Advertisement
ಸುದ್ದಿಗಳು

ಬಿಲ್ಲವ ಸಮಾಜ ಸೇವಾ ಸಂಘದ ಸಮ್ಮೇಳನ : ವಿದ್ಯಾರ್ಥಿಗಳಿಗೆ ನೆರವು

Share

ಮಡಿಕೇರಿ: ಬ್ರಹ್ಮಶ್ರೀ ನಾರಾಯಣಗುರುಗಳ ದಿವ್ಯ ಸಂದೇಶದಿಂದಾಗಿ ಸಮಾಜದಲ್ಲಿ ಅನೇಕ ಬದಲಾವಣೆಗಳಾಗಿವೆ. `ಶಿಕ್ಷಣದಲ್ಲಿ ಸ್ವತಂತ್ರ್ಯರಾಗಿ, ಸಂಘಟನೆಯಿಂದ ಬಲಿಷ್ಠರಾಗಿ’ ಎನ್ನುವ ಅವರ ಸಂದೇಶವನ್ನು ಎಲ್ಲರು ಪಾಲಿಸುವಂತಾಗಬೇಕು ಎಂದು ಮಂಗಳೂರಿನ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಕರೆ ನೀಡಿದ್ದಾರೆ.
ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಮಡಿಕೇರಿಯ ಬಿಲ್ಲವ ಸಮಾಜ ಸೇವಾ ಸಂಘದ ಸಮ್ಮೇಳನ ಹಾಗೂ ನಾರಾಯಣ ಗುರು ಜಯಂತೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಮಾಜದ ಉನ್ನತಿಗೆ ಶಿಕ್ಷಣ ಅತ್ಯವಶ್ಯಕವಾಗಿದ್ದು, ಮಕ್ಕಳ ವಿದ್ಯಾಭ್ಯಾಸದ ಭದ್ರ ಅಡಿಪಾಯಕ್ಕೆ ಸಂಘಟನೆ ನೆರವಾಗಬೇಕು ಎಂದು ಹೇಳಿದರು. 150 ವರ್ಷಗಳ ಹಿಂದೆ ಜಾತಿ ಪದ್ಧತಿಯಿಂದಾಗಿ ಬಿಲ್ಲವ ಸಮಾಜದ ಜನರು ಶೋಷಣೆಗೆ ಒಳಗಾಗಿದ್ದರು. ನಾರಾಯಣ ಗುರುಗಳು ಸಮಾಜದಲ್ಲಿ ಹೊಸ ಸಂಚಲನವನ್ನು ಉಂಟು ಮಾಡಿದ್ದಾರೆ. ಅವರ ಆದರ್ಶ ಗುಣಗಳನ್ನು, ತತ್ವ ಸಿದ್ಧಾಂತಗಳನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದರು. ರಾಜ್ಯದ ಹಲವೆಡೆ ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇಂತಹ ಮಕ್ಕಳನ್ನು ಸಂಘ ಸಂಸ್ಥೆಗಳು ಗುರುತಿಸಿ ಅವರ ಶಿಕ್ಷಣಕ್ಕೆ ನೆರವಾಗಬೇಕು ಎಂದು ನವೀನ್ ಚಂದ್ರ ಹೇಳಿದರು.

ಮಂಗಳೂರಿನ ಬಿಲ್ಲವರ ಮಹಿಳಾ ಯೂನಿಯನ್ ಅಧ್ಯಕ್ಷೆ ಎನ್.ಸುಮಲತಾ ಸುವರ್ಣ `ಸಮಾಜ ಸೇವಾ ಸಂಘಗಳನ್ನು ಕಟ್ಟುವುದು ಮಾತ್ರ ಅಲ್ಲದೆ ಸಮುದಾಯ ಬಾಂಧವರ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಸ್ವಾವಲಂಬನೆ ಸಾಧಿಸುವ ಹೊಣೆಗಾರಿಕೆಯನ್ನು ಸಂಘಟನೆಗಳು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ. ಆ ನಿಟ್ಟಿನಲ್ಲಿ ಪೋಷಕರು ಚಿಂತನೆ ನಡೆಸಬೇಕು. ಉನ್ನತ ಶಿಕ್ಷಣ, ಉನ್ನತ ಹುದ್ದೆಯನ್ನು ಜನಾಂಗದ ಬಾಂಧವರು ಅಲಂಕರಿಸಬೇಕು ಎಂದು ಸಲಹೆ ನೀಡಿದರು.

ಮಡಿಕೇರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷೆ ಬಿ.ಎಸ್.ಲೀಲಾವತಿ ಮಾತನಾಡಿ, ಜಿಲ್ಲೆಯಲ್ಲಿ ಬಿಲ್ಲವ ಸಮಾಜ ಬಾಂಧವರು ಸುಮಾರು 2 ಲಕ್ಷಕ್ಕೂ ಹೆಚ್ಚು ಮಂದಿ ಇದ್ದಾರೆ. ಇವರಲ್ಲಿ ಸಾಕಷ್ಟು ಮಂದಿ ಆರ್ಥಿಕವಾಗಿ ಸಬಲತೆಯನ್ನು ಕಾಣದವರಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಂಘಟನೆಯಲ್ಲಿ ಸಮುದಾಯದ ಮುಖಂಡರು ತೆಗೆದುಕೊಳ್ಳುವ ನಿರ್ಣಯಗಳು ಸಮುದಾಯದ ಕಟ್ಟ ಕಡೆಯ ವ್ಯಕಿಗೂ ಮುಟ್ಟುವಂತಿರಬೇಕು ಎಂದು ತಿಳಿಸಿದರು.

ಇದೇ ಸಂದರ್ಭ ಮಡಿಕೇರಿ ಬಿಲ್ಲವ ಸಮಾಜ ಸೇವಾ ಸಂಘ ಹಾಗೂ ಅಖಿಲ ಭಾರತ ಬಿಲ್ಲವರ ಯೂನಿಯನ್ ಸಂಯುಕ್ತಾಶ್ರಯದಲ್ಲಿ ನೆರೆ ಸಂತ್ರಸ್ತರಿಗೆ ಪರಿಹಾರ ಚೆಕ್ ವಿತರಿಸಲಾಯಿತು ಮತ್ತು ವಿದ್ಯಾರ್ಥಿವೇತನ ನೀಡಲಾಯಿತು.
ಕುಶಾಲನಗರ ಸುವರ್ಣ ಕಾಫಿ ವಕ್ರ್ಸ್‍ನ ಉದ್ಯಮಿ ಬಿ.ಎನ್.ರಮೇಶ್, ತಾ.ಪಂ ಸದಸ್ಯ ಅಪ್ರು ರವೀಂದ್ರ, ಮಹಿಳಾ ಘಟಕದ ಅಧ್ಯಕ್ಷೆ ಪದ್ಮ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

6 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

7 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

1 day ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

3 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago