Advertisement
ಸುದ್ದಿಗಳು

ಬಿಜೆಪಿ ಜಾಲ್ಸೂರು ಗ್ರಾಮ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಕೆಮನಬಳ್ಳಿ ರಾಜಿನಾಮೆ

Share

ಸುಳ್ಯ: ಜಾಲ್ಸೂರು ಗ್ರಾಮ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಕೆಮನಬಳ್ಳಿ ರಾಜಿನಾಮೆ ನೀಡಿದ್ದಾರೆ. ವೈಯುಕ್ತಿಕ ಕಾರಣಗಳಿಂದ ರಾಜಿನಾಮೆ ಸಲ್ಲಿಸುತ್ತಿರುವುದಾಗಿ ಅವರು ತಮ್ಮ ರಾಜಿನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಇಂದು ಬೆಳಿಗ್ಗೆ ತಮ್ಮ ರಾಜಿನಾಮೆಯನ್ನು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಅಡ್ಡಮತದಾನದ ಇಫೆಕ್ಟ್.? :

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರೂ ಆಗಿರುವ ಸತೀಶ್ ಕೆಮನಬಳ್ಳಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಪ್ರತಿನಿಧಿಯಾಗಿದ್ದರು. ಏಳು ಮಂದಿ ಅಡ್ಡಮತದಾನ ಮಾಡಿದ ಕಾರಣ ಸಹಕಾರ ಭಾರತಿ ಅಭ್ಯರ್ಥಿಗೆ ಸೋಲಾಗಿತ್ತು. ಈ ಹಿನ್ನಲೆಯಲ್ಲಿ ಎಲ್ಲಾ 17 ಮಂದಿಯೂ ರಾಜಿನಾಮೆ ನೀಡಬೇಕು ಎಂದು ಸಂಘ ಪರಿವಾರ ಸೂಚಿಸಿತ್ತು. ಆದರೆ ಕೆಲವೇ ಕೆಲವು ಮಂದಿ ಮಾತ್ರ ರಾಜಿನಾಮೆ ನೀಡಿದ್ದರು. ಇದರಿಂದ ಎಲ್ಲಾ 17 ಮಂದಿಯ ವಿರುದ್ಧ ಬಿಜೆಪಿ ಮತ್ತು ಸಂಘ ಪರಿವಾರ ಕ್ರಮಕ್ಕೆ ಮುಂದಾಗಿದೆ. ಈ ಹಿನ್ನಲೆಯಲ್ಲಿ ಸತೀಶ್ ಕೆಮನಬಳ್ಳಿ ಗ್ರಾಮ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.

ಸೊಸೈಟಿ ಅಧ್ಯಕ್ಷತೆಗೆ ರಾಜಿನಾಮೆ ಇಲ್ಲ:

ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ತಾನು ಸಹಕಾರ ಭಾರತಿ ಅಭ್ಯರ್ಥಿಯ ಪರವಾಗಿ ಪ್ರಾಮಾಣಿಕವಾಗಿ ಮತ ಚಲಾಯಿಸಿದ್ದೇನೆ. ಆದ ಕಾರಣ ಕನಕಮಜಲು ಸಹಕಾರಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸದ್ಯ ರಾಜಿನಾಮೆ ನೀಡುವುದಿಲ್ಲ ಎಂದು ಸತೀಶ್ ಕೆಮನಬಳ್ಳಿ ಪ್ರತಿಕ್ರಿಯಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ ಅಗತ್ಯವಿಲ್ಲ ಎಂದು ಸಹಕಾರಿ ಸಂಘದ ಆಡಳಿತ ಮಂಡಳಿಯ ಸಭೆಯಲ್ಲೂ ನಿರ್ಧರಿಸಲಾಗಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

 

ಬಿಜೆಪಿಯಿಂದ ಕ್ರಮ ಶೀಘ್ರ:

ಅಡ್ಡ ಮತದಾನಕ್ಕೆ ಸಂಬಂಧಿಸಿ ಚುನಾವಣಾ ಪ್ರತಿನಿಧಿಗಳಾಗಿದ್ದ 17 ಮಂದಿಯೂ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಬೇಕು ಎಂದು ಬಿಜೆಪಿ ಮತ್ತು ಸಂಘ ಪರಿವಾರದ ಕಡೆಯಿಂದ ಖಡಕ್ ಆದೇಶ ನೀಡಿದರೂ ಬಹುತೇಕ ಮಂದಿಯೂ ಕ್ಯಾರೇ ಎನ್ನಲಿಲ್ಲ. ಬೆರಳೆಣಿಕೆಯ ಮಂದಿ ಮಾತ್ರ ರಾಜಿನಾಮೆ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಕಠಿಣ ಕ್ರಮಕ್ಕೆ ಮುಂದಾಗಿರುವ ಬಿಜೆಪಿ ಏನು ಕ್ರಮ ಎಂಬುದನ್ನು ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಈ ಕುರಿತು ಹಲವು ಸುತ್ತಿನ ಪಕ್ಷದ ಉನ್ನತ ಮಟ್ಟದ ಸಭೆ ನಡೆದಿದೆ.

ಪಕ್ಷದ ಸ್ಥಾನಮಾನಗಳಿಂದ ಮುಕ್ತಗೊಳಿಸುವುದು, ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು, ಉಚ್ಚಾಟನೆ ಸೇರಿದ ಕ್ರಮಗಳ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

4 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

7 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

16 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

18 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

19 hours ago