ಸುಳ್ಯ: ಭಾರತೀಯ ಜನತಾ ಪಾರ್ಟಿಯ ಸುಳ್ಯ ಮಂಡಲ ಮಟ್ಟದ ಜನಸಂವಾದ ವರ್ಚುವಲ್ ರ್ಯಾಲಿ ಜುಲೈ ಎರಡರಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಛೇರಿಯ ಮುಖಾಂತರ ನಡೆದಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ವಹಿಸಿದ್ದರು. ಶಾಸಕ ಎಸ್. ಅಂಗಾರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮುಖ್ಯ ಭಾಷಣಕಾರರಾಗಿ ಬಿಜೆಪಿ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿದರು. ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮ್ ದಾಸ್ ಬಂಟ್ವಾಳ ಹಾಗೂ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಕಾರ್ಯದರ್ಶಿ ಕೇಶವ ಭಟ್ ಮುಳಿಯ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಗುರುದತ್ ಜಿ ನಾಯಕ್ ಮತ್ತು ಜಿಲ್ಲೆಯ ಮಾಧ್ಯಮ ಪ್ರಮುಖ್ ರಣದೀಪ್ ಕಾಂಚನ್ ಉಪಸ್ಥಿತರಿದ್ದರು. ಸುಳ್ಯ ಮಂಡಲ ಕಾರ್ಯದರ್ಶಿ ಇಂದಿರಾ ಬಿ.ಕೆ. ಸ್ವಾಗತಿಸಿದರು.
ಪ್ರಧಾನ ಕಾರ್ಯದರ್ಶಿಗಳಾದ ಸುಬೋಧ್ ಶೆಟ್ಟಿ ಮೇನಾಲ ಧನ್ಯವಾದ ಅರ್ಪಿಸಿದರು ಮತ್ತು ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಕ್ರಮವನ್ನು ಸುಮಾರು 2000 ಜನ ಸುಳ್ಯ ಮಂಡಲದ ಕಾರ್ಯಕರ್ತರು ಮೊಬೈಲ್ ಫೋನ್ ಮತ್ತು ಕಂಪ್ಯೂಟರ್ ಮುಖಾಂತರ ವೀಕ್ಷಣೆ ಮಾಡಿದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…