ಸವಣೂರು : ಎಲ್ಲ ಜಾತಿ, ಮತ, ಪ್ರದೇಶಗಳಲ್ಲಿ ಬಿಜೆಪಿ ಸದಸ್ಯತ್ವ ಮಾಡುವ ಮೂಲಕ ಪ್ರತೀ ಬೂತ್ನಲ್ಲಿ ಅತೀ ಹೆಚ್ಚಿನ ಸಂಖ್ಯೆ ಸದಸ್ಯರ ನೋಂದಣಿ ಮಾಡ ಬೇಕು. ಸಂಘಟನೆಯು ಪಕ್ಷದ ಮೂಲಭೂತ ಶಕ್ತಿಯಾಗಿದೆ. ಸದಸ್ಯತ್ವ ಮಾಡುವ ಮೂಲಕ ಆ ಶಕ್ತಿ ಇನ್ನಷ್ಟು ಬಲಪಡಿಸಬೇಕಾಗಿದೆ ಎಂದು ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ ಹೇಳಿದರು.
ಅವರು ಸವಣೂರು ಯುವ ಸಭಾಭವನದಲ್ಲಿ ನಡೆದ ಬಿಜೆಪಿ ಬೆಳಂದೂರು ಮಹಾಶಕ್ತಿ ಕೇಂದ್ರದ ಬಿಜೆಪಿ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದರು.
ಜಿ.ಪಂ.ಸದಸ್ಯೆ ಪ್ರಮೀಳಾ ಜನಾರ್ದನ್ ಮಾತನಾಡಿ, ಆಂತರಿಕ ಪ್ರಜಾಪ್ರಭುತ್ವಕ್ಕೆ ಬಲ ತುಂಬಲು ಈ ವ್ಯವಸ್ಥೆ ಅನುಕೂಲವಾಗಿದೆ.ಜನರು ಬಿಜೆಪಿ ಸದಸ್ಯರಾಗಲು ಸಿದ್ಧರಿದ್ದಾರೆ. ನಾವು ಅವರ ಬಳಿ ಹೋಗಬೇಕಾಗಿದೆ.ಎಲ್ಲಾ ಬೂತ್ನಲ್ಲಿ ಗುರಿ ತಲುಪಬೇಕು ಎಂದರು.
ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಮಾತನಾಡಿ, ವಂಶ ಪಾರಂಪರ್ಯದ ರಾಜಕಾರಣಕ್ಕೆ ಜೋತು ಬಿದ್ದ ಕಾರಣ ಬಿಜೆಪಿ ಹೊರತುಪಡಿಸಿ, ಬೇರೆ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಜೀವಂತವಾಗಿಲ್ಲ. ಈ ನಿಟ್ಟಿನಲ್ಲಿ ಬಿಜೆಪಿಯ ಮಹಾ ಸಂಘಟನಾ ಪರ್ವದಲ್ಲಿ ಅತೀ ಹೆಚ್ಚು ಸದಸ್ಯರಾಗಬೇಕು.ಅಭಿವೃದ್ದಿ ಕಾರ್ಯಗಳು ನಡೆಯುವ ಸಂದರ್ಭ ಆಯಾ ಬೂತ್ನ ಕಾರ್ಯಕರ್ತರಿಗೆ ತಿಳಿಸುವ ಕೆಲಸವಾಗಬೇಕು ಎಂದರು.
ಸಭೆಯಲ್ಲಿ ಬೆಳಂದೂರು ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ದಯಾನಂದ ಆಲಡ್ಕ, ತಾ.ಪಂ.ಉಪಾಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ,ತಾ.ಪಂ.ಸದಸ್ಯರಾದ ಲಲಿತಾ ಈಶ್ವರ ಚಾರ್ವಾಕ,ತಾರಾ ಅಲಂಕಾರು, ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ,ಉಪಾಧ್ಯಕ್ಷ ರವಿ ಕುಮಾರ್,ಸದಸ್ಯರಾದ ಗಿರಿಶಂಕರ ಸುಲಾಯ,ರಾಜೀವಿ ಶೆಟ್ಟಿ,ಗಾಯತ್ರಿ ಬರೆಮೇಲು,ಸತೀಶ್ ಬಲ್ಯಾಯ,ಸತೀಶ್ ಅಂಗಡಿಮೂಲೆ,ಕಾಣಿಯೂರು ಗ್ರಾ.ಪಂ ಅಧ್ಯಕ್ಷೆ ಮಾಧವಿ ಕೋಡಂದೂರು,ಬೆಳಂದೂರು ಗ್ರಾ.ಪಂ.ಉಪಾಧ್ಯಕ್ಷ ಹರೀಶ್ ಕೆರೆನಾರು,ಆಲಂಕಾರು ಗ್ರಾ.ಪಂ.ಅಧ್ಯಕ್ಷೆ ಸುನಂದಾ ಬಾರ್ಕುಳಿ,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ,ನಿರ್ದೇಶಕರಾದ ನಾರಾಯಣ ಗೌಡ ಪೂವ, ವೇದಾವತಿ ಕೆಡೆಂಜಿ,ಸವಣೂರು ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಸುಪ್ರಿತ್ ರೈ ಖಂಡಿಗ,ಉಪಾಧ್ಯಕ್ಷ ಗೋಪಾಲಕೃಷ್ಣ ಆರೇಲ್ತಡಿ,ನಿರ್ದೇಶಕ ಪ್ರಜ್ವಲ ಕೆ.ಆರ್,ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ,ಸುರೇಶ್ ರೈ ಸೂಡಿಮುಳ್ಳು,ಜಯಪ್ರಶಾಂತ್ ಪಾಲ್ತಾಡಿ,ತೀರ್ಥರಾಮ ಕೆಡೆಂಜಿ,ಹರೀಶ ಕುಕ್ಕುಜೆ ,ಅನಿತಾ ಬೇರಿಕೆ,ವೇದಾ ದಯಾನಂದ ,ಸಂಜೀವ ಮೊದಲಾದವರಿದ್ದರು.
ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ ಸ್ವಾಗತಿಸಿ,ವಂದಿಸಿದರು.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.