ಮಡಿಕೇರಿ : ಮೇಕೇರಿ ಗ್ರಾ.ಪಂ. ವ್ಯಾಪ್ತಿಯ ಬಿಳಿಗೇರಿ ಗ್ರಾಮದಲ್ಲಿ ಸ್ಥಗಿತಗೊಂಡಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಶಾಸಕ ಕೆ.ಜಿ.ಬೋಪಯ್ಯ ಅವರು ಸೂಕ್ತ ಕ್ರಮಕ್ಕಾಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಳೆದ ಸಾಲಿನ ಮಳೆಗಾಲದಲ್ಲಿ ರಸ್ತೆಯ ಅರ್ಧ ಭಾಗ ಕುಸಿದು ಬಿದ್ದು, ಕುಡಿಯುವ ನೀರಿನ ಬಾವಿ ಮುಚ್ಚಿ ಹೋಗಿತ್ತು. ಸ್ಥಳೀಯ ಮಂಡುವಂಡ ಕುಟುಂಬಸ್ಥರಿಗೆ ನೀರಿನ ಸಮಸ್ಯೆ ಎದುರಾಗಿರುವ ಬಗ್ಗೆ ಗ್ರಾಮಸ್ಥರು ಶಾಸಕರ ಗಮನ ಸೆಳೆದರು.
ಸಂಬಂಧಪಟ್ಟ ಇಲಾಖಾಧಿಕಾರಿಗಳನ್ನು ಸ್ಥಳದಲ್ಲಿಯೇ ದೂರವಾಣಿ ಮೂಲಕ ಸಂಪರ್ಕಿಸಿದ ಶಾಸಕ ಬೋಪಯ್ಯ ಅವರು ತಕ್ಷಣ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.
ಈ ಸಂದರ್ಭ ತಾ.ಪಂ ಸದಸ್ಯೆ ಕುಮುದ, ಗ್ರಾ.ಪಂ. ಉಪಾಧ್ಯಕ್ಷ ಭೀಮಯ್ಯ, ಪ್ರಮುಖರಾದ ಕೋಡಿರ ಪ್ರಸನ್ನ, ಉಮೇಶ್ ಅಪ್ಪಣ್ಣ, ತಿಮ್ಮಯ್ಯ ಕಾವೇರಪ್ಪ, ಮೇದಪ್ಪ, ಕುಶಾಲಪ್ಪ, ಎಂ.ಬಿ.ಜೋಯಪ್ಪ, ಗ್ರಾ.ಪಂ. ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ಹಾಜರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…