ಸುಳ್ಯ:ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಪ್ರಥಮ ಬಾರಿಗೆ ಸುಳ್ಯಕ್ಕೆ ಆಗಮಿಸಿದ ನಳಿನ್ ಕುಮಾರ್ ಕಟೀಲ್ ಅವರಿಗೆ ಅದ್ದೂರಿ ಸ್ವಾಗತ ನೀಡಲಾಯಿತು. ಮಡಿಕೇರಿಯಿಂದ ಆಗಮಿಸಿದ ಅವರನ್ನು ಅರಂಬೂರಿನಲ್ಲಿ ಸ್ವಾಗತಿಸಿ ವಾಹನ ಮೆರವಣಿಗೆಯ ಮೂಲಕ ಕರೆ ತರಲಾಯಿತು. ಚೆಂಡೆ, ವಾದ್ಯ ಘೋಷಗಳೊಂದಿಗೆ, ಸಿಡಿ ಮದ್ದಿನ ಅಬ್ಬರದೊಂದಿಗೆ ಬಿಜೆಪಿ ಕಚೇರಿಯ ಬಳಿಯಲ್ಲಿ ಬಿಜೆಪಿ ನಾಯಕರು ಹಾಗು ಕಾರ್ಯಕರ್ತರು ಸ್ವಾಗತಿಸಿದರು. ಬಳಿಕ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಳಿನ್ ಕುಮಾರ್ ಕಟೀಲ್ ಅವರನ್ನು ಸನ್ಮಾನಿಸಲಾಯಿತು.
ನ.ಪಂ.ಮಾಜಿ ಅಧ್ಯಕ್ಷರಾದ ಎನ್.ಎ.ರಾಮಚಂದ್ರ, ಪ್ರಕಾಶ್ ಹೆಗ್ಡೆ ಸನ್ಮಾನ ನೆರವೇರಿಸಿದರು.ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಎ.ವಿ.ತೀರ್ಥರಾಮ, ಪಿ.ಕೆ.ಉಮೇಶ್, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಮತ್ತಿತರರು ಉಪಸ್ಥಿತರಿದ್ದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…