ಸುಳ್ಯ: ಭಾರತೀಯ ಜನತಾ ಪಾರ್ಟಿಯ ಸುಳ್ಯ ಮಂಡಲ ಮಟ್ಟದ ಜನಸಂವಾದ ವರ್ಚುವಲ್ ರ್ಯಾಲಿ ಜುಲೈ ಎರಡರಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಛೇರಿಯ ಮುಖಾಂತರ ನಡೆದಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ವಹಿಸಿದ್ದರು. ಶಾಸಕ ಎಸ್. ಅಂಗಾರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮುಖ್ಯ ಭಾಷಣಕಾರರಾಗಿ ಬಿಜೆಪಿ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿದರು. ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮ್ ದಾಸ್ ಬಂಟ್ವಾಳ ಹಾಗೂ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಕಾರ್ಯದರ್ಶಿ ಕೇಶವ ಭಟ್ ಮುಳಿಯ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಗುರುದತ್ ಜಿ ನಾಯಕ್ ಮತ್ತು ಜಿಲ್ಲೆಯ ಮಾಧ್ಯಮ ಪ್ರಮುಖ್ ರಣದೀಪ್ ಕಾಂಚನ್ ಉಪಸ್ಥಿತರಿದ್ದರು. ಸುಳ್ಯ ಮಂಡಲ ಕಾರ್ಯದರ್ಶಿ ಇಂದಿರಾ ಬಿ.ಕೆ. ಸ್ವಾಗತಿಸಿದರು.
ಪ್ರಧಾನ ಕಾರ್ಯದರ್ಶಿಗಳಾದ ಸುಬೋಧ್ ಶೆಟ್ಟಿ ಮೇನಾಲ ಧನ್ಯವಾದ ಅರ್ಪಿಸಿದರು ಮತ್ತು ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಕ್ರಮವನ್ನು ಸುಮಾರು 2000 ಜನ ಸುಳ್ಯ ಮಂಡಲದ ಕಾರ್ಯಕರ್ತರು ಮೊಬೈಲ್ ಫೋನ್ ಮತ್ತು ಕಂಪ್ಯೂಟರ್ ಮುಖಾಂತರ ವೀಕ್ಷಣೆ ಮಾಡಿದರು.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…