ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಾರಾ ನಳಿನ್ ಕುಮಾರ್ ಕಟೀಲು ?

July 25, 2019
8:27 PM

# ಸ್ಪೆಶಲ್ ಕರೆಸ್ಪಾಂಡೆಂಟ್, ಸುಳ್ಯನ್ಯೂಸ್.ಕಾಂ


ಮಂಗಳೂರು : ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಸರಕಾರ ರಚನೆ ಮಾಡಲು ಹೊರಟಿರುವ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೈಕಮಾಂಡ್  ನಿಂದ ಇದುವರೆಗೆ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಈ ನಡುವೆ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂದು  ಮೂಲಗಳು ತಿಳಿಸಿವೆ.

ಈ ಪ್ರಕಾರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಅವರು ನೇಮಕವಾಗಲಿದ್ದಾರೆ , ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೇರ ಸಂಪರ್ಕ ಹಾಗೂ ನಿಷ್ಟಾವಂತ ಸ್ವಯಂ ಸೇವಕ ಎಂಬ ನೆಲೆಯಲ್ಲಿ ಹಾಗೂ ಸಂಘಟನೆಯಲ್ಲಿ ಎತ್ತಿದ ಕೈಯಾಗಿರುವ ನಳಿನ್ ಅವರಿಗೆ  ರಾಜ್ಯಾಧ್ಯಕ್ಷ ಪಟ್ಟ  ಲಭ್ಯವಾಗಲಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ಹೊರತುಪಡಿಸಿ ಇತರ ಯಾರಿಗಾದರೂ ನೀಡಿ ಯಡಿಯೂರಪ್ಪ ಅವರಿಗೆ ಪ್ರಮುಖ ರಾಜ್ಯದ ರಾಜ್ಯಪಾಲ ಹುದ್ದೆ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. `

ಈ ಬಾರಿ ಬಿಜೆಪಿ ಸರಕಾರ ರಚನೆಯಾದರೆ  ಕಳೆದ ಬಾರಿಯಂತೆ ಯಾವುದೇ ರೀತಿಯಲ್ಲೂ ಗೊಂದಲ ಏರ್ಪಡಬಾರದು ಹಾಗೂ ಶಾಸಕರಾಗಿ ಉತ್ತಮ ಕೆಲಸ ಮಾಡಿರುವ ಹಾಗೂ ಕ್ಷೇತ್ರದಲ್ಲೂ ಉತ್ತಮ ಅಭಿಪ್ರಾಯ ಹೊಂದಿರುವ ಮಂದಿಗೆ ಸಚಿವ ಸ್ಥಾನ ನೀಡಲು ಯೋಚನೆ ನಡೆದಿದೆ. ಜಾತಿ ಲೆಕ್ಕಾಚಾರದಲ್ಲಿ ಯಾವುದೇ ಸ್ಥಾನ ನೀಡದೇ ಇರಲು ಈ ಬಾರಿ ಚಿಂತನೆ ನಡೆದಿದ್ದು  ಭ್ರಷ್ಟಾಚಾರ ಸೇರಿದಂತೆ ಯಾವುದೇ ಕಪ್ಪುಚುಕ್ಕೆ ಇದ್ದರೆ ಅಂತಹವರಿಗೂ ಸಚಿವ ಸ್ಥಾನ ನೀಡದೇ ಇರಲೂ ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಸರಕಾರ ರಚನೆ ಮಾಡುವುದಾದರೆ ಇದೆಲ್ಲಾ ಗಮನಿಸಿಯೇ ರಚನೆ ಮಾಡಲು  ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸಲಹೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror