Advertisement
ಸುದ್ದಿಗಳು

ಬಿಜೆಪಿಯವರು ರಾಜ್ಯ ಬಿಜೆಪಿ ಕಚೇರಿ ಎದುರಿನಲ್ಲಿ ಚಳುವಳಿ ನಡೆಸಲಿ- ವೆಂಕಪ್ಪ ಗೌಡ ಟಾಂಗ್

Share

ಸುಳ್ಯ: ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂದು ಸುಳ್ಯದ ಬಿಜೆಪಿ ನಾಯಕರಿಗೆ ನಿಜವಾದ ಕಾಳಜಿ ಇದ್ದರೆ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿ ಎದುರು ಚಳುವಳಿ ನಡೆಸಲಿ ಎಂದು ಕೆ.ಪಿ‌.ಸಿ.ಸಿ. ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ. ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯ ಬಿಜೆಪಿ ಘೋಷಿಸಿರುವ ಅಸಹಕಾರ ಚಳುವಳಿ ಜನರನ್ನು ಮೂರ್ಖರನ್ನಾಗಿ ಮಾಡುವ ನಾಟಕ. ಈ ನಾಟಕ ನಿಲ್ಲಿಸಿ ಸಚಿವ ಸ್ಥಾನ ಸಿಗುವ ತನಕ ರಾಜ್ಯ ಬಿಜೆಪಿ ಕಚೇರಿ ಎದುರು ಧರಣಿ ಮಾಡಿ ಎಂದರು.

ರಾಜಕೀಯವಾದ ಭಿನ್ನಾಭಿಪ್ರಾಯ ಇದ್ದರೂ ಸುಳ್ಯ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಶಾಸಕ ಅಂಗಾರರಿಗೆ ಸಚಿವ ಸ್ಥಾನ ಸಿಗಬೇಕಿತ್ತು. ಆದರೆ ಚುನಾವಣಾ ಸಂದರ್ಭದಲ್ಲಿ ಅಂಗಾರರನ್ನು ಸಚಿವರನ್ನಾಗಿ ಮಾಡುತ್ತೇವೆ ಎಂದು ಮತ ಪಡೆದು ಕ್ಷೇತ್ರದ ಜನತೆಗೆ ಬಿಜೆಪಿ ಅನ್ಯಾಯ ಮಾಡಿದೆ.ಈ ಮೂಲಕ ಬಿಜೆಪಿಯ ದಲಿತ ವಿರೋಧಿ ನೀತಿ ಮತ್ತೊಮ್ಮೆ ಸಾಬೀತಾಗಿದೆ ಎಂದು ಅವರು ಆರೋಪಿಸಿದರು. ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೋಂಡಿದ್ದು ರಾಜ್ಯ ಸರಕಾರ ಆರು ತಿಂಗಳಲ್ಲಿ ಪತನವಾಗಲಿದೆ ಎಂದು ಭವಿಷ್ಯ ನುಡಿದರು.

ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಗೌಡ ಕೊಯಿಂಗಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಪ್ರಮುಖರಾದ ನಂದರಾಜ ಸಂಕೇಶ, ಅಚ್ಚುತ ಮಲ್ಕಜೆ, ಲಕ್ಷ್ಮಣ ಶಣೈ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

3 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

4 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

5 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

6 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

19 hours ago