ಬಿದಿರಿನ ದೋಟಿ ಬಲು ಗಟ್ಟಿ……

May 31, 2020
1:49 PM

ಬಿದಿರು ಹುಲ್ಲಿನ ಗುಂಪಿಗೆ ಸೇರಿದ ಸಸ್ಯ. ವಂಶ, ವೇಣು, ಯುವಫಲ ಎಂದು ಸಂಸ್ಕೃತ ಭಾಷೆಯಲ್ಲಿ ಕರೆಸಿಕೊಳ್ಳುವ ಬಿದಿರು ರೈತ ಮಿತ್ರಕೂಡಾ ಹೌದು. ಜಗತ್ತಿನಲ್ಲಿ 550 ಕ್ಕೂ ಹೆಚ್ಚು ಪ್ರಭೇದಗಳಿವೆ. ನಮ್ಮ ದೇಶದಲ್ಲಿ ದೊರೆಯುವುದು ಕೇವಲ 130 ಜಾತಿಯ ಬಿದಿರುಗಳು ಅದರಲ್ಲೂ ಹೆಚ್ಚಾಗಿ ಸುಮಾರು 40 ವೆರೈಟಿಯ ಬಿದಿರುಗಳು ಕಾಣಸಿಗುತ್ತವೆ.

Advertisement
Advertisement
Advertisement

ದಶಕದ ಹಿಂದೆ ಕೃಷಿಕಾರ್ಯಗಳಿಗೆ ಸಲಕರಣೆಗಳಿಗಾಗಿ ರೈತರು ಅವಲಂಬಿಸುತ್ತಿದ್ದದ್ದು ಕಡಿಮೆ ವೆಚ್ಚದಲ್ಲಿ ಸುಲಭವಾಗಿ ದೊರೆಯುತ್ತಿದ್ದ ಬಿದಿರುಗಳನ್ನು ಅದರಲ್ಲೂ ಮುಖ್ಯವಾಗಿ ಅಡಿಕೆ, ತೆಂಗು, ಕೊಕ್ಕೋ, ಗೇರು ಮರಗಳಲ್ಲಿ ಬೆಳೆದ ಫಲಗಳನ್ನು ಕೀಳಲು ಅನಿವಾರ್ಯವಾದ ದೋಟಿ ತಯಾರಿಸಲು ಕೃಷಿಕರು ಮಾರು ಹೋಗುತ್ತಿದ್ದದ್ದು ಲೆಂಕಿರಿ ಎನ್ನುವ ಬಿದಿರಿಗೆ. ಆದರೆ ಇತ್ತೀಚಿನ ದಿನಗಳಲ್ಲಿ ಹಣಕೊಟ್ಟರೆ ಸುಲಭವಾಗಿ ದೊರೆಯುವ ಅಲ್ಯುಮೀನಿಯಂ ಪೋಲ್ ಬಂದ ನಂತರ ಬಿದಿರಿನ ದೋಟಿಗಳ(ದೋಟಿಗೆಕೊಕ್ಕೆ ಎಂದೂ ಹೆಸರಿದೆ) ಬಳಕೆ ಕಡಿಮೆಯಾಗುತ್ತಿದೆ. ಅದಲ್ಲದೆ ಬಿದಿರು ಒತ್ತೊತ್ತಾಗಿ ಬೆಳೆಯವ ಸಸ್ಯ. ದೋಟಿ ಮಾಡಲು ಅನುಕೂಲವಾದದ್ದನ್ನು ತುಂಡರಿಸಲು ಅದರ ಸುತ್ತಮುತ್ತಲಿರುವ ಅಡೆತಡೆಗಳನ್ನು ನಿವಾರಿಸಿ ತೆಗೆಯಬೇಕು. ಬಿದಿರನ್ನು ತುಂಡರಿಸಿ ತಂದು ಒಣಗಿಸಿ ದೋಟಿ ಮಾಡಲು ಸಮಯ ಜೊತೆಗೆ ತಾಳ್ಮೆಯೂ ಬೇಕು.

Advertisement

ಲೆಂಕಿರಿ ಬಿದಿರಿನ ವಿಶೇಷತೆ:  ಉದ್ದವಾಗಿ ಸಪೂರವಾಗಿ ಬೆಳೆಯುವ ಲೆಂಕಿರಿ ಬಿದಿರು ದೋಟಿ ತಯಾರಿಸಲು ತಕ್ಕದಾದದ್ದು. ಒಳಗಡೆ ಟೊಳ್ಳಾಗಿ ಇರುವುದರಿಂದ ಹಗುರವಾಗಿ ಆದರೆ ಅಷ್ಟೇ ಗಟ್ಟಿಯಾಗಿರುವುದು ಇದರ ಇನ್ನೊಂದು ವಿಶೇಷತೆ. ಫಲಗಳನ್ನು ಕೀಳಲು ಹಗುರವಾದ ದೋಟಿ ಬೇಕಾಗಿರುವುದರಿಂದ ಕೃಷಿಕರು ಹೆಚ್ಚಾಗಿ ಬಳಸುವುದು ಲೆಂಕಿರಿ ಬಿದಿರನ್ನು.ಈ ಜಾತಿಯ ಬಿದಿರುಗಳಲ್ಲಿ ಮುಳ್ಳುಗಳು ಇರುವುದಿಲ್ಲ. ಅಂಕುಡೊಂಕಾಗಿ ಇದ್ದರೂ ಹಸಿಯಾಗಿ ಇರುವಾಗ ನೆಲದ ಮೇಲೆ ಇಟ್ಟು ಭಾರವಾದ ಕಲ್ಲುಗಳನ್ನು ಇದರ ಮೇಲೆ ಇರಿಸುವುದರಿಂದ ಅಥವಾ ಮರಕ್ಕೆ ನೇರವಾಗಿ ಇಳಿಬಿಟ್ಟು ಕೆಳಗಡೆ ಭಾರವಾದಕಲ್ಲುಕಟ್ಟಿ ನೇರವಾಗುವಂತೆ ಮಾಡಬಹುದು.ಬಿದಿರುಒಣಗುವ ಮೊದಲೇಇದರ ಗೆಣ್ಣುಗಳನ್ನು ಸರಿಯಾಗಿ ತುಂಡರಿಸಬೇಕು. ನಂತರ ತೆಳ್ಳಗೆ ಇರುವ ತುದಿಗೆ ಕತ್ತಿಕಟ್ಟಿದರೆ ಮರಗಳಲ್ಲಿ ಬೆಳೆದ ಕಾಯಿಗಳನ್ನು ಕೀಳಲು ದೋಟಿ ತಯಾರಾಗುತ್ತದೆ. ನೀರು ತಾಕದ ಹಾಗೆ ಜತನದಿಂದ ಉಪಯೋಗಿಸಿದರೆ ಎರಡು – ಮೂರು ವರ್ಷಕ್ಕೆ ನಿರಾತಂಕವಾಗಿ ಬಳಸಬಹುದಾದ ಲೆಂಕಿರಿ ಬಿದಿರಿನ ದೋಟಿ ಬಲು ಗಟ್ಟಿ. ಇಲ್ಲವಾದರೆಒಂದೇ ವರ್ಷಕ್ಕೆ ಗೆದ್ದಲುಗಳಿಗೆ ಆಹಾರವಾದೀತು.

Advertisement

# ವಂದನಾರವಿ ಕೆ.ವೈ.ವೇಣೂರು.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹೊಸ ಬೆಳೆ…. ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ
April 24, 2024
2:57 PM
by: The Rural Mirror ಸುದ್ದಿಜಾಲ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ
ಚುನಾವಣೆ ಹಾಗೂ “ನೀತಿ” ಸಂಹಿತೆ ಮತ್ತು ಜಗಳ…! |
April 18, 2024
3:00 PM
by: ಮಹೇಶ್ ಪುಚ್ಚಪ್ಪಾಡಿ
ದೇವರು ಧರ್ಮ ಭಕ್ತಿ ಒಂದು ಒಣ ಆಡಂಬರವಲ್ಲ, ಅದು ನಮ್ಮ ಆತ್ಮಸಾಕ್ಷಿಯ ನಡವಳಿಕೆ | ರಾಮನವಮಿ ಪ್ರಯುಕ್ತ ಬರೆಯುತ್ತಾರೆ ವಿವೇಕಾನಂದ. ಎಚ್. ಕೆ.
April 17, 2024
4:37 PM
by: ವಿವೇಕಾನಂದ ಎಚ್‌ ಕೆ

You cannot copy content of this page - Copyright -The Rural Mirror