ಸುಳ್ಯ: ಒಬ್ಬ ಸಾಮಾನ್ಯ ಕಾರ್ಯಕರ್ತನಿಗೂ ರಾಜ್ಯಾಧ್ಯಕ್ಷನಾಗುವ ಅವಕಾಶ ಇರುವುದು ಬಿಜೆಪಿಯಲ್ಲಿ ಮಾತ್ರ. ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತನೂ ಅಧ್ಯಕ್ಷನಾಗಲು ಅರ್ಹ. ಇಲ್ಲಿ ನಾನು ನಿಮ್ಮ ಪ್ರತಿನಿಧಿ ಅಷ್ಟೆ. ರಾಜ್ಯಾಧ್ಯಕ್ಷ ಎಂಬುದು ಹುದ್ದೆಯಲ್ಲ, ಅದು ಮಹತ್ತರವಾದ ಜವಾಬ್ಧಾರಿ. ಪಕ್ಷದ ಕಾರ್ಯಕರ್ತರ ನಂಬಿಕೆಗೆ ಚ್ಯುತಿ ಬಾರದಂತೆ ಆ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ. ನೀವು ಅರ್ಪಿಸಿದ ಸನ್ಮಾನ ಪಕ್ಷಕ್ಕೆ ಮತ್ತು ಕಾರ್ಯಕರ್ತರಿಗೆ ಸಂದದ್ದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೊದಲ ಬಾರಿ ಸುಳ್ಯ ಬಿಜೆಪಿ ಕಚೇರಿಗೆ ಆಗಮಿಸಿದ ಅವರು ಕಾರ್ಯಕರ್ತರ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಲೋಕಸಭೆಯಲ್ಲಿ 64 ಪಕ್ಷಗಳ ಪ್ರತಿನಿಧಿಗಳಿದ್ದಾರೆ. 63 ಪಕ್ಷಗಳು ವಂಶ ಪಾರಂಪರ್ಯ ಮತ್ತು ಜಾತಿಯ ಆಧಾರದಲ್ಲಿ ಆಯ್ಕೆ ನಡೆಸುತ್ತಿದ್ದರೆ, ಬಿಜೆಪಿಯಲ್ಲಿ ಮಾತ್ರ ಪ್ರಜಾಪ್ರಭುತ್ವದ ಆಧಾರದಲ್ಲಿ ಆಯ್ಕೆ ನಡೆಯುತ್ತದೆ ಎಂದು ಅವರು ಹೇಳಿದರು.
ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ 150 ಪ್ಲಸ್ ಸ್ಥಾನ:
ಮುಂದಿನ ಮೂರು ವರ್ಷ ಬಿಜೆಪಿ ಸರಕಾರವೇ ರಾಜ್ಯದಲ್ಲಿ ಆಡಳಿತ ನಡೆಸಲಿದೆ. ಬರುವ ಉಪ ಚುನಾವಣೆಯಲ್ಲಿ ಬಿಜೆಪಿ ಹದಿನೈದಕ್ಕೆ ಹದಿನೈದು ಸ್ಥಾನಗಳನ್ನೂ ಗೆಲ್ಲಲಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನೂರೈವತ್ತು ಪ್ಲಸ್ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಅವರು ಹೇಳಿದರು. ಹಿರಿಯರ ಮಾರ್ಗದರ್ಶನ ಮತ್ತು ಕಾರ್ಯಕರ್ತರ ಪಡೆಯೊಂದಿಗೆ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವುದಾಗಿ ಅವರು ಹೇಳಿದರು.
ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಎ.ವಿ.ತೀರ್ಥರಾಮ, ನ.ಪಂ. ಮಾಜಿ ಅಧ್ಯಕ್ಷರಾದ ಎನ್.ಎ. ರಾಮಚಂದ್ರ, ಪ್ರಕಾಶ್ ಹೆಗ್ಡೆ, ಪ್ರಮುಖರಾದ ಪಿ.ಕೆ. ಉಮೇಶ್, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ. ಹರೀಶ್ ಕಂಜಿಪಿಲಿ ಮತ್ತಿತರರು ಉಪಸ್ಥಿತರಿದ್ದರು.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…