ಬಿಳಿನೆಲೆ : ಸ್ವಯಂಪ್ರೇರಿತ ಸ್ವಚ್ಚತಾ ಸೇವೆಯಿಂದ ಆರೋಗ್ಯ ಪೂರ್ಣ ಪರಿಸರ ನಿರ್ಮಾಣವಾಗುತ್ತದೆ.ಇದರಿಂದ ಭವಿಷ್ಯದ ಜೀವನವು ಸುಗಮವಾಗಲು ಸಾಧ್ಯ ಎಂದು ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶ್ರೀಕೃಷ್ಣ ಶರ್ಮ ಹೇಳಿದರು.
ಅವರು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ, ಕೆ.ವಿ.ಜಿ.ಕಾನೂನು ಮಹಾವಿದ್ಯಾಲಯ ಸುಳ್ಯ ಹಾಗೂ ಕಾನೂನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಸ್ವಚ್ಚತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೆಜಿವಿ ಕಾಲೇಜಿನ ವಸಂತ ಕುಮಾರ್, ಗೋಪಾಲಕೃಷ್ಣ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಣ ಶಿವರಾಮ ಯೇನೆಕಲ್ ಮುಖ್ಯಅತಿಥಿಗಳಾಗಿದ್ದರು.ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಕ್ಷೇಮಾಧಿಕಾರಿ ಟೀನಾ ಎಚ್.ಎಸ್, ಉಪನ್ಯಾಸಕ ಕೌಶಿಕ್ ವೇದಿಕೆಯಲ್ಲಿದ್ದರು.
ಸಮಾರಂಭದ ಬಳಿಕ ಎನ್ಎಸ್ಎಸ್ ವಿದ್ಯಾರ್ಥಿಗಳು ಶಾಲಾ ಆವರಣ, ರಸ್ತೆಯ ಇಕ್ಕೆಲೆಗಳಲ್ಲಿ ಸ್ವಚ್ಛತಾ ಸೇವೆ ನೆರವೇರಿಸಿದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…