Advertisement
Political mirror

ಬಿರುಸಿನ ಪ್ರಚಾರಕ್ಕೆ ತೆರೆ…… ಬುಧವಾರ ಜನತೆಯ ತೀರ್ಪು

Share

* ಸ್ಪೆಷಲ್ ಕರೆಸ್ಪಾಂಡೆಂಟ್, ಸುಳ್ಯನ್ಯೂಸ್.ಕಾಂ

Advertisement
Advertisement

 

ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆ ಬುಧವಾರ ನಡೆಯಲಿದ್ದು ಚುನಾವಣಾ ಪ್ರಚಾರ ಸೋಮವಾರ ಸಂಜೆ ಕೊನೆಗೊಂಡಿದೆ.

ಕಳೆದ 15 ದಿನಗಳಿಂದ ಉರಿ ಬಿಸಿಲನ್ನೂ ಲೆಕ್ಕಿಸದೆ ನಗರ ಪಂಚಾಯತ್ ನ ವಾರ್ಡ್ ವಾರ್ಡ್ ಗಳಲ್ಲಿ ನಡೆದ ಅಬ್ಬರದ ಪ್ರಚಾರಕ್ಕೆ ತೆರೆ ಬೀಳುವುರೊಂದಿಗೆ ರಾಜಕೀಯ ಪಕ್ಷಗಳ ಚಿತ್ತ 29 ರಂದು ಮತದಾರರು ನೀಡುವ ತೀರ್ಪಿನತ್ತ ನೆಟ್ಟಿದೆ. ಮನೆ ಮನೆ ಭೇಟಿ ನೀಡಿ ಮತದಾರರನ್ನು ಮುಖತಃ ಭೇಟಿ ಮಾಡಿ ಓಲೈಕೆ .ಮಾಡುವ ಚುನಾವಣಾ ಪ್ರಚಾರವನ್ನು ಎಲ್ಲಾ ಪಕ್ಷದವರೂ ಮಾಡಿದ್ದರು. ಬಹಿರಂಗ ಪ್ರಚಾರ ಸಭೆ, ಪ್ಲೆಕ್ಸ್, ಬ್ಯಾನರ್, ಮೈಕಾಸುರನ ಅಬ್ಬರದ ಪ್ರಚಾರ ಎಲ್ಲೂ ಕಂಡು ಬಂದಿರಲಿಲ್ಲ‌. ಅಭ್ಯರ್ಥಿಗಳು ಮತ್ತು ಪಕ್ಷದ ಕಾರ್ಯಕರ್ತರು ಎರಡು, ಮೂರು, ಕೆಲವೆಡೆ ನಾಲ್ಕು ಹಂತದಲ್ಲಿ ಮನೆ ಮನೆ ಭೇಟಿ ಮಾಡಿ ಪ್ರಚಾರ ನಡೆಸಿದ್ದಾರೆ.

ಗೆಲುವಿನ ಲೆಕ್ಕಾಚಾರ ಹೇಗೆ..?

ಚುನಾವಣಾ ಪ್ರಚಾರಕ್ಕೆ ತೆರೆ ಬಿದ್ದಾಗ ಎಲ್ಲಾ ಪಕ್ಷಗಳು ತಾವು ಪಡೆಯಬಹುದಾದ ಸ್ಥಾನಗಳ ಬಗ್ಗೆ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಮಧ್ಯೆ ಅಧಿಕಾರಕ್ಕಾಗಿ ‘ಟಗ್ ಆಫ್ ವಾರ್‘ ನಡೆಯಲಿದೆ. 20 ವಾರ್ಡ್ ಗಳಲ್ಲಿ 12ರಿಂದ 15 ಸ್ಥಾನಗಳಲ್ಲಿ ಗೆದ್ದು ಅಧಿಕಾರದ ಗದ್ದುಗೆ ಹಿಡಿಯುವುದು ಖಚಿತ ಎನ್ನುತ್ತಾರೆ ಬಿಜೆಪಿ ನಾಯಕರು.

10 ವಾರ್ಡ್ ಗಳಲ್ಲಿ ಗೆಲುವು ನಿಶ್ಚಿತ. ಮೂರು ವಾರ್ಡ್ ಗಳಲ್ಲಿ ತೀವ್ರ ಪೈಪೋಟಿ ಇದ್ದರೂ ಇದರಲ್ಲಿ ಕನಿಷ್ಠ ಎರಡು ಬರುವ ಸಾಧ್ಯತೆ ಇದ್ದು 12 ಸ್ಥಾನದೊಂದಿಗೆ ಅಧಿಕಾರ ಪಡೆಯಬಹುದು ಎಂಬುದು ಕಾಂಗ್ರೆಸ್ ಲೆಕ್ಕಾಚಾರ.

ಲೋಕಸಭಾ ಚುನಾವಣಾ ಫಲಿತಾಂಶ ನಗರ ಪಂಚಾಯತ್ ನಲ್ಲೂ ಪ್ರಭಾವ ಬೀರುವ ಸಾಧ್ಯತೆ ಇದರಿಂದ ಹೆಚ್ಚಿನ ಸ್ಥಾನಗಳು ಲಭಿಸಬಹುದು ಎಂಬುದು ಬಿಜೆಪಿ ನಿರೀಕ್ಷೆ.

ನ.ಪಂ.ಚುನಾವಣೆ ಸ್ಥಳೀಯ ಸಮಸ್ಯೆಗಳ ಆಧಾರದಲ್ಲಿ ನಡೆಯಲಿದ್ದು ಮತದಾರರ ತೀರ್ಪು ಸ್ಥಳೀಯ ಸಮಸ್ಯೆಗಳನ್ನು ಕೇಂದ್ರೀಕರಿಸಿ ಅದರ ಆಧಾರದಲ್ಲಿ ಹೊರ ಬರಲಿದೆ ಎಂಬುದು ಕಾಂಗ್ರೆಸ್ ವಾದ.
ಇನ್ನು ಉಳಿದಂತೆ ಎಸ್ ಡಿಪಿಐ ಅಭ್ಯರ್ಥಿಗಳು ಎರಡು ವಾರ್ಡ್ ಗಳಲ್ಲಿ, ಆಮ್ ಆದ್ಮಿ ಪಕ್ಷದ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಒಂದು ಕಡೆ ಗೆಲ್ಲಬಹುದು ಎಂಬುದು ಈ ಪಕ್ಷಗಳ ವಿಶ್ವಾಸ. ಕೆಲವು ವಾರ್ಡ್ ಗಳಲ್ಲಿ ತೀವ್ರ ಪೈಪೋಟಿ ನೀಡುವ ಪಕ್ಷೇತರ ಅಭ್ಯರ್ಥಿಗಳು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

5 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

5 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago