ಬಿಜೆಪಿ ಜಾಲ್ಸೂರು ಗ್ರಾಮ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಕೆಮನಬಳ್ಳಿ ರಾಜಿನಾಮೆ

July 18, 2019
2:46 PM

ಸುಳ್ಯ: ಜಾಲ್ಸೂರು ಗ್ರಾಮ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಕೆಮನಬಳ್ಳಿ ರಾಜಿನಾಮೆ ನೀಡಿದ್ದಾರೆ. ವೈಯುಕ್ತಿಕ ಕಾರಣಗಳಿಂದ ರಾಜಿನಾಮೆ ಸಲ್ಲಿಸುತ್ತಿರುವುದಾಗಿ ಅವರು ತಮ್ಮ ರಾಜಿನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಇಂದು ಬೆಳಿಗ್ಗೆ ತಮ್ಮ ರಾಜಿನಾಮೆಯನ್ನು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

Advertisement
Advertisement

ಅಡ್ಡಮತದಾನದ ಇಫೆಕ್ಟ್.? :

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರೂ ಆಗಿರುವ ಸತೀಶ್ ಕೆಮನಬಳ್ಳಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಪ್ರತಿನಿಧಿಯಾಗಿದ್ದರು. ಏಳು ಮಂದಿ ಅಡ್ಡಮತದಾನ ಮಾಡಿದ ಕಾರಣ ಸಹಕಾರ ಭಾರತಿ ಅಭ್ಯರ್ಥಿಗೆ ಸೋಲಾಗಿತ್ತು. ಈ ಹಿನ್ನಲೆಯಲ್ಲಿ ಎಲ್ಲಾ 17 ಮಂದಿಯೂ ರಾಜಿನಾಮೆ ನೀಡಬೇಕು ಎಂದು ಸಂಘ ಪರಿವಾರ ಸೂಚಿಸಿತ್ತು. ಆದರೆ ಕೆಲವೇ ಕೆಲವು ಮಂದಿ ಮಾತ್ರ ರಾಜಿನಾಮೆ ನೀಡಿದ್ದರು. ಇದರಿಂದ ಎಲ್ಲಾ 17 ಮಂದಿಯ ವಿರುದ್ಧ ಬಿಜೆಪಿ ಮತ್ತು ಸಂಘ ಪರಿವಾರ ಕ್ರಮಕ್ಕೆ ಮುಂದಾಗಿದೆ. ಈ ಹಿನ್ನಲೆಯಲ್ಲಿ ಸತೀಶ್ ಕೆಮನಬಳ್ಳಿ ಗ್ರಾಮ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.

ಸೊಸೈಟಿ ಅಧ್ಯಕ್ಷತೆಗೆ ರಾಜಿನಾಮೆ ಇಲ್ಲ:

ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ತಾನು ಸಹಕಾರ ಭಾರತಿ ಅಭ್ಯರ್ಥಿಯ ಪರವಾಗಿ ಪ್ರಾಮಾಣಿಕವಾಗಿ ಮತ ಚಲಾಯಿಸಿದ್ದೇನೆ. ಆದ ಕಾರಣ ಕನಕಮಜಲು ಸಹಕಾರಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸದ್ಯ ರಾಜಿನಾಮೆ ನೀಡುವುದಿಲ್ಲ ಎಂದು ಸತೀಶ್ ಕೆಮನಬಳ್ಳಿ ಪ್ರತಿಕ್ರಿಯಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ ಅಗತ್ಯವಿಲ್ಲ ಎಂದು ಸಹಕಾರಿ ಸಂಘದ ಆಡಳಿತ ಮಂಡಳಿಯ ಸಭೆಯಲ್ಲೂ ನಿರ್ಧರಿಸಲಾಗಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

Advertisement

 

ಬಿಜೆಪಿಯಿಂದ ಕ್ರಮ ಶೀಘ್ರ:

ಅಡ್ಡ ಮತದಾನಕ್ಕೆ ಸಂಬಂಧಿಸಿ ಚುನಾವಣಾ ಪ್ರತಿನಿಧಿಗಳಾಗಿದ್ದ 17 ಮಂದಿಯೂ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಬೇಕು ಎಂದು ಬಿಜೆಪಿ ಮತ್ತು ಸಂಘ ಪರಿವಾರದ ಕಡೆಯಿಂದ ಖಡಕ್ ಆದೇಶ ನೀಡಿದರೂ ಬಹುತೇಕ ಮಂದಿಯೂ ಕ್ಯಾರೇ ಎನ್ನಲಿಲ್ಲ. ಬೆರಳೆಣಿಕೆಯ ಮಂದಿ ಮಾತ್ರ ರಾಜಿನಾಮೆ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಕಠಿಣ ಕ್ರಮಕ್ಕೆ ಮುಂದಾಗಿರುವ ಬಿಜೆಪಿ ಏನು ಕ್ರಮ ಎಂಬುದನ್ನು ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಈ ಕುರಿತು ಹಲವು ಸುತ್ತಿನ ಪಕ್ಷದ ಉನ್ನತ ಮಟ್ಟದ ಸಭೆ ನಡೆದಿದೆ.

ಪಕ್ಷದ ಸ್ಥಾನಮಾನಗಳಿಂದ ಮುಕ್ತಗೊಳಿಸುವುದು, ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು, ಉಚ್ಚಾಟನೆ ಸೇರಿದ ಕ್ರಮಗಳ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ
May 31, 2025
9:45 PM
by: The Rural Mirror ಸುದ್ದಿಜಾಲ
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ
May 31, 2025
9:31 PM
by: The Rural Mirror ಸುದ್ದಿಜಾಲ
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ
May 31, 2025
9:17 PM
by: The Rural Mirror ಸುದ್ದಿಜಾಲ
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ
May 31, 2025
9:12 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group