Advertisement
ಅನುಕ್ರಮ

ಬಿದಿರಿನ ದೋಟಿ ಬಲು ಗಟ್ಟಿ……

Share

ಬಿದಿರು ಹುಲ್ಲಿನ ಗುಂಪಿಗೆ ಸೇರಿದ ಸಸ್ಯ. ವಂಶ, ವೇಣು, ಯುವಫಲ ಎಂದು ಸಂಸ್ಕೃತ ಭಾಷೆಯಲ್ಲಿ ಕರೆಸಿಕೊಳ್ಳುವ ಬಿದಿರು ರೈತ ಮಿತ್ರಕೂಡಾ ಹೌದು. ಜಗತ್ತಿನಲ್ಲಿ 550 ಕ್ಕೂ ಹೆಚ್ಚು ಪ್ರಭೇದಗಳಿವೆ. ನಮ್ಮ ದೇಶದಲ್ಲಿ ದೊರೆಯುವುದು ಕೇವಲ 130 ಜಾತಿಯ ಬಿದಿರುಗಳು ಅದರಲ್ಲೂ ಹೆಚ್ಚಾಗಿ ಸುಮಾರು 40 ವೆರೈಟಿಯ ಬಿದಿರುಗಳು ಕಾಣಸಿಗುತ್ತವೆ.

ದಶಕದ ಹಿಂದೆ ಕೃಷಿಕಾರ್ಯಗಳಿಗೆ ಸಲಕರಣೆಗಳಿಗಾಗಿ ರೈತರು ಅವಲಂಬಿಸುತ್ತಿದ್ದದ್ದು ಕಡಿಮೆ ವೆಚ್ಚದಲ್ಲಿ ಸುಲಭವಾಗಿ ದೊರೆಯುತ್ತಿದ್ದ ಬಿದಿರುಗಳನ್ನು ಅದರಲ್ಲೂ ಮುಖ್ಯವಾಗಿ ಅಡಿಕೆ, ತೆಂಗು, ಕೊಕ್ಕೋ, ಗೇರು ಮರಗಳಲ್ಲಿ ಬೆಳೆದ ಫಲಗಳನ್ನು ಕೀಳಲು ಅನಿವಾರ್ಯವಾದ ದೋಟಿ ತಯಾರಿಸಲು ಕೃಷಿಕರು ಮಾರು ಹೋಗುತ್ತಿದ್ದದ್ದು ಲೆಂಕಿರಿ ಎನ್ನುವ ಬಿದಿರಿಗೆ. ಆದರೆ ಇತ್ತೀಚಿನ ದಿನಗಳಲ್ಲಿ ಹಣಕೊಟ್ಟರೆ ಸುಲಭವಾಗಿ ದೊರೆಯುವ ಅಲ್ಯುಮೀನಿಯಂ ಪೋಲ್ ಬಂದ ನಂತರ ಬಿದಿರಿನ ದೋಟಿಗಳ(ದೋಟಿಗೆಕೊಕ್ಕೆ ಎಂದೂ ಹೆಸರಿದೆ) ಬಳಕೆ ಕಡಿಮೆಯಾಗುತ್ತಿದೆ. ಅದಲ್ಲದೆ ಬಿದಿರು ಒತ್ತೊತ್ತಾಗಿ ಬೆಳೆಯವ ಸಸ್ಯ. ದೋಟಿ ಮಾಡಲು ಅನುಕೂಲವಾದದ್ದನ್ನು ತುಂಡರಿಸಲು ಅದರ ಸುತ್ತಮುತ್ತಲಿರುವ ಅಡೆತಡೆಗಳನ್ನು ನಿವಾರಿಸಿ ತೆಗೆಯಬೇಕು. ಬಿದಿರನ್ನು ತುಂಡರಿಸಿ ತಂದು ಒಣಗಿಸಿ ದೋಟಿ ಮಾಡಲು ಸಮಯ ಜೊತೆಗೆ ತಾಳ್ಮೆಯೂ ಬೇಕು.

ಲೆಂಕಿರಿ ಬಿದಿರಿನ ವಿಶೇಷತೆ:  ಉದ್ದವಾಗಿ ಸಪೂರವಾಗಿ ಬೆಳೆಯುವ ಲೆಂಕಿರಿ ಬಿದಿರು ದೋಟಿ ತಯಾರಿಸಲು ತಕ್ಕದಾದದ್ದು. ಒಳಗಡೆ ಟೊಳ್ಳಾಗಿ ಇರುವುದರಿಂದ ಹಗುರವಾಗಿ ಆದರೆ ಅಷ್ಟೇ ಗಟ್ಟಿಯಾಗಿರುವುದು ಇದರ ಇನ್ನೊಂದು ವಿಶೇಷತೆ. ಫಲಗಳನ್ನು ಕೀಳಲು ಹಗುರವಾದ ದೋಟಿ ಬೇಕಾಗಿರುವುದರಿಂದ ಕೃಷಿಕರು ಹೆಚ್ಚಾಗಿ ಬಳಸುವುದು ಲೆಂಕಿರಿ ಬಿದಿರನ್ನು.ಈ ಜಾತಿಯ ಬಿದಿರುಗಳಲ್ಲಿ ಮುಳ್ಳುಗಳು ಇರುವುದಿಲ್ಲ. ಅಂಕುಡೊಂಕಾಗಿ ಇದ್ದರೂ ಹಸಿಯಾಗಿ ಇರುವಾಗ ನೆಲದ ಮೇಲೆ ಇಟ್ಟು ಭಾರವಾದ ಕಲ್ಲುಗಳನ್ನು ಇದರ ಮೇಲೆ ಇರಿಸುವುದರಿಂದ ಅಥವಾ ಮರಕ್ಕೆ ನೇರವಾಗಿ ಇಳಿಬಿಟ್ಟು ಕೆಳಗಡೆ ಭಾರವಾದಕಲ್ಲುಕಟ್ಟಿ ನೇರವಾಗುವಂತೆ ಮಾಡಬಹುದು.ಬಿದಿರುಒಣಗುವ ಮೊದಲೇಇದರ ಗೆಣ್ಣುಗಳನ್ನು ಸರಿಯಾಗಿ ತುಂಡರಿಸಬೇಕು. ನಂತರ ತೆಳ್ಳಗೆ ಇರುವ ತುದಿಗೆ ಕತ್ತಿಕಟ್ಟಿದರೆ ಮರಗಳಲ್ಲಿ ಬೆಳೆದ ಕಾಯಿಗಳನ್ನು ಕೀಳಲು ದೋಟಿ ತಯಾರಾಗುತ್ತದೆ. ನೀರು ತಾಕದ ಹಾಗೆ ಜತನದಿಂದ ಉಪಯೋಗಿಸಿದರೆ ಎರಡು – ಮೂರು ವರ್ಷಕ್ಕೆ ನಿರಾತಂಕವಾಗಿ ಬಳಸಬಹುದಾದ ಲೆಂಕಿರಿ ಬಿದಿರಿನ ದೋಟಿ ಬಲು ಗಟ್ಟಿ. ಇಲ್ಲವಾದರೆಒಂದೇ ವರ್ಷಕ್ಕೆ ಗೆದ್ದಲುಗಳಿಗೆ ಆಹಾರವಾದೀತು.

# ವಂದನಾರವಿ ಕೆ.ವೈ.ವೇಣೂರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 minute ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 hour ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

3 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

4 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

17 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

1 day ago