ಸುಳ್ಯ: ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರ ದ್ವೇಷದ ರಾಜಕಾರಣವನ್ನು ಮಾಡುತ್ತಿದೆ ಎಂದು ಬ್ಲಾಕ್ ಮಹಿಳಾ ಕಾಂಗ್ರೆಸ್ ಆರೋಪಿಸಿದೆ.
ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಸುಳ್ಯ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಕೋಲ್ಚಾರ್ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಂಧನ ರಾಜಕೀಯ ದುರುದ್ದೇಶದಿಂದ ನಡೆದಿದೆ. ಇದನ್ನು ಮಹಿಳಾ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧ ಸೇಡು ತೀರಿಸುವ ಉದ್ದೇಶದಿಂದ ಡಿಕೆಶಿ ಅವರನ್ನು ಗುರಿಯಾಗಿಸಿದ್ದಾರೆ. ಕೇಂದ್ರ ಸರಕಾರ ತನ್ನ ಆಡಳಿತ ವೈಫಲ್ಯವನ್ನು ಮರೆ ಮಾಚಲು ಈ ರೀತಿ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಹೇಳಿದರು. ಡಿ.ಕೆ.ಶಿ ಬಂಧನ ಖಂಡಿಸಿ ಸೆ.6 ರಂದು ಸುಳ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಹಿಳಾ ಕಾಂಗ್ರೆಸ್ ಪ್ರಮುಖರಾದ ತಿರುಮಲೇಶ್ವರಿ ಅರ್ಭಡ್ಕ, ಪ್ರವೀಣಾ ರೈ ಮರುವಂಜ, ಮೊಹಿನಿ ಪೆಲ್ತಡ್ಕ, ಶ್ರೀಲತಾ ಪ್ರಸನ್ನ ಉಪಸ್ಥಿತರಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…