ಸುಳ್ಯ: ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂದು ಸುಳ್ಯದ ಬಿಜೆಪಿ ನಾಯಕರಿಗೆ ನಿಜವಾದ ಕಾಳಜಿ ಇದ್ದರೆ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿ ಎದುರು ಚಳುವಳಿ ನಡೆಸಲಿ ಎಂದು ಕೆ.ಪಿ.ಸಿ.ಸಿ. ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ. ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯ ಬಿಜೆಪಿ ಘೋಷಿಸಿರುವ ಅಸಹಕಾರ ಚಳುವಳಿ ಜನರನ್ನು ಮೂರ್ಖರನ್ನಾಗಿ ಮಾಡುವ ನಾಟಕ. ಈ ನಾಟಕ ನಿಲ್ಲಿಸಿ ಸಚಿವ ಸ್ಥಾನ ಸಿಗುವ ತನಕ ರಾಜ್ಯ ಬಿಜೆಪಿ ಕಚೇರಿ ಎದುರು ಧರಣಿ ಮಾಡಿ ಎಂದರು.
ರಾಜಕೀಯವಾದ ಭಿನ್ನಾಭಿಪ್ರಾಯ ಇದ್ದರೂ ಸುಳ್ಯ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಶಾಸಕ ಅಂಗಾರರಿಗೆ ಸಚಿವ ಸ್ಥಾನ ಸಿಗಬೇಕಿತ್ತು. ಆದರೆ ಚುನಾವಣಾ ಸಂದರ್ಭದಲ್ಲಿ ಅಂಗಾರರನ್ನು ಸಚಿವರನ್ನಾಗಿ ಮಾಡುತ್ತೇವೆ ಎಂದು ಮತ ಪಡೆದು ಕ್ಷೇತ್ರದ ಜನತೆಗೆ ಬಿಜೆಪಿ ಅನ್ಯಾಯ ಮಾಡಿದೆ.ಈ ಮೂಲಕ ಬಿಜೆಪಿಯ ದಲಿತ ವಿರೋಧಿ ನೀತಿ ಮತ್ತೊಮ್ಮೆ ಸಾಬೀತಾಗಿದೆ ಎಂದು ಅವರು ಆರೋಪಿಸಿದರು. ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೋಂಡಿದ್ದು ರಾಜ್ಯ ಸರಕಾರ ಆರು ತಿಂಗಳಲ್ಲಿ ಪತನವಾಗಲಿದೆ ಎಂದು ಭವಿಷ್ಯ ನುಡಿದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಗೌಡ ಕೊಯಿಂಗಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಪ್ರಮುಖರಾದ ನಂದರಾಜ ಸಂಕೇಶ, ಅಚ್ಚುತ ಮಲ್ಕಜೆ, ಲಕ್ಷ್ಮಣ ಶಣೈ ಉಪಸ್ಥಿತರಿದ್ದರು.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…