Advertisement
ಸುದ್ದಿಗಳು

ಬಿಜೆಪಿ ಸುಳ್ಯ ಮಂಡಲದಿಂದ ರಾಜ್ಯದಲ್ಲಿಯೇ ಪ್ರಥಮವಾಗಿ ಬೂತ್ ಸಮಿತಿ ಪಟ್ಟಿ ಹಸ್ತಾಂತರ

Share

ಸುಳ್ಯ:ದೇಶದಾದ್ಯಂತ ಬಿಜೆಪಿಯ ಸದಸ್ಯತ್ವ ಅಭಿಯಾನ ನಡೆಯುತಿದೆ. ಜೊತೆಗೆ ಅವಧಿ ಪೂರ್ತಿಯಾದ ಬೂತ್ ಸಮಿತಿ, ಮಂಡಲ ಸಮಿತಿ ಪುನರ್ ರಚನೆಯ ಕಾರ್ಯಗಳೂ ಪ್ರಗತಿಯಲ್ಲಿದೆ.

ಸುಳ್ಯ ಬಿಜೆಪಿ ಮಂಡಲ ವ್ಯಾಪ್ತಿಯ ಬೂತ್ ಸಮಿತಿಗಳ ರಚನೆ ಬಹುತೇಕ ಪೂರ್ತಿಯಾಗಿದ್ದು ರಾಜ್ಯದಲ್ಲಿಯೇ ಪ್ರಥಮವಾಗಿ ಬೂತ್ ಸಮಿತಿಯ ಪಟ್ಟಿಯನ್ನು ರಾಜ್ಯಾಧ್ಯಕ್ಷರಿಗೆ ಹಸ್ತಾಂತರಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಕ್ಷೇತ್ರದ 231 ಬೂತ್ ಸಮಿತಿಗಳ ಪೈಕಿ 227 ಸಮಿತಿಗಳ ರಚನೆ ಪೂರ್ತಿಯಾಗಿದೆ. 221 ಸಮಿತಿಗಳ ಪಟ್ಟಿಯನ್ನು ಮಂಡಲ ಸಮಿತಿ ಪದಾಧಿಕಾರಿಗಳು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಹಸ್ತಾಂತರಿಸಿದ್ದಾರೆ. ಪ್ರತಿ ಬೂತ್ ಮಟ್ಟದಲ್ಲಿ ಬಿಜೆಪಿ ಸದಸ್ಯರ ಸಭೆ ನಡೆಸಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಮಂಡಲ ಸಮಿತಿ ಪದಾಧಿಕಾರಿಗಳ ನೇತೃತ್ವದಲ್ಲಿ ಮಹಾ ಶಕ್ತಿ ಕೇಂದ್ರಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ಒಂದೆರಡು ದಿನದಲ್ಲಿ ಬೂತ್ ಸಮಿತಿಗಳ ರಚನೆ ಪೂರ್ತಿಯಾಗಲಿದೆ. ಬಳಿಕ ಮಂಡಲ ಸಮಿತಿಯ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅ.31ರೊಳಗೆ ನೂತನ ಬಿಜೆಪಿ ಮಂಡಲ ಸಮಿತ ಅಸ್ತಿತ್ವಕ್ಕೆ ಬರಲಿದೆ ಎಂದು ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ತಿಳಿಸಿದ್ದರೆ.

ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಚುನಾವಣಾ ಉಸ್ತುವಾರಿ ಹರೀಶ್ ಕಂಜಿಪಿಲಿ ಮತ್ತಿತರರು ಸೇರಿ ಬೂತ್ ಸಮಿತಿ ಪದಾಧಿಕಾರಿಗಳ ಪಟ್ಟಿಯನ್ನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಹಸ್ತಾಂತರಿಸಿದರು.

ಸುಳ್ಯ ಸಂಘಟನಾ ಶಕ್ತಿಗೆ ನಳಿನ್ ಶ್ಲಾಘನೆ:ಸುಳ್ಯದ ಬಿಜೆಪಿ ಸಂಘಟನಾ ಶಕ್ತಿಯನ್ನು ನಳಿನ್ ಕುಮಾರ್ ಕಟೀಲ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಅಧಿಕಾರದಿಂದ ಅಲ್ಲ, ಬದಲಾಗಿ ಆದರ್ಶದಿಂದ ಪಕ್ಷ ಸಂಘಟನೆ ಮಾಡಬೇಕು. ಸುಳ್ಯ ಕ್ಷೇತ್ರದ ಸಂಘಟನಾ ಶಕ್ತಿ ದೇಶಕ್ಕೆ ಆದರ್ಶ ಎಂದು ಹೇಳಿದರು. ಸುಳ್ಯ ಕ್ಷೇತ್ರ ಕಾರ್ಯಕರ್ತರ ಪುಣ್ಯ ಎಂದು ಅವರು ಬಣ್ಷಿಸಿದರು. ರಾಜ್ಯದಲ್ಲಿಯೇ ಪ್ರಥಮವಾಗಿ ಸುಳ್ಯದಿಂದ ಪ್ರಥಮವಾಗಿ ಪದಾಧಿಕಾರಿಗಳ ಪಟ್ಟಿ ದೊರೆತಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

5 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

7 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

7 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

16 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

18 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

1 day ago