು ಮೂರ್ಖರನ್ನಾಗಿ ಮಾಡುವ ನಾಟಕ. ಈ ನಾಟಕ ನಿಲ್ಲಿಸಿ ಸಚಿವ ಸ್ಥಾನ ಸಿಗುವ ತನಕ ರಾಜ್ಯ ಬಿಜೆಪಿ ಕಚೇರಿ ಎದುರು ಧರಣಿ ಮಾಡಿ ಎಂದರು.
ರಾಜಕೀಯವಾದ ಭಿನ್ನಾಭಿಪ್ರಾಯ ಇದ್ದರೂ ಸುಳ್ಯ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಶಾಸಕ ಅಂಗಾರರಿಗೆ ಸಚಿವ ಸ್ಥಾನ ಸಿಗಬೇಕಿತ್ತು. ಆದರೆ ಚುನಾವಣಾ ಸಂದರ್ಭದಲ್ಲಿ ಅಂಗಾರರನ್ನು ಸಚಿವರನ್ನಾಗಿ ಮಾಡುತ್ತೇವೆ ಎಂದು ಮತ ಪಡೆದು ಕ್ಷೇತ್ರದ ಜನತೆಗೆ ಬಿಜೆಪಿ ಅನ್ಯಾಯ ಮಾಡಿದೆ.ಈ ಮೂಲಕ ಬಿಜೆಪಿಯ ದಲಿತ ವಿರೋಧಿ ನೀತಿ ಮತ್ತೊಮ್ಮೆ ಸಾಬೀತಾಗಿದೆ ಎಂದು ಅವರು ಆರೋಪಿಸಿದರು. ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೋಂಡಿದ್ದು ರಾಜ್ಯ ಸರಕಾರ ಆರು ತಿಂಗಳಲ್ಲಿ ಪತನವಾಗಲಿದೆ ಎಂದು ಭವಿಷ್ಯ ನುಡಿದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಗೌಡ ಕೊಯಿಂಗಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಪ್ರಮುಖರಾದ ನಂದರಾಜ ಸಂಕೇಶ, ಅಚ್ಚುತ ಮಲ್ಕಜೆ, ಲಕ್ಷ್ಮಣ ಶಣೈ ಉಪಸ್ಥಿತರಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…