ಸುಳ್ಯ: ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರ ದ್ವೇಷದ ರಾಜಕಾರಣವನ್ನು ಮಾಡುತ್ತಿದೆ ಎಂದು ಬ್ಲಾಕ್ ಮಹಿಳಾ ಕಾಂಗ್ರೆಸ್ ಆರೋಪಿಸಿದೆ.
ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಸುಳ್ಯ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಕೋಲ್ಚಾರ್ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಂಧನ ರಾಜಕೀಯ ದುರುದ್ದೇಶದಿಂದ ನಡೆದಿದೆ. ಇದನ್ನು ಮಹಿಳಾ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧ ಸೇಡು ತೀರಿಸುವ ಉದ್ದೇಶದಿಂದ ಡಿಕೆಶಿ ಅವರನ್ನು ಗುರಿಯಾಗಿಸಿದ್ದಾರೆ. ಕೇಂದ್ರ ಸರಕಾರ ತನ್ನ ಆಡಳಿತ ವೈಫಲ್ಯವನ್ನು ಮರೆ ಮಾಚಲು ಈ ರೀತಿ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಹೇಳಿದರು. ಡಿ.ಕೆ.ಶಿ ಬಂಧನ ಖಂಡಿಸಿ ಸೆ.6 ರಂದು ಸುಳ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಹಿಳಾ ಕಾಂಗ್ರೆಸ್ ಪ್ರಮುಖರಾದ ತಿರುಮಲೇಶ್ವರಿ ಅರ್ಭಡ್ಕ, ಪ್ರವೀಣಾ ರೈ ಮರುವಂಜ, ಮೊಹಿನಿ ಪೆಲ್ತಡ್ಕ, ಶ್ರೀಲತಾ ಪ್ರಸನ್ನ ಉಪಸ್ಥಿತರಿದ್ದರು.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…