ಸುದ್ದಿಗಳು

ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಾರಾ ನಳಿನ್ ಕುಮಾರ್ ಕಟೀಲು ?

Share

# ಸ್ಪೆಶಲ್ ಕರೆಸ್ಪಾಂಡೆಂಟ್, ಸುಳ್ಯನ್ಯೂಸ್.ಕಾಂ

Advertisement
Advertisement

ಮಂಗಳೂರು : ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಸರಕಾರ ರಚನೆ ಮಾಡಲು ಹೊರಟಿರುವ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೈಕಮಾಂಡ್  ನಿಂದ ಇದುವರೆಗೆ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಈ ನಡುವೆ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂದು  ಮೂಲಗಳು ತಿಳಿಸಿವೆ.

ಈ ಪ್ರಕಾರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಅವರು ನೇಮಕವಾಗಲಿದ್ದಾರೆ , ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೇರ ಸಂಪರ್ಕ ಹಾಗೂ ನಿಷ್ಟಾವಂತ ಸ್ವಯಂ ಸೇವಕ ಎಂಬ ನೆಲೆಯಲ್ಲಿ ಹಾಗೂ ಸಂಘಟನೆಯಲ್ಲಿ ಎತ್ತಿದ ಕೈಯಾಗಿರುವ ನಳಿನ್ ಅವರಿಗೆ  ರಾಜ್ಯಾಧ್ಯಕ್ಷ ಪಟ್ಟ  ಲಭ್ಯವಾಗಲಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ಹೊರತುಪಡಿಸಿ ಇತರ ಯಾರಿಗಾದರೂ ನೀಡಿ ಯಡಿಯೂರಪ್ಪ ಅವರಿಗೆ ಪ್ರಮುಖ ರಾಜ್ಯದ ರಾಜ್ಯಪಾಲ ಹುದ್ದೆ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. `

ಈ ಬಾರಿ ಬಿಜೆಪಿ ಸರಕಾರ ರಚನೆಯಾದರೆ  ಕಳೆದ ಬಾರಿಯಂತೆ ಯಾವುದೇ ರೀತಿಯಲ್ಲೂ ಗೊಂದಲ ಏರ್ಪಡಬಾರದು ಹಾಗೂ ಶಾಸಕರಾಗಿ ಉತ್ತಮ ಕೆಲಸ ಮಾಡಿರುವ ಹಾಗೂ ಕ್ಷೇತ್ರದಲ್ಲೂ ಉತ್ತಮ ಅಭಿಪ್ರಾಯ ಹೊಂದಿರುವ ಮಂದಿಗೆ ಸಚಿವ ಸ್ಥಾನ ನೀಡಲು ಯೋಚನೆ ನಡೆದಿದೆ. ಜಾತಿ ಲೆಕ್ಕಾಚಾರದಲ್ಲಿ ಯಾವುದೇ ಸ್ಥಾನ ನೀಡದೇ ಇರಲು ಈ ಬಾರಿ ಚಿಂತನೆ ನಡೆದಿದ್ದು  ಭ್ರಷ್ಟಾಚಾರ ಸೇರಿದಂತೆ ಯಾವುದೇ ಕಪ್ಪುಚುಕ್ಕೆ ಇದ್ದರೆ ಅಂತಹವರಿಗೂ ಸಚಿವ ಸ್ಥಾನ ನೀಡದೇ ಇರಲೂ ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಸರಕಾರ ರಚನೆ ಮಾಡುವುದಾದರೆ ಇದೆಲ್ಲಾ ಗಮನಿಸಿಯೇ ರಚನೆ ಮಾಡಲು  ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸಲಹೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

7 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

7 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

7 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

8 hours ago

ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಾಲೆ – ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್‌ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…

8 hours ago

ಇಂದು ವಿಶ್ವ ರಕ್ತದಾನಿಗಳ ದಿನ

ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…

8 hours ago