Advertisement
Political mirror

ಬಿರುಸಿನ ಪ್ರಚಾರಕ್ಕೆ ತೆರೆ…… ಬುಧವಾರ ಜನತೆಯ ತೀರ್ಪು

Share

* ಸ್ಪೆಷಲ್ ಕರೆಸ್ಪಾಂಡೆಂಟ್, ಸುಳ್ಯನ್ಯೂಸ್.ಕಾಂ

 

ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆ ಬುಧವಾರ ನಡೆಯಲಿದ್ದು ಚುನಾವಣಾ ಪ್ರಚಾರ ಸೋಮವಾರ ಸಂಜೆ ಕೊನೆಗೊಂಡಿದೆ.

ಕಳೆದ 15 ದಿನಗಳಿಂದ ಉರಿ ಬಿಸಿಲನ್ನೂ ಲೆಕ್ಕಿಸದೆ ನಗರ ಪಂಚಾಯತ್ ನ ವಾರ್ಡ್ ವಾರ್ಡ್ ಗಳಲ್ಲಿ ನಡೆದ ಅಬ್ಬರದ ಪ್ರಚಾರಕ್ಕೆ ತೆರೆ ಬೀಳುವುರೊಂದಿಗೆ ರಾಜಕೀಯ ಪಕ್ಷಗಳ ಚಿತ್ತ 29 ರಂದು ಮತದಾರರು ನೀಡುವ ತೀರ್ಪಿನತ್ತ ನೆಟ್ಟಿದೆ. ಮನೆ ಮನೆ ಭೇಟಿ ನೀಡಿ ಮತದಾರರನ್ನು ಮುಖತಃ ಭೇಟಿ ಮಾಡಿ ಓಲೈಕೆ .ಮಾಡುವ ಚುನಾವಣಾ ಪ್ರಚಾರವನ್ನು ಎಲ್ಲಾ ಪಕ್ಷದವರೂ ಮಾಡಿದ್ದರು. ಬಹಿರಂಗ ಪ್ರಚಾರ ಸಭೆ, ಪ್ಲೆಕ್ಸ್, ಬ್ಯಾನರ್, ಮೈಕಾಸುರನ ಅಬ್ಬರದ ಪ್ರಚಾರ ಎಲ್ಲೂ ಕಂಡು ಬಂದಿರಲಿಲ್ಲ‌. ಅಭ್ಯರ್ಥಿಗಳು ಮತ್ತು ಪಕ್ಷದ ಕಾರ್ಯಕರ್ತರು ಎರಡು, ಮೂರು, ಕೆಲವೆಡೆ ನಾಲ್ಕು ಹಂತದಲ್ಲಿ ಮನೆ ಮನೆ ಭೇಟಿ ಮಾಡಿ ಪ್ರಚಾರ ನಡೆಸಿದ್ದಾರೆ.

ಗೆಲುವಿನ ಲೆಕ್ಕಾಚಾರ ಹೇಗೆ..?

ಚುನಾವಣಾ ಪ್ರಚಾರಕ್ಕೆ ತೆರೆ ಬಿದ್ದಾಗ ಎಲ್ಲಾ ಪಕ್ಷಗಳು ತಾವು ಪಡೆಯಬಹುದಾದ ಸ್ಥಾನಗಳ ಬಗ್ಗೆ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಮಧ್ಯೆ ಅಧಿಕಾರಕ್ಕಾಗಿ ‘ಟಗ್ ಆಫ್ ವಾರ್‘ ನಡೆಯಲಿದೆ. 20 ವಾರ್ಡ್ ಗಳಲ್ಲಿ 12ರಿಂದ 15 ಸ್ಥಾನಗಳಲ್ಲಿ ಗೆದ್ದು ಅಧಿಕಾರದ ಗದ್ದುಗೆ ಹಿಡಿಯುವುದು ಖಚಿತ ಎನ್ನುತ್ತಾರೆ ಬಿಜೆಪಿ ನಾಯಕರು.

10 ವಾರ್ಡ್ ಗಳಲ್ಲಿ ಗೆಲುವು ನಿಶ್ಚಿತ. ಮೂರು ವಾರ್ಡ್ ಗಳಲ್ಲಿ ತೀವ್ರ ಪೈಪೋಟಿ ಇದ್ದರೂ ಇದರಲ್ಲಿ ಕನಿಷ್ಠ ಎರಡು ಬರುವ ಸಾಧ್ಯತೆ ಇದ್ದು 12 ಸ್ಥಾನದೊಂದಿಗೆ ಅಧಿಕಾರ ಪಡೆಯಬಹುದು ಎಂಬುದು ಕಾಂಗ್ರೆಸ್ ಲೆಕ್ಕಾಚಾರ.

ಲೋಕಸಭಾ ಚುನಾವಣಾ ಫಲಿತಾಂಶ ನಗರ ಪಂಚಾಯತ್ ನಲ್ಲೂ ಪ್ರಭಾವ ಬೀರುವ ಸಾಧ್ಯತೆ ಇದರಿಂದ ಹೆಚ್ಚಿನ ಸ್ಥಾನಗಳು ಲಭಿಸಬಹುದು ಎಂಬುದು ಬಿಜೆಪಿ ನಿರೀಕ್ಷೆ.

ನ.ಪಂ.ಚುನಾವಣೆ ಸ್ಥಳೀಯ ಸಮಸ್ಯೆಗಳ ಆಧಾರದಲ್ಲಿ ನಡೆಯಲಿದ್ದು ಮತದಾರರ ತೀರ್ಪು ಸ್ಥಳೀಯ ಸಮಸ್ಯೆಗಳನ್ನು ಕೇಂದ್ರೀಕರಿಸಿ ಅದರ ಆಧಾರದಲ್ಲಿ ಹೊರ ಬರಲಿದೆ ಎಂಬುದು ಕಾಂಗ್ರೆಸ್ ವಾದ.
ಇನ್ನು ಉಳಿದಂತೆ ಎಸ್ ಡಿಪಿಐ ಅಭ್ಯರ್ಥಿಗಳು ಎರಡು ವಾರ್ಡ್ ಗಳಲ್ಲಿ, ಆಮ್ ಆದ್ಮಿ ಪಕ್ಷದ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಒಂದು ಕಡೆ ಗೆಲ್ಲಬಹುದು ಎಂಬುದು ಈ ಪಕ್ಷಗಳ ವಿಶ್ವಾಸ. ಕೆಲವು ವಾರ್ಡ್ ಗಳಲ್ಲಿ ತೀವ್ರ ಪೈಪೋಟಿ ನೀಡುವ ಪಕ್ಷೇತರ ಅಭ್ಯರ್ಥಿಗಳು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

1 day ago