Advertisement
ಅನುಕ್ರಮ

ಬಿದಿರಿನ ದೋಟಿ ಬಲು ಗಟ್ಟಿ……

Share

ಬಿದಿರು ಹುಲ್ಲಿನ ಗುಂಪಿಗೆ ಸೇರಿದ ಸಸ್ಯ. ವಂಶ, ವೇಣು, ಯುವಫಲ ಎಂದು ಸಂಸ್ಕೃತ ಭಾಷೆಯಲ್ಲಿ ಕರೆಸಿಕೊಳ್ಳುವ ಬಿದಿರು ರೈತ ಮಿತ್ರಕೂಡಾ ಹೌದು. ಜಗತ್ತಿನಲ್ಲಿ 550 ಕ್ಕೂ ಹೆಚ್ಚು ಪ್ರಭೇದಗಳಿವೆ. ನಮ್ಮ ದೇಶದಲ್ಲಿ ದೊರೆಯುವುದು ಕೇವಲ 130 ಜಾತಿಯ ಬಿದಿರುಗಳು ಅದರಲ್ಲೂ ಹೆಚ್ಚಾಗಿ ಸುಮಾರು 40 ವೆರೈಟಿಯ ಬಿದಿರುಗಳು ಕಾಣಸಿಗುತ್ತವೆ.

ದಶಕದ ಹಿಂದೆ ಕೃಷಿಕಾರ್ಯಗಳಿಗೆ ಸಲಕರಣೆಗಳಿಗಾಗಿ ರೈತರು ಅವಲಂಬಿಸುತ್ತಿದ್ದದ್ದು ಕಡಿಮೆ ವೆಚ್ಚದಲ್ಲಿ ಸುಲಭವಾಗಿ ದೊರೆಯುತ್ತಿದ್ದ ಬಿದಿರುಗಳನ್ನು ಅದರಲ್ಲೂ ಮುಖ್ಯವಾಗಿ ಅಡಿಕೆ, ತೆಂಗು, ಕೊಕ್ಕೋ, ಗೇರು ಮರಗಳಲ್ಲಿ ಬೆಳೆದ ಫಲಗಳನ್ನು ಕೀಳಲು ಅನಿವಾರ್ಯವಾದ ದೋಟಿ ತಯಾರಿಸಲು ಕೃಷಿಕರು ಮಾರು ಹೋಗುತ್ತಿದ್ದದ್ದು ಲೆಂಕಿರಿ ಎನ್ನುವ ಬಿದಿರಿಗೆ. ಆದರೆ ಇತ್ತೀಚಿನ ದಿನಗಳಲ್ಲಿ ಹಣಕೊಟ್ಟರೆ ಸುಲಭವಾಗಿ ದೊರೆಯುವ ಅಲ್ಯುಮೀನಿಯಂ ಪೋಲ್ ಬಂದ ನಂತರ ಬಿದಿರಿನ ದೋಟಿಗಳ(ದೋಟಿಗೆಕೊಕ್ಕೆ ಎಂದೂ ಹೆಸರಿದೆ) ಬಳಕೆ ಕಡಿಮೆಯಾಗುತ್ತಿದೆ. ಅದಲ್ಲದೆ ಬಿದಿರು ಒತ್ತೊತ್ತಾಗಿ ಬೆಳೆಯವ ಸಸ್ಯ. ದೋಟಿ ಮಾಡಲು ಅನುಕೂಲವಾದದ್ದನ್ನು ತುಂಡರಿಸಲು ಅದರ ಸುತ್ತಮುತ್ತಲಿರುವ ಅಡೆತಡೆಗಳನ್ನು ನಿವಾರಿಸಿ ತೆಗೆಯಬೇಕು. ಬಿದಿರನ್ನು ತುಂಡರಿಸಿ ತಂದು ಒಣಗಿಸಿ ದೋಟಿ ಮಾಡಲು ಸಮಯ ಜೊತೆಗೆ ತಾಳ್ಮೆಯೂ ಬೇಕು.

ಲೆಂಕಿರಿ ಬಿದಿರಿನ ವಿಶೇಷತೆ:  ಉದ್ದವಾಗಿ ಸಪೂರವಾಗಿ ಬೆಳೆಯುವ ಲೆಂಕಿರಿ ಬಿದಿರು ದೋಟಿ ತಯಾರಿಸಲು ತಕ್ಕದಾದದ್ದು. ಒಳಗಡೆ ಟೊಳ್ಳಾಗಿ ಇರುವುದರಿಂದ ಹಗುರವಾಗಿ ಆದರೆ ಅಷ್ಟೇ ಗಟ್ಟಿಯಾಗಿರುವುದು ಇದರ ಇನ್ನೊಂದು ವಿಶೇಷತೆ. ಫಲಗಳನ್ನು ಕೀಳಲು ಹಗುರವಾದ ದೋಟಿ ಬೇಕಾಗಿರುವುದರಿಂದ ಕೃಷಿಕರು ಹೆಚ್ಚಾಗಿ ಬಳಸುವುದು ಲೆಂಕಿರಿ ಬಿದಿರನ್ನು.ಈ ಜಾತಿಯ ಬಿದಿರುಗಳಲ್ಲಿ ಮುಳ್ಳುಗಳು ಇರುವುದಿಲ್ಲ. ಅಂಕುಡೊಂಕಾಗಿ ಇದ್ದರೂ ಹಸಿಯಾಗಿ ಇರುವಾಗ ನೆಲದ ಮೇಲೆ ಇಟ್ಟು ಭಾರವಾದ ಕಲ್ಲುಗಳನ್ನು ಇದರ ಮೇಲೆ ಇರಿಸುವುದರಿಂದ ಅಥವಾ ಮರಕ್ಕೆ ನೇರವಾಗಿ ಇಳಿಬಿಟ್ಟು ಕೆಳಗಡೆ ಭಾರವಾದಕಲ್ಲುಕಟ್ಟಿ ನೇರವಾಗುವಂತೆ ಮಾಡಬಹುದು.ಬಿದಿರುಒಣಗುವ ಮೊದಲೇಇದರ ಗೆಣ್ಣುಗಳನ್ನು ಸರಿಯಾಗಿ ತುಂಡರಿಸಬೇಕು. ನಂತರ ತೆಳ್ಳಗೆ ಇರುವ ತುದಿಗೆ ಕತ್ತಿಕಟ್ಟಿದರೆ ಮರಗಳಲ್ಲಿ ಬೆಳೆದ ಕಾಯಿಗಳನ್ನು ಕೀಳಲು ದೋಟಿ ತಯಾರಾಗುತ್ತದೆ. ನೀರು ತಾಕದ ಹಾಗೆ ಜತನದಿಂದ ಉಪಯೋಗಿಸಿದರೆ ಎರಡು – ಮೂರು ವರ್ಷಕ್ಕೆ ನಿರಾತಂಕವಾಗಿ ಬಳಸಬಹುದಾದ ಲೆಂಕಿರಿ ಬಿದಿರಿನ ದೋಟಿ ಬಲು ಗಟ್ಟಿ. ಇಲ್ಲವಾದರೆಒಂದೇ ವರ್ಷಕ್ಕೆ ಗೆದ್ದಲುಗಳಿಗೆ ಆಹಾರವಾದೀತು.

# ವಂದನಾರವಿ ಕೆ.ವೈ.ವೇಣೂರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

3 minutes ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

31 minutes ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

4 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

5 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

15 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

16 hours ago