Advertisement
ಸುದ್ದಿಗಳು

ಬಿಜೆಪಿ ಸುಳ್ಯ ಮಂಡಲದಿಂದ ರಾಜ್ಯದಲ್ಲಿಯೇ ಪ್ರಥಮವಾಗಿ ಬೂತ್ ಸಮಿತಿ ಪಟ್ಟಿ ಹಸ್ತಾಂತರ

Share

ಸುಳ್ಯ:ದೇಶದಾದ್ಯಂತ ಬಿಜೆಪಿಯ ಸದಸ್ಯತ್ವ ಅಭಿಯಾನ ನಡೆಯುತಿದೆ. ಜೊತೆಗೆ ಅವಧಿ ಪೂರ್ತಿಯಾದ ಬೂತ್ ಸಮಿತಿ, ಮಂಡಲ ಸಮಿತಿ ಪುನರ್ ರಚನೆಯ ಕಾರ್ಯಗಳೂ ಪ್ರಗತಿಯಲ್ಲಿದೆ.

ಸುಳ್ಯ ಬಿಜೆಪಿ ಮಂಡಲ ವ್ಯಾಪ್ತಿಯ ಬೂತ್ ಸಮಿತಿಗಳ ರಚನೆ ಬಹುತೇಕ ಪೂರ್ತಿಯಾಗಿದ್ದು ರಾಜ್ಯದಲ್ಲಿಯೇ ಪ್ರಥಮವಾಗಿ ಬೂತ್ ಸಮಿತಿಯ ಪಟ್ಟಿಯನ್ನು ರಾಜ್ಯಾಧ್ಯಕ್ಷರಿಗೆ ಹಸ್ತಾಂತರಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಕ್ಷೇತ್ರದ 231 ಬೂತ್ ಸಮಿತಿಗಳ ಪೈಕಿ 227 ಸಮಿತಿಗಳ ರಚನೆ ಪೂರ್ತಿಯಾಗಿದೆ. 221 ಸಮಿತಿಗಳ ಪಟ್ಟಿಯನ್ನು ಮಂಡಲ ಸಮಿತಿ ಪದಾಧಿಕಾರಿಗಳು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಹಸ್ತಾಂತರಿಸಿದ್ದಾರೆ. ಪ್ರತಿ ಬೂತ್ ಮಟ್ಟದಲ್ಲಿ ಬಿಜೆಪಿ ಸದಸ್ಯರ ಸಭೆ ನಡೆಸಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಮಂಡಲ ಸಮಿತಿ ಪದಾಧಿಕಾರಿಗಳ ನೇತೃತ್ವದಲ್ಲಿ ಮಹಾ ಶಕ್ತಿ ಕೇಂದ್ರಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ಒಂದೆರಡು ದಿನದಲ್ಲಿ ಬೂತ್ ಸಮಿತಿಗಳ ರಚನೆ ಪೂರ್ತಿಯಾಗಲಿದೆ. ಬಳಿಕ ಮಂಡಲ ಸಮಿತಿಯ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅ.31ರೊಳಗೆ ನೂತನ ಬಿಜೆಪಿ ಮಂಡಲ ಸಮಿತ ಅಸ್ತಿತ್ವಕ್ಕೆ ಬರಲಿದೆ ಎಂದು ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ತಿಳಿಸಿದ್ದರೆ.

ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಚುನಾವಣಾ ಉಸ್ತುವಾರಿ ಹರೀಶ್ ಕಂಜಿಪಿಲಿ ಮತ್ತಿತರರು ಸೇರಿ ಬೂತ್ ಸಮಿತಿ ಪದಾಧಿಕಾರಿಗಳ ಪಟ್ಟಿಯನ್ನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಹಸ್ತಾಂತರಿಸಿದರು.

ಸುಳ್ಯ ಸಂಘಟನಾ ಶಕ್ತಿಗೆ ನಳಿನ್ ಶ್ಲಾಘನೆ:ಸುಳ್ಯದ ಬಿಜೆಪಿ ಸಂಘಟನಾ ಶಕ್ತಿಯನ್ನು ನಳಿನ್ ಕುಮಾರ್ ಕಟೀಲ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಅಧಿಕಾರದಿಂದ ಅಲ್ಲ, ಬದಲಾಗಿ ಆದರ್ಶದಿಂದ ಪಕ್ಷ ಸಂಘಟನೆ ಮಾಡಬೇಕು. ಸುಳ್ಯ ಕ್ಷೇತ್ರದ ಸಂಘಟನಾ ಶಕ್ತಿ ದೇಶಕ್ಕೆ ಆದರ್ಶ ಎಂದು ಹೇಳಿದರು. ಸುಳ್ಯ ಕ್ಷೇತ್ರ ಕಾರ್ಯಕರ್ತರ ಪುಣ್ಯ ಎಂದು ಅವರು ಬಣ್ಷಿಸಿದರು. ರಾಜ್ಯದಲ್ಲಿಯೇ ಪ್ರಥಮವಾಗಿ ಸುಳ್ಯದಿಂದ ಪ್ರಥಮವಾಗಿ ಪದಾಧಿಕಾರಿಗಳ ಪಟ್ಟಿ ದೊರೆತಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

7 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

8 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

8 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

14 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

15 hours ago

ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ

ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…

16 hours ago