Advertisement
ಸುದ್ದಿಗಳು

ಬಿಜೆಪಿ ಸುಳ್ಯ ಮಂಡಲದಿಂದ ರಾಜ್ಯದಲ್ಲಿಯೇ ಪ್ರಥಮವಾಗಿ ಬೂತ್ ಸಮಿತಿ ಪಟ್ಟಿ ಹಸ್ತಾಂತರ

Share

ಸುಳ್ಯ:ದೇಶದಾದ್ಯಂತ ಬಿಜೆಪಿಯ ಸದಸ್ಯತ್ವ ಅಭಿಯಾನ ನಡೆಯುತಿದೆ. ಜೊತೆಗೆ ಅವಧಿ ಪೂರ್ತಿಯಾದ ಬೂತ್ ಸಮಿತಿ, ಮಂಡಲ ಸಮಿತಿ ಪುನರ್ ರಚನೆಯ ಕಾರ್ಯಗಳೂ ಪ್ರಗತಿಯಲ್ಲಿದೆ.

ಸುಳ್ಯ ಬಿಜೆಪಿ ಮಂಡಲ ವ್ಯಾಪ್ತಿಯ ಬೂತ್ ಸಮಿತಿಗಳ ರಚನೆ ಬಹುತೇಕ ಪೂರ್ತಿಯಾಗಿದ್ದು ರಾಜ್ಯದಲ್ಲಿಯೇ ಪ್ರಥಮವಾಗಿ ಬೂತ್ ಸಮಿತಿಯ ಪಟ್ಟಿಯನ್ನು ರಾಜ್ಯಾಧ್ಯಕ್ಷರಿಗೆ ಹಸ್ತಾಂತರಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಕ್ಷೇತ್ರದ 231 ಬೂತ್ ಸಮಿತಿಗಳ ಪೈಕಿ 227 ಸಮಿತಿಗಳ ರಚನೆ ಪೂರ್ತಿಯಾಗಿದೆ. 221 ಸಮಿತಿಗಳ ಪಟ್ಟಿಯನ್ನು ಮಂಡಲ ಸಮಿತಿ ಪದಾಧಿಕಾರಿಗಳು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಹಸ್ತಾಂತರಿಸಿದ್ದಾರೆ. ಪ್ರತಿ ಬೂತ್ ಮಟ್ಟದಲ್ಲಿ ಬಿಜೆಪಿ ಸದಸ್ಯರ ಸಭೆ ನಡೆಸಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಮಂಡಲ ಸಮಿತಿ ಪದಾಧಿಕಾರಿಗಳ ನೇತೃತ್ವದಲ್ಲಿ ಮಹಾ ಶಕ್ತಿ ಕೇಂದ್ರಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ಒಂದೆರಡು ದಿನದಲ್ಲಿ ಬೂತ್ ಸಮಿತಿಗಳ ರಚನೆ ಪೂರ್ತಿಯಾಗಲಿದೆ. ಬಳಿಕ ಮಂಡಲ ಸಮಿತಿಯ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅ.31ರೊಳಗೆ ನೂತನ ಬಿಜೆಪಿ ಮಂಡಲ ಸಮಿತ ಅಸ್ತಿತ್ವಕ್ಕೆ ಬರಲಿದೆ ಎಂದು ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ತಿಳಿಸಿದ್ದರೆ.

ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಚುನಾವಣಾ ಉಸ್ತುವಾರಿ ಹರೀಶ್ ಕಂಜಿಪಿಲಿ ಮತ್ತಿತರರು ಸೇರಿ ಬೂತ್ ಸಮಿತಿ ಪದಾಧಿಕಾರಿಗಳ ಪಟ್ಟಿಯನ್ನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಹಸ್ತಾಂತರಿಸಿದರು.

ಸುಳ್ಯ ಸಂಘಟನಾ ಶಕ್ತಿಗೆ ನಳಿನ್ ಶ್ಲಾಘನೆ:ಸುಳ್ಯದ ಬಿಜೆಪಿ ಸಂಘಟನಾ ಶಕ್ತಿಯನ್ನು ನಳಿನ್ ಕುಮಾರ್ ಕಟೀಲ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಅಧಿಕಾರದಿಂದ ಅಲ್ಲ, ಬದಲಾಗಿ ಆದರ್ಶದಿಂದ ಪಕ್ಷ ಸಂಘಟನೆ ಮಾಡಬೇಕು. ಸುಳ್ಯ ಕ್ಷೇತ್ರದ ಸಂಘಟನಾ ಶಕ್ತಿ ದೇಶಕ್ಕೆ ಆದರ್ಶ ಎಂದು ಹೇಳಿದರು. ಸುಳ್ಯ ಕ್ಷೇತ್ರ ಕಾರ್ಯಕರ್ತರ ಪುಣ್ಯ ಎಂದು ಅವರು ಬಣ್ಷಿಸಿದರು. ರಾಜ್ಯದಲ್ಲಿಯೇ ಪ್ರಥಮವಾಗಿ ಸುಳ್ಯದಿಂದ ಪ್ರಥಮವಾಗಿ ಪದಾಧಿಕಾರಿಗಳ ಪಟ್ಟಿ ದೊರೆತಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

3 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

4 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

13 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

22 hours ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

1 day ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

1 day ago