Advertisement
ಅಂಕಣ

ಬಿದಿರಿನ ದೋಟಿ ಬಲು ಗಟ್ಟಿ……

Share

ಬಿದಿರು ಹುಲ್ಲಿನ ಗುಂಪಿಗೆ ಸೇರಿದ ಸಸ್ಯ. ವಂಶ, ವೇಣು, ಯುವಫಲ ಎಂದು ಸಂಸ್ಕೃತ ಭಾಷೆಯಲ್ಲಿ ಕರೆಸಿಕೊಳ್ಳುವ ಬಿದಿರು ರೈತ ಮಿತ್ರಕೂಡಾ ಹೌದು. ಜಗತ್ತಿನಲ್ಲಿ 550 ಕ್ಕೂ ಹೆಚ್ಚು ಪ್ರಭೇದಗಳಿವೆ. ನಮ್ಮ ದೇಶದಲ್ಲಿ ದೊರೆಯುವುದು ಕೇವಲ 130 ಜಾತಿಯ ಬಿದಿರುಗಳು ಅದರಲ್ಲೂ ಹೆಚ್ಚಾಗಿ ಸುಮಾರು 40 ವೆರೈಟಿಯ ಬಿದಿರುಗಳು ಕಾಣಸಿಗುತ್ತವೆ.

Advertisement
Advertisement

ದಶಕದ ಹಿಂದೆ ಕೃಷಿಕಾರ್ಯಗಳಿಗೆ ಸಲಕರಣೆಗಳಿಗಾಗಿ ರೈತರು ಅವಲಂಬಿಸುತ್ತಿದ್ದದ್ದು ಕಡಿಮೆ ವೆಚ್ಚದಲ್ಲಿ ಸುಲಭವಾಗಿ ದೊರೆಯುತ್ತಿದ್ದ ಬಿದಿರುಗಳನ್ನು ಅದರಲ್ಲೂ ಮುಖ್ಯವಾಗಿ ಅಡಿಕೆ, ತೆಂಗು, ಕೊಕ್ಕೋ, ಗೇರು ಮರಗಳಲ್ಲಿ ಬೆಳೆದ ಫಲಗಳನ್ನು ಕೀಳಲು ಅನಿವಾರ್ಯವಾದ ದೋಟಿ ತಯಾರಿಸಲು ಕೃಷಿಕರು ಮಾರು ಹೋಗುತ್ತಿದ್ದದ್ದು ಲೆಂಕಿರಿ ಎನ್ನುವ ಬಿದಿರಿಗೆ. ಆದರೆ ಇತ್ತೀಚಿನ ದಿನಗಳಲ್ಲಿ ಹಣಕೊಟ್ಟರೆ ಸುಲಭವಾಗಿ ದೊರೆಯುವ ಅಲ್ಯುಮೀನಿಯಂ ಪೋಲ್ ಬಂದ ನಂತರ ಬಿದಿರಿನ ದೋಟಿಗಳ(ದೋಟಿಗೆಕೊಕ್ಕೆ ಎಂದೂ ಹೆಸರಿದೆ) ಬಳಕೆ ಕಡಿಮೆಯಾಗುತ್ತಿದೆ. ಅದಲ್ಲದೆ ಬಿದಿರು ಒತ್ತೊತ್ತಾಗಿ ಬೆಳೆಯವ ಸಸ್ಯ. ದೋಟಿ ಮಾಡಲು ಅನುಕೂಲವಾದದ್ದನ್ನು ತುಂಡರಿಸಲು ಅದರ ಸುತ್ತಮುತ್ತಲಿರುವ ಅಡೆತಡೆಗಳನ್ನು ನಿವಾರಿಸಿ ತೆಗೆಯಬೇಕು. ಬಿದಿರನ್ನು ತುಂಡರಿಸಿ ತಂದು ಒಣಗಿಸಿ ದೋಟಿ ಮಾಡಲು ಸಮಯ ಜೊತೆಗೆ ತಾಳ್ಮೆಯೂ ಬೇಕು.

Advertisement

ಲೆಂಕಿರಿ ಬಿದಿರಿನ ವಿಶೇಷತೆ:  ಉದ್ದವಾಗಿ ಸಪೂರವಾಗಿ ಬೆಳೆಯುವ ಲೆಂಕಿರಿ ಬಿದಿರು ದೋಟಿ ತಯಾರಿಸಲು ತಕ್ಕದಾದದ್ದು. ಒಳಗಡೆ ಟೊಳ್ಳಾಗಿ ಇರುವುದರಿಂದ ಹಗುರವಾಗಿ ಆದರೆ ಅಷ್ಟೇ ಗಟ್ಟಿಯಾಗಿರುವುದು ಇದರ ಇನ್ನೊಂದು ವಿಶೇಷತೆ. ಫಲಗಳನ್ನು ಕೀಳಲು ಹಗುರವಾದ ದೋಟಿ ಬೇಕಾಗಿರುವುದರಿಂದ ಕೃಷಿಕರು ಹೆಚ್ಚಾಗಿ ಬಳಸುವುದು ಲೆಂಕಿರಿ ಬಿದಿರನ್ನು.ಈ ಜಾತಿಯ ಬಿದಿರುಗಳಲ್ಲಿ ಮುಳ್ಳುಗಳು ಇರುವುದಿಲ್ಲ. ಅಂಕುಡೊಂಕಾಗಿ ಇದ್ದರೂ ಹಸಿಯಾಗಿ ಇರುವಾಗ ನೆಲದ ಮೇಲೆ ಇಟ್ಟು ಭಾರವಾದ ಕಲ್ಲುಗಳನ್ನು ಇದರ ಮೇಲೆ ಇರಿಸುವುದರಿಂದ ಅಥವಾ ಮರಕ್ಕೆ ನೇರವಾಗಿ ಇಳಿಬಿಟ್ಟು ಕೆಳಗಡೆ ಭಾರವಾದಕಲ್ಲುಕಟ್ಟಿ ನೇರವಾಗುವಂತೆ ಮಾಡಬಹುದು.ಬಿದಿರುಒಣಗುವ ಮೊದಲೇಇದರ ಗೆಣ್ಣುಗಳನ್ನು ಸರಿಯಾಗಿ ತುಂಡರಿಸಬೇಕು. ನಂತರ ತೆಳ್ಳಗೆ ಇರುವ ತುದಿಗೆ ಕತ್ತಿಕಟ್ಟಿದರೆ ಮರಗಳಲ್ಲಿ ಬೆಳೆದ ಕಾಯಿಗಳನ್ನು ಕೀಳಲು ದೋಟಿ ತಯಾರಾಗುತ್ತದೆ. ನೀರು ತಾಕದ ಹಾಗೆ ಜತನದಿಂದ ಉಪಯೋಗಿಸಿದರೆ ಎರಡು – ಮೂರು ವರ್ಷಕ್ಕೆ ನಿರಾತಂಕವಾಗಿ ಬಳಸಬಹುದಾದ ಲೆಂಕಿರಿ ಬಿದಿರಿನ ದೋಟಿ ಬಲು ಗಟ್ಟಿ. ಇಲ್ಲವಾದರೆಒಂದೇ ವರ್ಷಕ್ಕೆ ಗೆದ್ದಲುಗಳಿಗೆ ಆಹಾರವಾದೀತು.

Advertisement

# ವಂದನಾರವಿ ಕೆ.ವೈ.ವೇಣೂರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

12 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

14 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago