Advertisement
ಸುದ್ದಿಗಳು

ಬಿಜೆಪಿ ಜಾಲ್ಸೂರು ಗ್ರಾಮ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಕೆಮನಬಳ್ಳಿ ರಾಜಿನಾಮೆ

Share

ಸುಳ್ಯ: ಜಾಲ್ಸೂರು ಗ್ರಾಮ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಕೆಮನಬಳ್ಳಿ ರಾಜಿನಾಮೆ ನೀಡಿದ್ದಾರೆ. ವೈಯುಕ್ತಿಕ ಕಾರಣಗಳಿಂದ ರಾಜಿನಾಮೆ ಸಲ್ಲಿಸುತ್ತಿರುವುದಾಗಿ ಅವರು ತಮ್ಮ ರಾಜಿನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಇಂದು ಬೆಳಿಗ್ಗೆ ತಮ್ಮ ರಾಜಿನಾಮೆಯನ್ನು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಅಡ್ಡಮತದಾನದ ಇಫೆಕ್ಟ್.? :

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರೂ ಆಗಿರುವ ಸತೀಶ್ ಕೆಮನಬಳ್ಳಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಪ್ರತಿನಿಧಿಯಾಗಿದ್ದರು. ಏಳು ಮಂದಿ ಅಡ್ಡಮತದಾನ ಮಾಡಿದ ಕಾರಣ ಸಹಕಾರ ಭಾರತಿ ಅಭ್ಯರ್ಥಿಗೆ ಸೋಲಾಗಿತ್ತು. ಈ ಹಿನ್ನಲೆಯಲ್ಲಿ ಎಲ್ಲಾ 17 ಮಂದಿಯೂ ರಾಜಿನಾಮೆ ನೀಡಬೇಕು ಎಂದು ಸಂಘ ಪರಿವಾರ ಸೂಚಿಸಿತ್ತು. ಆದರೆ ಕೆಲವೇ ಕೆಲವು ಮಂದಿ ಮಾತ್ರ ರಾಜಿನಾಮೆ ನೀಡಿದ್ದರು. ಇದರಿಂದ ಎಲ್ಲಾ 17 ಮಂದಿಯ ವಿರುದ್ಧ ಬಿಜೆಪಿ ಮತ್ತು ಸಂಘ ಪರಿವಾರ ಕ್ರಮಕ್ಕೆ ಮುಂದಾಗಿದೆ. ಈ ಹಿನ್ನಲೆಯಲ್ಲಿ ಸತೀಶ್ ಕೆಮನಬಳ್ಳಿ ಗ್ರಾಮ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.

ಸೊಸೈಟಿ ಅಧ್ಯಕ್ಷತೆಗೆ ರಾಜಿನಾಮೆ ಇಲ್ಲ:

ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ತಾನು ಸಹಕಾರ ಭಾರತಿ ಅಭ್ಯರ್ಥಿಯ ಪರವಾಗಿ ಪ್ರಾಮಾಣಿಕವಾಗಿ ಮತ ಚಲಾಯಿಸಿದ್ದೇನೆ. ಆದ ಕಾರಣ ಕನಕಮಜಲು ಸಹಕಾರಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸದ್ಯ ರಾಜಿನಾಮೆ ನೀಡುವುದಿಲ್ಲ ಎಂದು ಸತೀಶ್ ಕೆಮನಬಳ್ಳಿ ಪ್ರತಿಕ್ರಿಯಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ ಅಗತ್ಯವಿಲ್ಲ ಎಂದು ಸಹಕಾರಿ ಸಂಘದ ಆಡಳಿತ ಮಂಡಳಿಯ ಸಭೆಯಲ್ಲೂ ನಿರ್ಧರಿಸಲಾಗಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

 

ಬಿಜೆಪಿಯಿಂದ ಕ್ರಮ ಶೀಘ್ರ:

ಅಡ್ಡ ಮತದಾನಕ್ಕೆ ಸಂಬಂಧಿಸಿ ಚುನಾವಣಾ ಪ್ರತಿನಿಧಿಗಳಾಗಿದ್ದ 17 ಮಂದಿಯೂ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಬೇಕು ಎಂದು ಬಿಜೆಪಿ ಮತ್ತು ಸಂಘ ಪರಿವಾರದ ಕಡೆಯಿಂದ ಖಡಕ್ ಆದೇಶ ನೀಡಿದರೂ ಬಹುತೇಕ ಮಂದಿಯೂ ಕ್ಯಾರೇ ಎನ್ನಲಿಲ್ಲ. ಬೆರಳೆಣಿಕೆಯ ಮಂದಿ ಮಾತ್ರ ರಾಜಿನಾಮೆ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಕಠಿಣ ಕ್ರಮಕ್ಕೆ ಮುಂದಾಗಿರುವ ಬಿಜೆಪಿ ಏನು ಕ್ರಮ ಎಂಬುದನ್ನು ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಈ ಕುರಿತು ಹಲವು ಸುತ್ತಿನ ಪಕ್ಷದ ಉನ್ನತ ಮಟ್ಟದ ಸಭೆ ನಡೆದಿದೆ.

ಪಕ್ಷದ ಸ್ಥಾನಮಾನಗಳಿಂದ ಮುಕ್ತಗೊಳಿಸುವುದು, ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು, ಉಚ್ಚಾಟನೆ ಸೇರಿದ ಕ್ರಮಗಳ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

2 hours ago

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

3 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

3 days ago