ಮಡಿಕೇರಿ : ಮೇಕೇರಿ ಗ್ರಾ.ಪಂ. ವ್ಯಾಪ್ತಿಯ ಬಿಳಿಗೇರಿ ಗ್ರಾಮದಲ್ಲಿ ಸ್ಥಗಿತಗೊಂಡಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಶಾಸಕ ಕೆ.ಜಿ.ಬೋಪಯ್ಯ ಅವರು ಸೂಕ್ತ ಕ್ರಮಕ್ಕಾಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಳೆದ ಸಾಲಿನ ಮಳೆಗಾಲದಲ್ಲಿ ರಸ್ತೆಯ ಅರ್ಧ ಭಾಗ ಕುಸಿದು ಬಿದ್ದು, ಕುಡಿಯುವ ನೀರಿನ ಬಾವಿ ಮುಚ್ಚಿ ಹೋಗಿತ್ತು. ಸ್ಥಳೀಯ ಮಂಡುವಂಡ ಕುಟುಂಬಸ್ಥರಿಗೆ ನೀರಿನ ಸಮಸ್ಯೆ ಎದುರಾಗಿರುವ ಬಗ್ಗೆ ಗ್ರಾಮಸ್ಥರು ಶಾಸಕರ ಗಮನ ಸೆಳೆದರು.
ಸಂಬಂಧಪಟ್ಟ ಇಲಾಖಾಧಿಕಾರಿಗಳನ್ನು ಸ್ಥಳದಲ್ಲಿಯೇ ದೂರವಾಣಿ ಮೂಲಕ ಸಂಪರ್ಕಿಸಿದ ಶಾಸಕ ಬೋಪಯ್ಯ ಅವರು ತಕ್ಷಣ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.
ಈ ಸಂದರ್ಭ ತಾ.ಪಂ ಸದಸ್ಯೆ ಕುಮುದ, ಗ್ರಾ.ಪಂ. ಉಪಾಧ್ಯಕ್ಷ ಭೀಮಯ್ಯ, ಪ್ರಮುಖರಾದ ಕೋಡಿರ ಪ್ರಸನ್ನ, ಉಮೇಶ್ ಅಪ್ಪಣ್ಣ, ತಿಮ್ಮಯ್ಯ ಕಾವೇರಪ್ಪ, ಮೇದಪ್ಪ, ಕುಶಾಲಪ್ಪ, ಎಂ.ಬಿ.ಜೋಯಪ್ಪ, ಗ್ರಾ.ಪಂ. ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ಹಾಜರಿದ್ದರು.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…
ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…
ಹವಾಮಾನ ಬದಲಾವಣೆಯಿಂದ ಎಲ್ ನಿನೋ ಮತ್ತು ಲಾ ನಿನಾ ಘಟನೆಗಳ ವರ್ತನೆ ಬದಲಾಗುತ್ತಿದ್ದು,…
ಉತ್ತರ ಪ್ರದೇಶ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಮುಖ ಗೋಆಧಾರಿತ ಉದ್ಯಮ ಅಭಿವೃದ್ಧಿಪಡಿಸಲು…
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…