Advertisement
ಅನುಕ್ರಮ

ಬಿದಿರಿನ ದೋಟಿ ಬಲು ಗಟ್ಟಿ……

Share

ಬಿದಿರು ಹುಲ್ಲಿನ ಗುಂಪಿಗೆ ಸೇರಿದ ಸಸ್ಯ. ವಂಶ, ವೇಣು, ಯುವಫಲ ಎಂದು ಸಂಸ್ಕೃತ ಭಾಷೆಯಲ್ಲಿ ಕರೆಸಿಕೊಳ್ಳುವ ಬಿದಿರು ರೈತ ಮಿತ್ರಕೂಡಾ ಹೌದು. ಜಗತ್ತಿನಲ್ಲಿ 550 ಕ್ಕೂ ಹೆಚ್ಚು ಪ್ರಭೇದಗಳಿವೆ. ನಮ್ಮ ದೇಶದಲ್ಲಿ ದೊರೆಯುವುದು ಕೇವಲ 130 ಜಾತಿಯ ಬಿದಿರುಗಳು ಅದರಲ್ಲೂ ಹೆಚ್ಚಾಗಿ ಸುಮಾರು 40 ವೆರೈಟಿಯ ಬಿದಿರುಗಳು ಕಾಣಸಿಗುತ್ತವೆ.

Advertisement

ದಶಕದ ಹಿಂದೆ ಕೃಷಿಕಾರ್ಯಗಳಿಗೆ ಸಲಕರಣೆಗಳಿಗಾಗಿ ರೈತರು ಅವಲಂಬಿಸುತ್ತಿದ್ದದ್ದು ಕಡಿಮೆ ವೆಚ್ಚದಲ್ಲಿ ಸುಲಭವಾಗಿ ದೊರೆಯುತ್ತಿದ್ದ ಬಿದಿರುಗಳನ್ನು ಅದರಲ್ಲೂ ಮುಖ್ಯವಾಗಿ ಅಡಿಕೆ, ತೆಂಗು, ಕೊಕ್ಕೋ, ಗೇರು ಮರಗಳಲ್ಲಿ ಬೆಳೆದ ಫಲಗಳನ್ನು ಕೀಳಲು ಅನಿವಾರ್ಯವಾದ ದೋಟಿ ತಯಾರಿಸಲು ಕೃಷಿಕರು ಮಾರು ಹೋಗುತ್ತಿದ್ದದ್ದು ಲೆಂಕಿರಿ ಎನ್ನುವ ಬಿದಿರಿಗೆ. ಆದರೆ ಇತ್ತೀಚಿನ ದಿನಗಳಲ್ಲಿ ಹಣಕೊಟ್ಟರೆ ಸುಲಭವಾಗಿ ದೊರೆಯುವ ಅಲ್ಯುಮೀನಿಯಂ ಪೋಲ್ ಬಂದ ನಂತರ ಬಿದಿರಿನ ದೋಟಿಗಳ(ದೋಟಿಗೆಕೊಕ್ಕೆ ಎಂದೂ ಹೆಸರಿದೆ) ಬಳಕೆ ಕಡಿಮೆಯಾಗುತ್ತಿದೆ. ಅದಲ್ಲದೆ ಬಿದಿರು ಒತ್ತೊತ್ತಾಗಿ ಬೆಳೆಯವ ಸಸ್ಯ. ದೋಟಿ ಮಾಡಲು ಅನುಕೂಲವಾದದ್ದನ್ನು ತುಂಡರಿಸಲು ಅದರ ಸುತ್ತಮುತ್ತಲಿರುವ ಅಡೆತಡೆಗಳನ್ನು ನಿವಾರಿಸಿ ತೆಗೆಯಬೇಕು. ಬಿದಿರನ್ನು ತುಂಡರಿಸಿ ತಂದು ಒಣಗಿಸಿ ದೋಟಿ ಮಾಡಲು ಸಮಯ ಜೊತೆಗೆ ತಾಳ್ಮೆಯೂ ಬೇಕು.

ಲೆಂಕಿರಿ ಬಿದಿರಿನ ವಿಶೇಷತೆ:  ಉದ್ದವಾಗಿ ಸಪೂರವಾಗಿ ಬೆಳೆಯುವ ಲೆಂಕಿರಿ ಬಿದಿರು ದೋಟಿ ತಯಾರಿಸಲು ತಕ್ಕದಾದದ್ದು. ಒಳಗಡೆ ಟೊಳ್ಳಾಗಿ ಇರುವುದರಿಂದ ಹಗುರವಾಗಿ ಆದರೆ ಅಷ್ಟೇ ಗಟ್ಟಿಯಾಗಿರುವುದು ಇದರ ಇನ್ನೊಂದು ವಿಶೇಷತೆ. ಫಲಗಳನ್ನು ಕೀಳಲು ಹಗುರವಾದ ದೋಟಿ ಬೇಕಾಗಿರುವುದರಿಂದ ಕೃಷಿಕರು ಹೆಚ್ಚಾಗಿ ಬಳಸುವುದು ಲೆಂಕಿರಿ ಬಿದಿರನ್ನು.ಈ ಜಾತಿಯ ಬಿದಿರುಗಳಲ್ಲಿ ಮುಳ್ಳುಗಳು ಇರುವುದಿಲ್ಲ. ಅಂಕುಡೊಂಕಾಗಿ ಇದ್ದರೂ ಹಸಿಯಾಗಿ ಇರುವಾಗ ನೆಲದ ಮೇಲೆ ಇಟ್ಟು ಭಾರವಾದ ಕಲ್ಲುಗಳನ್ನು ಇದರ ಮೇಲೆ ಇರಿಸುವುದರಿಂದ ಅಥವಾ ಮರಕ್ಕೆ ನೇರವಾಗಿ ಇಳಿಬಿಟ್ಟು ಕೆಳಗಡೆ ಭಾರವಾದಕಲ್ಲುಕಟ್ಟಿ ನೇರವಾಗುವಂತೆ ಮಾಡಬಹುದು.ಬಿದಿರುಒಣಗುವ ಮೊದಲೇಇದರ ಗೆಣ್ಣುಗಳನ್ನು ಸರಿಯಾಗಿ ತುಂಡರಿಸಬೇಕು. ನಂತರ ತೆಳ್ಳಗೆ ಇರುವ ತುದಿಗೆ ಕತ್ತಿಕಟ್ಟಿದರೆ ಮರಗಳಲ್ಲಿ ಬೆಳೆದ ಕಾಯಿಗಳನ್ನು ಕೀಳಲು ದೋಟಿ ತಯಾರಾಗುತ್ತದೆ. ನೀರು ತಾಕದ ಹಾಗೆ ಜತನದಿಂದ ಉಪಯೋಗಿಸಿದರೆ ಎರಡು – ಮೂರು ವರ್ಷಕ್ಕೆ ನಿರಾತಂಕವಾಗಿ ಬಳಸಬಹುದಾದ ಲೆಂಕಿರಿ ಬಿದಿರಿನ ದೋಟಿ ಬಲು ಗಟ್ಟಿ. ಇಲ್ಲವಾದರೆಒಂದೇ ವರ್ಷಕ್ಕೆ ಗೆದ್ದಲುಗಳಿಗೆ ಆಹಾರವಾದೀತು.

# ವಂದನಾರವಿ ಕೆ.ವೈ.ವೇಣೂರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

9 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago