ಮಡಿಕೇರಿ : ಮೇಕೇರಿ ಗ್ರಾ.ಪಂ. ವ್ಯಾಪ್ತಿಯ ಬಿಳಿಗೇರಿ ಗ್ರಾಮದಲ್ಲಿ ಸ್ಥಗಿತಗೊಂಡಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಶಾಸಕ ಕೆ.ಜಿ.ಬೋಪಯ್ಯ ಅವರು ಸೂಕ್ತ ಕ್ರಮಕ್ಕಾಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಳೆದ ಸಾಲಿನ ಮಳೆಗಾಲದಲ್ಲಿ ರಸ್ತೆಯ ಅರ್ಧ ಭಾಗ ಕುಸಿದು ಬಿದ್ದು, ಕುಡಿಯುವ ನೀರಿನ ಬಾವಿ ಮುಚ್ಚಿ ಹೋಗಿತ್ತು. ಸ್ಥಳೀಯ ಮಂಡುವಂಡ ಕುಟುಂಬಸ್ಥರಿಗೆ ನೀರಿನ ಸಮಸ್ಯೆ ಎದುರಾಗಿರುವ ಬಗ್ಗೆ ಗ್ರಾಮಸ್ಥರು ಶಾಸಕರ ಗಮನ ಸೆಳೆದರು.
ಸಂಬಂಧಪಟ್ಟ ಇಲಾಖಾಧಿಕಾರಿಗಳನ್ನು ಸ್ಥಳದಲ್ಲಿಯೇ ದೂರವಾಣಿ ಮೂಲಕ ಸಂಪರ್ಕಿಸಿದ ಶಾಸಕ ಬೋಪಯ್ಯ ಅವರು ತಕ್ಷಣ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.
ಈ ಸಂದರ್ಭ ತಾ.ಪಂ ಸದಸ್ಯೆ ಕುಮುದ, ಗ್ರಾ.ಪಂ. ಉಪಾಧ್ಯಕ್ಷ ಭೀಮಯ್ಯ, ಪ್ರಮುಖರಾದ ಕೋಡಿರ ಪ್ರಸನ್ನ, ಉಮೇಶ್ ಅಪ್ಪಣ್ಣ, ತಿಮ್ಮಯ್ಯ ಕಾವೇರಪ್ಪ, ಮೇದಪ್ಪ, ಕುಶಾಲಪ್ಪ, ಎಂ.ಬಿ.ಜೋಯಪ್ಪ, ಗ್ರಾ.ಪಂ. ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ಹಾಜರಿದ್ದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…